ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಇಂದೂ ರಾಜ್ಯಕ್ಕೆ ಬರೋದು ಅನುಮಾನ ಎನ್ನಲಾಗಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡದ ಮುಂದೆ ಶರಣಾಗಲು ಪ್ರಜ್ವಲ್ ರೇವಣ್ಣಗೆ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ಇಂದು ರಾಜ್ಯಕ್ಕೆ ಬರೋದು ಅನುಮಾನ ಎನ್ನಲಾಗಿದೆ. ಕಳೆದ ಎರಡು ದಿನಗಳಿಂದ ಎಸ್ ಐಟಿ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಾದು ಕುಳಿತಿದ್ದಾರೆ.

ಏರ್ ಪೋರ್ಟ್ ನಲ್ಲಿ ಹದ್ದಿನಕಣ್ಣಿಟ್ಟಿರುವ ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ಹಿಡಿದು ಪ್ರಯಾಣಿಕರ ಲಿಸ್ಟ್ ತಪಾಸಣೆ ನಡೆಸುತ್ತಿದ್ದಾರೆ. ಯಾವುದೇ ವಿಮಾನದಲ್ಲಿ ಪ್ರಜ್ವಲ್ ಟಿಕೆಟ್ ಬುಕ್ ಆಗಿಲ್ಲ. ಹೀಗಾಗಿ ಇಂದು ರಾಜ್ಯಕ್ಕೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವುದು ಅನುಮಾನ ಎಂದು ಹೇಳಲಾಗುತ್ತಿದೆ.

Share.
Exit mobile version