ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ರೇವಣ್ಣ ಅವರ ವಿರುದ್ಧ ಈಗಾಗಲೇ ಎಸ್ಐಟಿ ತನಿಖೆ ಕೈಗೊಂಡಿದ್ದು ಈ ಕುಡಿದಂತೆ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ ಸಿಬಿಐ ತನಿಖೆಯು ಬೇಡ SIT ತನಿಖೆಯು ಬೇಡ ನ್ಯಾಯಾಂಗ ತನಿಖೆಯಾಗಲಿ ಎಂದು ಅಗ್ರಹಿಸಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಯಾವ ಸಿಬಿಐ ತನಿಖೆಯು ಬೇಡ SIT ತನಿಖೆಯು ಬೇಡ ಹೈಕೋರ್ಟ್ ಮೂಲಕ ನ್ಯಾಯಾಂಗ ತನಿಖೆಯಾಗಲಿ ಎಂದು HD ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಇದುವರೆಗೂ ಭಾರತಕ್ಕೆ ಬಂದಿಲ್ಲ. ಅಲ್ಲದೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೆ ರೇವಣ್ಣ ಅವರು ಕೂಡ ನ್ಯಾಯಾಂಗದ ಮೂಲಕ ಸತತವಾಗಿ ಹೋರಾಟ ಮಾಡುತ್ತಲೇ ಇದ್ದಾರೆ.

Share.
Exit mobile version