ಬೆಂಗಳೂರು: ಮೈಸೂರು(Mysore) ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದಲ್ಲಿ ಕಾವೇರಿ ನದಿಯಿಂದ 150 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮವನ್ನು ಸಿಎಂ ಹಮ್ಮಿಕೊಂಡಿದ್ದ ವೇಳೇಯಲ್ಲಿ ಬಟನ್ ಒತ್ತುವ ಮೂಲಕ ಸಿಎಂ ಯೋಜನೆಗೆ ಚಾಲನೆ ನೀಡಬೇಕಿತ್ತು.
ಆದರೆ, ಸಿಎಂ ಸಿದ್ದರಾಮಯ್ಯ ಒತ್ತಿದ ವೇಳೆ ಬಟನ್ ಚಾಲನೆಯಾಗಿಲ್ಲವಾಗಿತ್ತು ಆದರೆ ಅದು ಸರಿಯಾಗ ಕಾರ್ಯ ನಿರ್ವಹಣೆ ಮಾಡದ ಹಿನ್ನಲೆಯಲ್ಲಿ ದ್ಯುತ್ ಬಗ್ಗೆ ಮುನ್ನೆಚ್ಚರಿಕಾ ಕ್ರಮ ವಹಿಸದ ಚೆಸ್ಕಾಂ ಎಂಡಿ ಶ್ರೀಧರ್, ಅಂದಿನ ಕಾರ್ಯಕ್ರಮಕ್ಕೂ ಗೈರಾಗಿದ್ದರು, ಹೀಗಾಬಿ ಹಿನ್ನಲೆ ಕರ್ತವ್ಯಲೋಪ ಎಸಗಿದ ಹಿನ್ನಲೆ ಜೊತೆಗೆ ಸರ್ಕಾರ ಮುಜುಗರಕ್ಕೆ ಒಳಪಡುವ ಸನ್ನಿವೇಶ ಸೃಷ್ಟಿಸಿದ್ದಕ್ಕೆ ಅವರನ್ನು ಅಮಾನತ್ತು ಮಾಡಿ ಆದೇಶ ಮಾಡಿ ಹೊರಡಿಸಲಾಗಿದೆ.
ಮೈಸೂರು ಇವರ ಪತ್ರದಲ್ಲಿ ದಿನಾಂಕ: 24.01.2024ರಂದು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತಿನಮುಳುಸೋಗೆ ಗ್ರಾಮದ ಹತ್ತಿರ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆಗಳು ಹಾಗು ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆಗೆ ಸನ್ಮಾನ್ಯ ಮುಖ್ಯಮಂತ್ರಿರವರು ಆಗಮಿಸಿ, ಉದ್ಘಾಟನೆ ಕಾರ್ಯ ನೆರವೇರಿಸಿರುತ್ತಾರೆ. ಸನ್ಮಾನ್ಯರು ಕಾರ್ಯಕ್ರಮಕ್ಕೆ 'ಬಟನ್' ಒತ್ತುವ ಮೂಲಕ ಚಾಲನೆ ನೀಡಿದ್ದು ಅದು ಚಾಲನೆಯಾಗಿರುವುದಿಲ್ಲ.
ಮತ್ತು ಸಾರ್ವಜನಿಕ ಕಾರ್ಯಕ್ರಮವನ್ನು ಮೇಲ್ಕಂಡ ಬೃಹತ್ ಕಾರ್ಯಕ್ರಮದ ಲೋಕಾರ್ಪಣೆಗಾಗಿ ವಿದ್ಯುಕ್ತವಾಗಿ ಚಾಲನೆ ನೀಡುವ ಸಂದರ್ಭದಲ್ಲಿ ಅದು ಚಾಲನೆಯಾಗದೇ ಸನ್ಮಾನ್ಯರನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿರುತ್ತಾರೆ. ಸನ್ಮಾನ್ಯರು ಭಾಗವಹಿಸುವ ಕಾರ್ಯಕ್ರಮದ ಸ್ಥಳಗಳಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆಯ ಮುನ್ನೆಚ್ಚರಿಕಾ ಕ್ರಮಗಳನ್ನು ನಿರ್ವಹಿಸಲು ಸಿ.ಎನ್ ಶ್ರೀಧರ್, ಕೆ.ಎ.ಎಸ್ (ಸೂಪರ್ ಟೈಂ ಸೈಲ್) ಅಧಿಕಾರಿ, ವ್ಯವಸ್ಥಾಪಕ ನಿರ್ದೇಶಕರು, ಮೈಸೂರು ನಗರ ಮತ್ತು ಗ್ರಾಮಾಂತರ, ಚೆಸ್ಕಾಂ ಮೈಸೂರು ರವರಿಗೆ ಜಿಲ್ಲಾಧಿಕಾರಿಗಳು, ಮೈಸೂರು ಇವರ ಕಚೇರಿಯ ದಿನಾಂಕ: 23.01.2023ರ ಅಧಿಕೃತ ಜ್ಞಾಪನದ ಆದೇಶದಲ್ಲಿ ಸೂಚನೆ ನೀಡಲಾಗಿರುತ್ತದೆ. ಹೀಗಿದ್ದರೂ, ವ್ಯವಸ್ಥಾಪಕ ನಿರ್ದೇಶಕರು, ಮೈಸೂರು ನಗರ ಮತ್ತು ಗ್ರಾಮಾಂತರ, ಚೆಸ್ಕಾಂ ಮೈಸೂರು ರವರು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಖುದ್ದು ಹಾಜರಿದ್ದು ಯಾವುದೇ ಲೋಪ ಆದಾಗ್ಯೂ ಸದರಿಯವರು ಉಂಟಾಗದಂತೆ ವ್ಯವಸ್ಥಿತವಾಗಿ ಕರ್ತವ್ಯ ನಿರ್ವಹಿಸಬೇಕಿರುತ್ತದೆ. ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಿಲ್ಲ. ಮುಖ್ಯ ಮಂತ್ರಿಗಳು ಚಾಲನೆ ನೀಡಿದಾಕ್ಷಣ ಚಾಲನೆಗೊಳ್ಳದೇ ಸ್ಥಳದಲ್ಲಿ ಹಾಜರಿದ್ದ ಮಾಧ್ಯಮ, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುತ್ತದೆ.
ಮುಖ್ಯಮಂತ್ರಿರವರು ಭಾಗವಹಿಸುವ ಕಾರ್ಯಕ್ರಮದ ಸ್ಥಳದಲ್ಲಿ ಹಾಜರಿದ್ದು ವ್ಯವಸ್ಥಿತವಾಗಿ ಕಾರ್ಯಕ್ರಮಗಳು ಯಶಸ್ವಿಗೊಳಿಸಲು ಸಹಕಾರಿಯಾಗದೇ, ಅವರ ಕರ್ತವ್ಯದಲ್ಲಿ ಅಸಡ್ಡೆ ಮತ್ತು ನಿರ್ಲಕ್ಷತೆಯಿಂದಾಗಿ ಸರ್ಕಾರವನ್ನು ಮುಜುಗರಕ್ಕೆ ಒಳಪಡುವ ಸನ್ನಿವೇಶವನ್ನು ಸೃಷ್ಟಿಸಲು ಸಿ.ಎನ್ ಶ್ರೀಧರ್, ಕೆ.ಎ.ಎಸ್ (ಸೂಪರ್ ಟೈಂ ಸೈಲ್) ಅಧಿಕಾರಿ, ವ್ಯವಸ್ಥಾಪಕ ನಿರ್ದೇಶಕರು, ಮೈಸೂರು ನಗರ ಮತ್ತು ಗ್ರಾಮಾಂತರ, ಚೆಸ್ಕಾಂ ಮೈಸೂರು ರವರು ನೇರ ಕಾರಣಕರ್ತರಾಗಿರುತ್ತಾರೆ. ಇದರಿಂದ ಅವರ ಕಾರ್ಯವೈಖರಿ, ಕರ್ತವ್ಯ ನಿಷ್ಠೆ, ಶಿಷ್ಟಾಚಾರ ಮತ್ತು ಸಮಯಪುಜ್ಞೆಗೆ ಕನ್ನಡಿ ಹಿಡಿದಂತಿದೆ.
ಆದುದರಿಂದ ಸಿ.ಎನ್ ಶ್ರೀಧರ್, ಕೆ.ಎ.ಎಸ್ (ಸೂಪರ್ ಟೈಂ ಸೈಲ್) ಅಧಿಕಾರಿ, ವ್ಯವಸ್ಥಾಪಕ ನಿರ್ದೇಶಕರು, ಮೈಸೂರು ನಗರ ಮತ್ತು ಗ್ರಾಮಾಂತರ, ಚೆಸ್ಕಾಂ ಮೈಸೂರು ರವರು ಸ್ಥಳದಲ್ಲಿ ಹಾಜರಿಲ್ಲದೇ ಕರ್ತವ್ಯಲೋಪವೆಸಗಿರುವ ಸಂಬಂಧ ಮತ್ತು ಶಿಷ್ಟಾಚಾರ ಉಲ್ಲಂಘಿಸಿರುವ ಹಿನ್ನಲೆಯಲ್ಲಿ ಸದರಿಯವರ ವಿರುದ್ಧ ತತಕ್ಷಣವೇ ಸೂಕ್ತ ಕ್ರಮಕೈಗೊಳ್ಳುವಂತೆ ಕೋರಲಾದ ಪಸ್ತಾವನೆಯನ್ನು ಪರಿಶೀಲಿಸಲಾಯಿತು. ಸನ್ಮಾನ್ಯ ಮುಖ್ಯ ಮಂತ್ರಿಗಳ ಕಾರ್ಯಕ್ರಮಕ್ಕೆ ಹಾಜರಾಗಿ ಸದರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸದೇ ತೀವ್ರ ಮುಜುಗರ ಉಂಟುಮಾಡುವ ಹಾಗೂ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುವುದು ಜಿಲ್ಲಾಧಿಕಾರಿಯವರ ವರದಿಯಂತೆ ಸ್ಪಷ್ಟವಾಗಿ ಕಂಡುಬರುತ್ತದೆ. ಸದರಿ ಅಧಿಕಾರಿಯವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಅಮಾನತ್ತುಪಡಿಸಲು ತೀರ್ಮಾನಿಸಲಾಗಿದೆ ಅಂಥ ತಿಳಿಸಿದೆ.