ಮಡಿಕೇರಿ : ಮಡಿಕೇರಿ, ವಿದ್ಯುತ್ ಉಪ-ಕೇಂದ್ರದಿಂದ 66/11 ಕೆವಿ ಹೊರಹೋಗುವ ಓಂಕಾರೇಶ್ವರ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಫೆಬ್ರವರಿ, 08 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ, ಗೌಡಸಮಾಜ, ಕನ್ನಂಡಬಾಣೆ, ಗಣಪತಿ ದೇವಸ್ಥಾನ ಚೈನ್ಗೇಟ್, ಓಂಕಾರೇಶ್ವರ ರಸ್ತೆ, ವೈವಾಸ್ ಆಸ್ಪತ್ರೆ, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.
ಫೆ.9 ರಂದು ವಿದ್ಯುತ್ ವ್ಯತ್ಯಯ
ಶನಿವಾರಸಂತೆ 66 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಶಕ್ತಿ ಪರಿವರ್ತಕದ ನಿರ್ವಹಣೆ ಕಾರ್ಯವನ್ನು ಕೆಪಿಟಿಸಿಎಲ್ ಅವರು ನಿರ್ವಹಿಸಬೇಕಿರುವುದರಿಂದ ಫೆಬ್ರವರಿ, 09 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಅದ್ದರಿಂದ ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಆಲೂರು, ಗೋಪಲ್ಪುರ, ಬಲ್ಲಾರಳ್ಳಿ, ಕಿತ್ತೂರು ಗೌಡಳ್ಳಿ, ನಿಡ್ತ, ಅಂಕನಹಳ್ಳಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.
ಹಾಗೆಯೇ 66/11 ಕೆವಿ ಮಡಿಕೇರಿ, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಗದ್ದಿಗೆ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಫೆಬ್ರವರಿ, 09 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಅದ್ದರಿಂದ, ಸಂಪಿಗೆಕಟ್ಟೆ, ಅಜಾದ್ನಗರ, ತ್ಯಾಗರಾಜ್ ಕಾಲೋನಿ, ಭಗವತಿನಗರ, ಮಾರುಕಟ್ಟೆ, ಕಾನ್ವೆಂಟ್ ಜಂಕ್ಷನ್ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
‘ರಾಜ್ಯ ಸರ್ಕಾರ’ದಿಂದ ಮಹಾ ಯಡವಟ್ಟು: ‘ಪುನೀತ್ ರಾಜ್ ಕುಮಾರ್ ರಸ್ತೆ ನಾಮಕರಣ ಬ್ಯಾನರ್’ನಲ್ಲಿ ಅಪ್ಪು ಪೋಟೋವೇ ಮಿಸ್
‘ಪ್ರಾಣ ಹೋದರೂ ಸರಿ, ಅಧಿಕಾರಕ್ಕೆ ಬಂದ ದಿನವೇ ಈ 2 ಯೋಜನೆ ಜಾರಿಗೆ’ : ಸಿದ್ದರಾಮಯ್ಯ