Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಎಲ್ಲಾ ಭಾರತೀಯರಂತೆ ನನಗೂ ಕೂಡ ಕೊಹ್ಲಿ ನೆಚ್ಚಿನ ಕ್ರಿಕೆಟಿಗ : DGMO ರಾಜೀವ್ ಘಾಯ್ ಹೇಳಿಕೆ ವೈರಲ್

12/05/2025 6:04 PM

BREAKING: ಭಾರತ-ಪಾಕ್ ಡಿಜಿಎಂಒ ಮಟ್ಟದ ಮಾತುಕತೆ ಅಂತ್ಯ: ಕದನ ವಿರಾಮ ಉಲ್ಲಂಘಿಸಲ್ಲವೆಂದ ಪಾಕಿಸ್ತಾನ

12/05/2025 5:54 PM

ದಯವಿಟ್ಟು ಇಂತಹ ಪ್ರೊಪಗಾಂಡ ಪೋಸ್ಟ್‌ಗಳನ್ನು ನಂಬಿ ಮೋಸ ಹೋಗದಿರಿ: ರಾಜ್ಯ ಸರ್ಕಾರ ಎಚ್ಚರಿಕೆ

12/05/2025 5:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೆಸರು ಪ್ರಧಾನ ಮಂತ್ರಿ ಆವಾಸ್ ಯೋಜನೆ: ಕೇಂದ್ರ ಕೊಡೋದು ಮಾತ್ರ ಬರೀ 12 ಸಾವಿರ ರೂಪಾಯಿ : ಸಿಎಂ ಸಿದ್ದರಾಮಯ್ಯ
KARNATAKA

ಹೆಸರು ಪ್ರಧಾನ ಮಂತ್ರಿ ಆವಾಸ್ ಯೋಜನೆ: ಕೇಂದ್ರ ಕೊಡೋದು ಮಾತ್ರ ಬರೀ 12 ಸಾವಿರ ರೂಪಾಯಿ : ಸಿಎಂ ಸಿದ್ದರಾಮಯ್ಯ

By kannadanewsnow0701/04/2024 6:51 PM

ತಿ.ನರಸೀಪುರ: ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಫಲಾನುಭವಿಗೆ ಕೊಡುವ ಹಣ, ಬಳಿಕ ಅದೇ ಫಲಾನುಭವಿಯಿಂದ GST ರೂಪದಲ್ಲಿ ವಸೂಲಿ ಮಾಡುವ ಹಣದ ಲೆಕ್ಕಾಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗ ಸಭೆಯಲ್ಲಿ ಸಾರ್ವಜನಿಕರ ಮುಂದೆ ಸೊಗಸಾಗಿ ತಮ್ಮದೇ ಶೈಲಿಯಲ್ಲಿ ಮಂಡಿಸಿದರು.

ಈ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರ ಒಂದೂವರೆ ಲಕ್ಷ ರೂಪಾಯಿ ಕೊಡುತ್ತದೆ. ರಾಜ್ಯ ಸರ್ಕಾರ ಒಂದು ಲಕ್ಷ 28 ಸಾವಿರ ಕೊಡುತ್ತಿತ್ತು. ಉಳಿದ 3.80 ಲಕ್ಷ ರೂಪಾಯಿಯನ್ನು ಫಲಾನುಭವಿ ಕೊಡಬೇಕು. ಆಗ ಅವರಿಗೆ ಮನೆ ಸಿಗುತ್ತದೆ.

ಆದರೆ ಕೇಂದ್ರ ಸರ್ಕಾರ ಪ್ರತಿ ಮನೆಗೆ 18% GST ವಸೂಲಿ ಮಾಡುತ್ತದೆ. ಅಂದರೆ ಪ್ರತಿ ಕೊಳೆಗೇರಿ ಮನೆಗೆ 1 ಲಕ್ಷದ 38 ಸಾವಿರ ರೂಪಾಯಿಯನ್ನು GST ಹೆಸರಲ್ಲಿ ಕೇಂದ್ರ ಸರ್ಕಾರ ವಾಪಾಸ್ ಪಡೆದುಕೊಳ್ಳುತ್ತದೆ.

ಅಂದರೆ, ಒಂದೂವರೆ ಲಕ್ಷ ರೂಪಾಯಿ ಸಹಾಯಧನ ಕೊಟ್ಟು, ಅದರಲ್ಲಿ ಒಂದು ಲಕ್ಷದ 38 ಸಾವಿರ ರೂಪಾಯಿ ವಾಪಾಸ್ ವಸೂಲಿ ಮಾಡಿದರೆ ಕೇಂದ್ರ ಸರ್ಕಾರ ಎಷ್ಟು ಕೊಟ್ಟಂಗಾಯ್ತು? ಬರೀ 12 ಸಾವಿರ ರೂಪಾಯಿ ಮಾತ್ರ. ಬರೀ 12 ಸಾವಿರ ಕೊಟ್ಟು ಅದಕ್ಕೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು ಹೆಸರಿಟ್ಟಿದ್ದಾರೆ.

ಕೊಳೆಗೇರಿ ನಿವಾಸಿಗಳಿಂದಲೂ 18% GST ಸುಲಿಗೆ ಮಾಡುವ ಈ ಕ್ರಮ ನನಗೆ ಬಹಳ ಬೇಸರ ಆಯಿತು. ಹೀಗಾಗಿ ಪ್ರತಿ ಫಲಾನುಭವಿಗಳು ಕಟ್ಟಬೇಕಿದ್ದ ಅವರ ಪಾಲಿನ 3 ಲಕ್ಷ 80 ಸಾವಿರ ರೂಪಾಯಿಯಲ್ಲಿ ಒಂದು ಲಕ್ಷ ಮಾತ್ರ ಅವರಿಂದ ಕಟ್ಟಿಸಿಕೊಂಡು ಉಳಿದ ಹಣವನ್ನು ನಮ್ಮ ಸರ್ಕಾರದಿಂದಲೇ ಕಟ್ಟಿಸಲು ನಾನು ನಿರ್ಧರಿಸಿದೆ.

ಹೀಗಾಗಿ ಪ್ರತಿ ಕೊಳೆಗೇರಿ ಮನೆಗೆ 4 ಲಕ್ಷ ರೂಪಾಯಿಗೂ ಹೆಚ್ಚಿನ ಹಣವನ್ನು ನಮ್ಮ ರಾಜ್ಯ ಸರ್ಕಾರ ಕಟ್ಟತ್ತೆ. ಕೇಂದ್ರ ಸರ್ಕಾರದ ಪಾಲು ಕೇವಲ 12 ಸಾವಿರ ರೂಪಾಯಿ. ಆದರೆ ಹೆಸರು ಮಾತ್ರ ಪ್ರಧಾನ ಮಂತ್ರಿ ಆವಾಸ್ ಯೋಜನೆ.

ಇದು ವಂಚನೆ ಅಲ್ವಾ ? ಇದು ಅನ್ಯಾಯ ಅಲ್ವಾ ? ಈ ಅನ್ಯಾಯಕ್ಕೆ ಮೋದಿ ಸರ್ಕಾರಕ್ಕೆ ಮತ ಹಾಕಬೇಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಹಾಗೆಯೇ ರಾಜ್ಯದಿಂದ ಕೇಂದ್ರಕ್ಕೆ ಹೋಗುವ ತೆರಿಗೆ ಹಣ 4 ಲಕ್ಷ ಕೋಟಿ. ಇದರಲ್ಲಿ ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 53 ಸಾವಿರ ಕೋಟಿ. ಇದು ಅನ್ಯಾಯ ಅಲ್ವಾ? ಈ ಅನ್ಯಾಯಕ್ಕೆ ಬಿಜೆಪಿಗೆ ಮತ ಹಾಕ್ಬೇಕಾ ಎಂದು ಪ್ರಶ್ನಿಸಿದರು.

ರಾಜ್ಯಕ್ಕೆ ಪ್ರವಾಹ ಬಂದಾಗ ಮೋದಿ ಬರಲಿಲ್ಲ. ರಾಜ್ಯಕ್ಕೆ ಪ್ರವಾಹ ಬಂದಾಗ ಮೋದಿ ಬರಲಿಲ್ಲ. ಈಗ ಓಟು ಕೇಳೋಕೆ ಮಾತ್ರ ಬರುತ್ತಿದ್ದಾರೆ. ಈ ಚಂದಕ್ಕೆ ಮೋದಿಗೆ ಓಟು ಹಾಕ್ಬೇಕಾ ಎಂದು ವ್ಯಂಗ್ಯದಿಂದ ಪ್ರಶ್ನಿಸಿದರು.

ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿ ಕೇಂದ್ರದ ಮೋದಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಅನ್ನು ಬಲಪಡಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.‌

000 Pradhan Mantri Awas Yojana: Centre gives only Rs 12 says Siddaramaiah ಹೆಸರು ಪ್ರಧಾನ ಮಂತ್ರಿ ಆವಾಸ್ ಯೋಜನೆ: ಕೇಂದ್ರ ಕೊಡೋದು ಮಾತ್ರ ಬರೀ 12 ಸಾವಿರ ರೂಪಾಯಿ : ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ದಯವಿಟ್ಟು ಇಂತಹ ಪ್ರೊಪಗಾಂಡ ಪೋಸ್ಟ್‌ಗಳನ್ನು ನಂಬಿ ಮೋಸ ಹೋಗದಿರಿ: ರಾಜ್ಯ ಸರ್ಕಾರ ಎಚ್ಚರಿಕೆ

12/05/2025 5:45 PM1 Min Read

BIG NEWS : ಕುಮಾರಸ್ವಾಮಿವರು ಆರೋಗ್ಯವಾಗಿದ್ದು, ಯಾರು ಆತಂಕ ಪಡುವುದು ಬೇಡ : ನಿಖಿಲ್

12/05/2025 5:45 PM1 Min Read

ರಾಜ್ಯ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ 2 ತಿಂಗಳಿಂದ ವೇತನವಿಲ್ಲ: ಪಾವತಿಗೆ ಸರ್ಕಾರಕ್ಕೆ ‘ಸಂಘ ಮನವಿ’

12/05/2025 5:43 PM1 Min Read
Recent News

BIG NEWS : ಎಲ್ಲಾ ಭಾರತೀಯರಂತೆ ನನಗೂ ಕೂಡ ಕೊಹ್ಲಿ ನೆಚ್ಚಿನ ಕ್ರಿಕೆಟಿಗ : DGMO ರಾಜೀವ್ ಘಾಯ್ ಹೇಳಿಕೆ ವೈರಲ್

12/05/2025 6:04 PM

BREAKING: ಭಾರತ-ಪಾಕ್ ಡಿಜಿಎಂಒ ಮಟ್ಟದ ಮಾತುಕತೆ ಅಂತ್ಯ: ಕದನ ವಿರಾಮ ಉಲ್ಲಂಘಿಸಲ್ಲವೆಂದ ಪಾಕಿಸ್ತಾನ

12/05/2025 5:54 PM

ದಯವಿಟ್ಟು ಇಂತಹ ಪ್ರೊಪಗಾಂಡ ಪೋಸ್ಟ್‌ಗಳನ್ನು ನಂಬಿ ಮೋಸ ಹೋಗದಿರಿ: ರಾಜ್ಯ ಸರ್ಕಾರ ಎಚ್ಚರಿಕೆ

12/05/2025 5:45 PM

BIG NEWS : ಕುಮಾರಸ್ವಾಮಿವರು ಆರೋಗ್ಯವಾಗಿದ್ದು, ಯಾರು ಆತಂಕ ಪಡುವುದು ಬೇಡ : ನಿಖಿಲ್

12/05/2025 5:45 PM
State News
KARNATAKA

ದಯವಿಟ್ಟು ಇಂತಹ ಪ್ರೊಪಗಾಂಡ ಪೋಸ್ಟ್‌ಗಳನ್ನು ನಂಬಿ ಮೋಸ ಹೋಗದಿರಿ: ರಾಜ್ಯ ಸರ್ಕಾರ ಎಚ್ಚರಿಕೆ

By kannadanewsnow0912/05/2025 5:45 PM KARNATAKA 1 Min Read

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಭಾರತ ಮತ್ತು ಪಾಕಿಸ್ತಾನ ಉದ್ವಿಗ್ನತೆಯ ನಡುವೆ ತರಾವರಿ ವೀಡಿಯೋಗಳು ಹರಿದಾಡುತ್ತಿದ್ದಾವೆ. ದಯವಿಟ್ಟು ಇಂತಹ ಪ್ರೊಪಗಾಂಡ ಪೋಸ್ಟ್…

BIG NEWS : ಕುಮಾರಸ್ವಾಮಿವರು ಆರೋಗ್ಯವಾಗಿದ್ದು, ಯಾರು ಆತಂಕ ಪಡುವುದು ಬೇಡ : ನಿಖಿಲ್

12/05/2025 5:45 PM

ರಾಜ್ಯ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ 2 ತಿಂಗಳಿಂದ ವೇತನವಿಲ್ಲ: ಪಾವತಿಗೆ ಸರ್ಕಾರಕ್ಕೆ ‘ಸಂಘ ಮನವಿ’

12/05/2025 5:43 PM

ಅರಣ್ಯ ಇಲಾಖೆಯಿಂದ ನೆಟ್ಟ ಸಸಿಗಳಿಗೆ ಜಿಯೋ ಟ್ಯಾಗ್: ಸಚಿವ ಈಶ್ವರ್ ಖಂಡ್ರೆ

12/05/2025 5:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.