ಹಾಸನ : ಪ್ರಜ್ವಲ್ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 8ನೇ ಆರೋಪಿ ಆಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡನನ್ನು ನಾಳೆ ಸಂಜೆ 5:00 ವರೆಗೆ ಎಸ್ಐಟಿಗೆ ನೀಡಿ ಹಾಸನದ ಐದನೇ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.
ಹೌದು ಕಳೆದ ಹಲವು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ವಕೀಲ ದೇವರಾಜ ಗೌಡನನ್ನು ಇಂದು ಎಸ್ಐಟಿ ಅಧಿಕಾರಿಗಳು ಅಕಿರದೇವರಾಜೇಗೌಡರನ್ನು ಹಾಸನಾದ 5ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್, ನಾಳೆ ಸಂಜೆ 5:00 ಗಂಟೆವರೆಗೆ ದೇವರಾಜೇಗೌಡ ಎಸ್ ಐ ಟಿ ಕಸ್ಟಡಿಗೆ ನೀಡಿ ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಈ ಆದೇಶ ನೀಡಿದೆ. ಹಾಗಾಗೀ ಇದೀಗ ವಿಚಾರಣೆ ನಡೆಸಲು ಎಸ್ ಐ ಟಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದಾರೆ.