ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪವೊಂದನ್ನು ಮಾಡಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಡಿ. ರೇವಣ್ಣ ನಡುವೆ ಒಪ್ಪಂದ ಆಗಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ. ರೇವಣ್ಣ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ ಅಂತ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಸರ್ಕಾರ ಯಾಕೆ ಪ್ರಜ್ವಲ್ ವಿರುದ್ಧ ಎಫ್ ಐಆರ್ ದಾಖಲಿಸಲಿಲ್ಲ. ಪ್ರಜ್ವಲ್ ವಿದೇಶಕ್ಕೆ ಓಡಿ ಹೋಗಲು ಏಕೆ ಬಿಟ್ರು. ರಾಜ್ಯದ ಪೊಲೀಸರು ಪ್ರಜ್ವಲ್ ನನ್ನು ಅರೆಸ್ಟ್ ಮಾಡಬೇಕಿತ್ತು ಎಂದಿದ್ದಾರೆ.

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದು ಕೇಂದ್ರ ಸರ್ಕಾರಕ್ಕೆ ಕನಸು ಬೀಳುತ್ತಾ? ರಾಜ್ಯ ಸರ್ಕಾರ ಏಕೆ ಎಫ್ ಐ ದಾಖಲಿಸಿ ಬಂದಿಸಿಲ್ಲ? ನಾವು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಪ್ರಜ್ವಲ್ ರೇವಣ್ಣ ಪ್ರಕರಣ ನಮಗೆ ಎಫೆಕ್ಟ್ ಆಗಲ್ಲ. ತಪ್ಪು ಮಾಡಿದವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

Share.
Exit mobile version