ಮೈಸೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮೈಸೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸಿದ್ದಾರೆ ಈಗಾಗಲೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿಯವರು ಕೆಲವೇ ಕ್ಷಣಗಳಲ್ಲಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಯೋಜಿಸಿದಂತ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಆದರೆ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಹಾಗೂ ಆಸನ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ಗೌಡ ನಡುವೆ ಇರುವಂತಹ ಮನಸು ಇದೀಗ ಇಲ್ಲಿಯೂ ಮುಂದುವರೆದಿದೆ.
ಪ್ರಧಾನಿ ಮೋದಿ ಅವರ ಸಮಾವೇಶದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಪ್ರಥಮ ಗೌಡ ಮುನಿಸುವ ಇದೀಗ ಮುಂದುವರೆದಿದೆ ವೇದಿಕೆ ಮೇಲೆ ಎಲ್ಲರನ್ನು ಮಾತನಾಡಿಸಿದ್ದ ಪ್ರಜ್ವಲ್ ರೇವಣ್ಣ ಪ್ರಥಮ್ ಗೌಡರನ್ನು ಮಾತನಾಡಿಸಿದೆ ಮುಂದೆ ಸಾಗಿರುವ ಘಟನೆ ನಡೆಯಿತು. ತಮ್ಮ ತಂದೆ hd ರೇವಣ್ಣ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಸುಮಲತಾ, ಸಿಟಿ ರವಿ, ಜಿ ಟಿ ದೇವೇಗೌಡ, ಹೀಗೆ ಎಲ್ಲರನ್ನೂ ಮಾತನಾಡಿಸಿದ ಪ್ರಜ್ವಲ್ ಪ್ರೀತಮ್ ಗೌಡರನ್ನು ಮಾತ್ರ ನೋಡಿದಂತೆ ತೆರಳಿರುವ ಘಟನೆ ನಡೆಯಿತು.
ಮೈಸೂರಿಗೆ ಪ್ರಧಾನಿ ಆಗಮನ
ಮೈಸೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ. ಭೂಪಾಲ್ ಇಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಇದೀಗ ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಸಾನ್ ಮಂತ್ರಿ ನರೇಂದ್ರ ಮೋದಿ ಬಂದಿಳಿದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಿಜೆಪಿ ನಾಯಕರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಕೆಲವೇ ಕ್ಷಣಗಳಲ್ಲಿ ಮೋದಿ ಅವರು ಸಮಾವೇಶದ ಸ್ಥಳಕ್ಕೆ ತೆರಳಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಈ ಒಂದು ಸಮಾವೇಶದಲ್ಲಿ ಪ್ರಧಾನಿ ಮೋದಿಯವರು ಲೋಕಸಭೆ ಚುನಾವಣೆ ಮತ ಬೇಟೆ ನಡೆಸಲಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಈ ಒಂದು ಭರತ್ ಸಮಾವೇಶ ನಡೆಯಲಿದೆ.