Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಪ್ರಜ್ವಲ್ ರೇವಣ್ಣ ‘ರಾಸಲೀಲೆ ವೀಡಿಯೋ’ ಕೇಸ್: ಪ್ರಕರಣವನ್ನು ‘SIT ತನಿಖೆ’ಗೆ ವಹಿಸಿ ‘ರಾಜ್ಯ ಸರ್ಕಾರ’ ಅಧಿಕೃತ ಆದೇಶ
KARNATAKA

BIG NEWS: ಪ್ರಜ್ವಲ್ ರೇವಣ್ಣ ‘ರಾಸಲೀಲೆ ವೀಡಿಯೋ’ ಕೇಸ್: ಪ್ರಕರಣವನ್ನು ‘SIT ತನಿಖೆ’ಗೆ ವಹಿಸಿ ‘ರಾಜ್ಯ ಸರ್ಕಾರ’ ಅಧಿಕೃತ ಆದೇಶ

By kannadanewsnow0928/04/2024 3:13 PM
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಎನ್ನಲಾದಂತ ರಾಸಲೀಲೆ ಪ್ರಕರಣವನ್ನುಎಸ್ ಐಟಿ ತನಿಖೆಗೆ ವಹಿಸಿ ಅಧಿಕೃತ ಆದೇಶ ಮಾಡಲಾಗಿದೆ. ಅಲ್ಲದೇ ಸಿಐಡಿಯ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ ಆದೇಶಿಸಿದೆ.

ಇಂದು ಈ ಸಂಬಂಧ ಆದೇಶವನ್ನು ಹೊರಡಿಸಲಾಗಿದ್ದು,  ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೋ ಚಿತ್ರೀಕರಣವು ಮಾಧ್ಯಮಗಳಲ್ಲಿ ಪಚಾರವಾಗಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶ ನೀಡಬೇಕೆಂದು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ರವರು ಕೋರಿರುತ್ತಾರೆ ಎಂದಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್‌ ಮೊಕದ್ದಮೆ ಸಂಖ್ಯೆ: 107/2024 ಕಲಂ 354A, 354D, 506, 509 ಐಪಿಸಿ ರಡಿ ದಿನಾಂಕ:28.04.2024ರಂದು ಪ್ರಕರಣವು ದಾಖಲಾಗಿರುತ್ತದೆ ಎಂದು ಹೇಳಿದೆ.

ಈ ಹಿನ್ನೆಲೆಯಲ್ಲಿ ಪುಸ್ತಾವನೆಯನ್ನು ಪರಿಶೀಲಿಸಲಾಗಿ, ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿ, ಈ ಕೆಳಕಂಡಂತೆ ಆದೇಶಿಸಲಾಗಿದೆ ಎಂದು ತಿಳಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಹಾಗೂ ಈ ಸಂಬಂಧ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್‌ ಠಾಣೆಯ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ:107/2024 ಕಲಂ 354A, 354D, 506, 509 ಐಪಿಸಿ ರಡಿ ದಾಖಲಾಗಿರುವ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಿ ಸರ್ಕಾರವು ಆದೇಶಿಸಿದೆ ಎಂದಿದೆ.

1.ಬಿಜಯ ಕುಮಾರ್ ಸಿಂಗ್, ಐಪಿಎಸ್. ಅವರ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ, ಬೆಂಗಳೂರು- ಮುಖ್ಯಸ್ಥರು
2.ಸುಮನ್ ಡಿ ಪೆನ್ನೇಕರ್, ಐಪಿಎಸ್, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರು, ಪೊಲೀಸ್‌ ಪ್ರಧಾನ ಕಛೇರಿ, ಬೆಂಗಳೂರು- ಸದಸ್ಯರು
3. ಸೀಮಾ ಲಾಠ‌್ಕರ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಮೈಸೂರು ಜಿಲ್ಲೆ- ಸದಸ್ಯರು

ಈ ಪ್ರಕರಣದ ಕುರಿತು ರಾಜ್ಯದ ಇತರೆ ಪೊಲೀಸ್‌ ಠಾಣೆಗಳಲ್ಲಿ ದಾಖಲಾದ | ದಾಖಲಾಗಬಹುದಾದ ಪಕರಣಗಳನ್ನು ಡಿಜಿ & ಐಜಿಪಿ ರವರು ಈ ವಿಶೇಷ ತನಿಖಾ ತಂಡ (Special Investigation Team) ಕ್ಕೆ ವರ್ಗಾಯಿಸುವುದು ಹಾಗೂ ವಿಶೇಷ ತನಿಖಾ ತಂಡಕ್ಕೆ ಪ್ರಕರಣದ ತನಿಖೆಗಾಗಿ ಇತರೆ ಸದಸ್ಯರುಗಳ ಅವಶ್ಯವಿದ್ದಲ್ಲಿ ಡಿಜಿ & ಐಜಿಪಿ ರವರ ಅನುಮೋದನೆಯೊಂದಿಗೆ ತನಿಖಾ ತಂಡಕ್ಕೆ ಸೇರಿಸಿಕೊಳ್ಳುವುದು ಎಂದು ಹೇಳಿದೆ.

ವಿಶೇಷ ತನಿಖಾ ತಂಡವು (Special Investigation Team) ಸಿಐಡಿಯಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳುವುದು. ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ, ರವರ ಮೇಲ್ವಿಚಾರಣೆಯಲ್ಲಿ ಈ ವಿಶೇಷ ತನಿಖಾ ತಂಡ (Special Investigation Team) ವು ಕಾರ್ಯನಿರ್ವಹಿಸುವುದು. ಎಸ್‌ಐಟಿ ತಂಡವು ಈ ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ, ವರದಿಯನ್ನು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರು, ಬೆಂಗಳೂರು ರವರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸತಕ್ಕದ್ದು ಎಂದು ತಿಳಿಸಿದೆ.

ಕಾಂಗ್ರೆಸ್ ರಾಜಕುಮಾರ ನಮ್ಮ ಮಹಾರಾಜರನ್ನ ಅವಮಾನಿಸ್ತಾರೆ, ನವಾಬರ ದೌರ್ಜನ್ಯ ಮರೆತು ಬಿಡ್ತಾರೆ : ಪ್ರಧಾನಿ ಮೋದಿ

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಮೋದಿಯವರೇ ಇದರ ಬಗ್ಗೆ ನಿಮ್ಮ ಮೌನವೇಕೆ? – ಮಂಜುಳಾ ನಾಯ್ಡು ಪ್ರಶ್ನೆ

Share. Facebook Twitter LinkedIn WhatsApp Email

Related Posts

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

03/05/2026 8:36 PM2 Mins Read

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM1 Min Read

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM1 Min Read
Recent News

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM

ಭಾರತದಲ್ಲಿ ಹೆಚ್ಚುತ್ತಿದೆ ‘ಸ್ಲೀಪ್ ಡಿವೋರ್ಸ್’ ಕ್ರೇಜ್: ದಂಪತಿಗಳು ಪ್ರತ್ಯೇಕವಾಗಿ ಮಲಗಲು ಬಯಸುತ್ತಿರುವುದೇಕೆ?

03/05/2026 9:01 PM
State News
KARNATAKA

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

By kannadanewsnow0903/05/2026 8:36 PM KARNATAKA 2 Mins Read

ಮಂಡ್ಯ : ಜಿಲ್ಲೆಯಲ್ಲಿನ ಪುಸ್ತಕದ ಮನೆಯೊಂದು ಜಿಲ್ಲೆ ಮತ್ತು ರಾಜ್ಯವನ್ನು ದಾಟಿ ರಾಷ್ಟ್ರದ ರಾಜಧಾನಿ ದೆಹಲಿವರೆವಿಗೂ ತಲುಪಿರುವುದು ಶ್ಲಾಘನೀಯ ಕಾರ್ಯವೆಂದು…

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.