Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮ್ಯಾನ್ಮಾರ್‌ನಲ್ಲಿ ಭೀಕರ ಸ್ಫೋಟ: ಗಣಿಗಾರಿಕೆಯ ಸ್ಫೋಟಕಗಳಿದ್ದ ಉಗ್ರಾಣದಲ್ಲಿ ಅವಘಡ, 45ಕ್ಕೂ ಹೆಚ್ಚು ಮಂದಿ ಸಾವು!

Wi-Fi Radiation: ವೈ-ಫೈ ವಿಕಿರಣ ನಿಮ್ಮ ಆರೋಗ್ಯಕ್ಕೆ ಕಣ್ಣಿಗೆ ಕಾಣದ ಆಪತ್ತೇ? ಇಲ್ಲಿದೆ ಆಘಾತಕಾರಿ ಮಾಹಿತಿ

Oral Sex: ಓರಲ್ ಸೆಕ್ಸ್ ನಿಜಕ್ಕೂ ಸುರಕ್ಷಿತವೇ? ಇಲ್ಲಿದೆ ಬೆಂಗಳೂರಿನ ವೈದ್ಯರು ನೀಡಿದ ಎಚ್ಚರಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂದುಕೊಂಡಂತೆ ಇಂದು ಪ್ರಜ್ವಲ್ ಬೆಂಗಳೂರಿಗೆ ಬರಬೇಕಿತ್ತು, 4 ದಿನಗಳ ಹಿಂದೆ ಟಿಕೇಟ್ ಕ್ಯಾನ್ಸಲ್ ಮಾಡಿದ್ದೇಕೆ?
KARNATAKA

ಅಂದುಕೊಂಡಂತೆ ಇಂದು ಪ್ರಜ್ವಲ್ ಬೆಂಗಳೂರಿಗೆ ಬರಬೇಕಿತ್ತು, 4 ದಿನಗಳ ಹಿಂದೆ ಟಿಕೇಟ್ ಕ್ಯಾನ್ಸಲ್ ಮಾಡಿದ್ದೇಕೆ?

By ಸುರೇಶ್‌

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಇದೀಗ ವಿದೇಶದಲ್ಲಿದ್ದು ಅಂದುಕೊಂಡಂತೆ ಆಗಿದ್ದರೆ ಇಂದು ಬೆಂಗಳೂರಿಗೆ ಪ್ರಜ್ವಲ್ ಆಗಮಿಸಬೇಕಿತ್ತು, ಆದರೆ ನಾಲ್ಕು ದಿನಗಳ ಹಿಂದೆ ಟಿಕೆಟ್ ಬುಕ್ ಮಾಡಿದ್ದನ್ನು ಮತ್ತೆ ಕ್ಯಾನ್ಸಲ್ ಮಾಡಿದ್ದಾರೆ. ಜರ್ಮನಿಯಿಂದ ಬೆಂಗಳೂರಿಗೆ ಲೂಫ್ತಾನ್ಸ ಏರ್ಲೈನ್ಸ್ ಮೂಲಕ ಆಗಮಿಸಬೇಕಾಗಿತ್ತು. ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಮೇ 15 ಅಂದರೆ ಇಂದು ಟಿಕೆಟ್ ಬುಕ್ ಮಾಡಿದ್ದನ್ನು ಕ್ಯಾನ್ಸಲ್ ಮಾಡಿದ್ದಾರೆ.

ಕಳೆದ 15 ದಿನಗಳ ಹಿಂದೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕಾರಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ವಿದೇಶದಲ್ಲೆ ಇದ್ದುಕೊಂಡು ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಈ ಕುರಿತಂತೆ ಎಸ್ಐಟಿ ಹಲವಾರು ಬಾರಿ ನೋಟಿಸ್ ನೀಡಿದರು ವಿಚಾರಣೆಗೆ ಅವರು ಹಾಜರಾಗಲಿಲ್ಲ.

ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ಸಿಐಡಿ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಮೊದಲಿಗೆ ಬ್ಲೂ ಕಾರ್ನರ್ ನೋಟಿಸ್ ನೀಡಿತ್ತು. ಅದಕ್ಕೂ ಯಾವುದೇ ರೀತಿಯಾಗಿ ಸ್ಪಂದಿಸದೆ ಇರುವ ಕಾರಣ ನಂತರ ಇತ್ತೀಚಿಗೆ ರೆಡ್ ಕಾರ್ನರ್ ನೋಟಿಸ್ ಕೂಡ ನೀಡಲಾಯಿತು.ಈ ಮೂಲಕ ಇಂಟರ್ ಪೋಲ್ ಪ್ರಜ್ವಲ್ ರೇವಣ್ಣ ಅವರ ಚಲನ ವಲನ ಹಾಗೂ ಅವರು ಎಲ್ಲಿದ್ದಾರೆ ಏನು ಮಾಡುತ್ತಿದ್ದಾರೆ ಅವರ ಚಟುವಟಿಕೆಗಳ ಮೇಲೆ ನಿಗಾ ಇಡುವ ಒಂದು ನೋಟಿಸ್ ಆಗಿದೆ.

ಸದ್ಯ ಪ್ರಜ್ವಲ್ ಜರ್ಮನಿಯ ಮ್ಯುನಿಚ್ ಎಂಬ ನಗರದಲ್ಲಿ ವಾಸ್ತವ್ಯ ಹೂಡಿದ್ದು, ರಾಜ್ಯದಲ್ಲಿ ಎಸ್ಐಟಿ ಅವರು ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದರ ಮೇಲೆ ಅವರು ಭಾರತಕ್ಕೆ ವಾಪಸ್ಸಾಗುವ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಅಷ್ಟಿಲ್ಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೂಡ ಸೊಸೈಟಿ ಅಧಿಕಾರಿಗಳು ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಆಪ್ತರ ಇಬ್ಬರನ್ನು ಬಂಧಿಸಲಾಗಿದ್ದು ಅಲ್ಲದೆ ನಿನ್ನೆ ವಕೀಲ ದೇವರಾಜೇಗೌಡ ನಿವಾಸ ಸೇರಿ ಆರು ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ಏನಾದರೂ ಸಾಕ್ಷಿ ಸಿಗಬಹುದೇನೋ ಎನ್ನುವ ಉದ್ದೇಶದಿಂದ ದಾಳಿ ಮಾಡಿ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ.

ಅಲ್ಲದೆ ಇತ್ತೀಚಿಗೆ ಮಹಿಳೆ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದರು.ಇದೀಗ ಕಳೆದ ಹತ್ತು ದಿನಗಳಿಂದ ಜೈಲುವಾಸ ಅನುಭವಿಸಿದ್ದ ರೇವಣ್ಣ ಅವರು ನಿನ್ನೆ ಶರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.ಬಿಡುಗಡೆ ನಂತರ ಮೊದಲು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಂದೆ HD ದೇವೇಗೌಡ ಹಾಗೂ ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ.

ನಂತರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಪ್ರಜ್ವಲ್ ಹಾಗೂ ಇಡೀ ಕುಟುಂಬದ ಸದಸ್ಯರ ಹೆಸರಲ್ಲಿ ಅರ್ಚನೆ ಮಾಡಿಸಿದ್ದಾರೆ. ಇಂದು ಕೂಡ ಅವರು ಹಲವು ದೇವಾಲಯಗಳಿಗೆ ಭೇಟಿ ನೀಡಬೇಕಿತ್ತು ಆದರೆ ಪ್ರಜ್ವಲ್ ಕಾನೂನು ಹೋರಾಟಕ್ಕೆ ಕುರಿತಂತೆ ತಜ್ಞರ ಸಲಹೆ ಪಡೆಯುವ ಸಲುವಾಗಿ ಅವರ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ವಿಜಯಪುರದ ಸಿಂದಗಿ, ತಾಳಿಕೋಟೆಯ ಶಂಕಿತರ ನೆಲೆಗಳ ಮೇಲೆ NIA ಅಧಿಕಾರಿಗಳ ದಾಳಿ

1 Min Read

Rain In Bengaluru: ಬೆಂಗಳೂರಲ್ಲಿ ಮುಂದಿನ 3 ಗಂಟೆ ಭಾರೀ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್‌ ಘೋಷಣೆ!

1 Min Read

ಕರ್ತವ್ಯನಿಷ್ಠೆ, ಮಾನವೀಯತೆಯ ಪ್ರತೀಕ ಇನ್ಸ್‌ಪೆಕ್ಟರ್ ಮಹಾಬಲೇಶ್ವರ ನಾಯಕ್: ಸಾಗರದಲ್ಲಿ ಹೃದಯ ಸ್ಪರ್ಶಿ ಬೀಳ್ಕೊಡುಗೆ

2 Mins Read
Recent News

BREAKING: ಮ್ಯಾನ್ಮಾರ್‌ನಲ್ಲಿ ಭೀಕರ ಸ್ಫೋಟ: ಗಣಿಗಾರಿಕೆಯ ಸ್ಫೋಟಕಗಳಿದ್ದ ಉಗ್ರಾಣದಲ್ಲಿ ಅವಘಡ, 45ಕ್ಕೂ ಹೆಚ್ಚು ಮಂದಿ ಸಾವು!

Wi-Fi Radiation: ವೈ-ಫೈ ವಿಕಿರಣ ನಿಮ್ಮ ಆರೋಗ್ಯಕ್ಕೆ ಕಣ್ಣಿಗೆ ಕಾಣದ ಆಪತ್ತೇ? ಇಲ್ಲಿದೆ ಆಘಾತಕಾರಿ ಮಾಹಿತಿ

Oral Sex: ಓರಲ್ ಸೆಕ್ಸ್ ನಿಜಕ್ಕೂ ಸುರಕ್ಷಿತವೇ? ಇಲ್ಲಿದೆ ಬೆಂಗಳೂರಿನ ವೈದ್ಯರು ನೀಡಿದ ಎಚ್ಚರಿಕೆ

ಧೂಮಪಾನ ತ್ಯಜಿಸುವ ನಿರ್ಧಾರ ಮಾಡಿದ್ದೀರಾ? ಕೇವಲ 20 ನಿಮಿಷಗಳಲ್ಲಿ ನಿಮ್ಮ ದೇಹದಲ್ಲಿ ಶುರುವಾಗಲಿದೆ ಅದ್ಭುತ ಚೇತರಿಕೆ : ವರದಿ

State News
KARNATAKA

ವಿಜಯಪುರದ ಸಿಂದಗಿ, ತಾಳಿಕೋಟೆಯ ಶಂಕಿತರ ನೆಲೆಗಳ ಮೇಲೆ NIA ಅಧಿಕಾರಿಗಳ ದಾಳಿ

By ವಸಂತ ಬಿ ಈಶ್ವರಗೆರೆ KARNATAKA 1 Min Read

ವಿಜಯಪುರ: ಜಿಲ್ಲೆಯ ಸಿಂದಗಿ ಹಾಗೂ ತಾಳಿಕೋಟೆ ಪಟ್ಟಣಗಳಲ್ಲಿ ಇಂದು ಮುಂಜಾನೆಯೇ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ದಿಢೀರ್ ದಾಳಿ…

Rain In Bengaluru: ಬೆಂಗಳೂರಲ್ಲಿ ಮುಂದಿನ 3 ಗಂಟೆ ಭಾರೀ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್‌ ಘೋಷಣೆ!

ಕರ್ತವ್ಯನಿಷ್ಠೆ, ಮಾನವೀಯತೆಯ ಪ್ರತೀಕ ಇನ್ಸ್‌ಪೆಕ್ಟರ್ ಮಹಾಬಲೇಶ್ವರ ನಾಯಕ್: ಸಾಗರದಲ್ಲಿ ಹೃದಯ ಸ್ಪರ್ಶಿ ಬೀಳ್ಕೊಡುಗೆ

ಸಾಗರದಲ್ಲಿ ಲೋಕಾಯುಕ್ತ ಮೆಟ್ಟಿಲೇರಿದ್ದ ಯುವಕನಿಗೆ ಜೀವಬೆದರಿಕೆ: ಈ ಸವಾಲು ಹಾಕಿದ ತಾಳಗುಪ್ಪ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಬ್ಯಾಕೋಡು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.