ತುಮಕೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಹಾಗೂ ಎಚ್ ಡಿ ರೇವಣ್ಣ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಗುಬ್ಬಿ ಶಾಸಕ ಹೆಸರಿನಿವಾಸ ಪ್ರತಿಕ್ರಿಯೆ ನೀಡಿದ್ದು ಈ ಒಂದು ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣನನ್ನು ಕುಟುಂಬಸ್ಥರೇ ಫ್ಲೈಟ್ ಬುಕ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದರು.

ತುಮಕೂರಿನಲ್ಲಿ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಸುದ್ಧಿಗಾರರೊಂದಿಗೆ ಮಾತನಾಡಿ, ಪ್ರಜ್ವಲನ್ನು ಕುಟುಂಬಸ್ಥರೇ ಫ್ಲೈಟ್ ಬುಕ್ ಮಾಡಿ ಕಳುಹಿಸಿದ್ದಾರೆ.ಎಚ್ ಡಿ ದೇವೇಗೌಡ, ಎಚ್ ಡಿ ಕುಮಾರಸ್ವಾಮಿ ಹಾಗೂ ರೇವಣ್ಣ ಫ್ಲೈಟ್ ಬುಕ್ ಮಾಡಿ ಕಳುಹಿಸಿದ್ದಾರೆ.ಪ್ರಜ್ವಲ್ ರೇವಣ್ಣ ಎಲ್ಲಿದ್ದಾನೆಂದು ದೇವೇಗೌಡರ ಕುಟುಂಬಕ್ಕೆ ಗೊತ್ತಿದೆ ಎಂದರು.

ವಿದೇಶಕ್ಕೆ ಕಳುಹಿಸಿದವರು ಯಾರು? ಇದೆಲ್ಲಾ ಕುಮಾರಸ್ವಾಮಿ ನಾಟಕ. ಕಾನೂನಿನಲ್ಲಿ ಏನು ಶಿಕ್ಷೆ ಆಗಬೇಕು ಅಂತ ಸಂವಿಧಾನದಲ್ಲಿ ಬರೆದಿದ್ದಾರೆ.ಪ್ರಜ್ವಲ್ ಗೆ ಅದೇ ಶಿಕ್ಷೆ ಆಗಲೆಂದು ನಾನು ಕೂಡ ಒತ್ತಾಯ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.

Share.
Exit mobile version