ಪಾಟ್ನಾ : ಜೆಡಿಯು ಅನ್ನು ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸುವಂತೆ ಚುನಾವಣಾ ತಂತ್ರಗಾರ,ರಾಜಕಾರಣಿ ಪ್ರಶಾಂತ್ ಕಿಶೋರ್ ಕೇಳಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
BREAKING NEWS : ಹಾಸನ ಜಿಲ್ಲೆಯಲ್ಲಿ ದುರಂತ : ಈಜಲು ಕೆರೆಗೆ ಇಳಿದಿದ್ದ ಇಬ್ಬರು ಬಾಲಕರ ದುರ್ಮರಣ, ಓರ್ವನ ರಕ್ಷಣೆ
ಸಮಾಜವಾದಿ ಐಕಾನ್ ಜಯಪ್ರಕಾಶ್ ನಾರಾಯಣ್ ಅವರ ಜನ್ಮಸ್ಥಳ ಸಿತಾಬ್ ಡಿಯಾರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್, ಕಿಶೋರ್ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಅವರು ಇತ್ತೀಚೆಗೆ ನನ್ನನ್ನು ಭೇಟಿಯಾಗಲು ಬಂದಿದ್ದರು. ನಾನು ಅವರನ್ನು ಆಹ್ವಾನಿಸಲಿಲ್ಲ. ಒಮ್ಮೆ ಅವರು ನನ್ನ ಪಕ್ಷವನ್ನು ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸುವಂತೆ ನನ್ನನ್ನು ಕೇಳಿದ್ದರು. ಆದರೆ ಈ ಅಂಶವನ್ನು ಮಾಚುತ್ತಿದ್ದಾರೆ ಎಂದು ಕುಮಾರ್ ಹೇಳಿದರು.
ಜೆಡಿಯು ನೇತೃತ್ವ ವಹಿಸಲು ಕುಮಾರ್ ಇತ್ತೀಚೆಗೆ ಮಾಡಿದ ಮನವಿಯನ್ನು ತಿರಸ್ಕರಿಸಿದ್ದೇನೆ ಎಂಬ ಕಿಶೋರ್ ಅವರ ಹೇಳಿಕೆಗೆ ನಿತೀಶ್ ಪ್ರತಿಕ್ರಿಯಿಸಿದರು.
ಅವರು ಏನು ಬೇಕಾದರೂ ಮಾತನಾಡಲಿ, ಅವರು ಏನು ಹೇಳಿದರೂ ಅರ್ಥವಿಲ್ಲ, ನಾಲ್ಕೈದು ವರ್ಷಗಳ ಹಿಂದೆ ಕಾಂಗ್ರೆಸ್ನಲ್ಲಿ ವಿಲೀನ ಮಾಡುವುದಾಗಿ ಹೇಳಿದ್ದರು. ಈಗ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೆಲ ದಿನಗಳ ಹಿಂದೆ ಸಿಂಎ ನಿತಿನ್ ಕುಮಾರ್ ಅವರು ತನ್ನನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಜೆಡಿಯು ನಾಯಕತ್ವ ವಹಿಸುವಂತೆ ಕೇಳಿಕೊಂಡಿದ್ದರು ಎಂದು ಕಿಶೋರ್ ಮಂಗಳವಾರ ಹೇಳಿಕೊಂಡಿದ್ದರು.
ರಾಜಕೀಯ ಸಲಹಾ ಸಂಸ್ಥೆ I-PAC ಯ ಸಂಸ್ಥಾಪಕರಾದ ಕಿಶೋರ್ ಅವರನ್ನು 2018 ರಲ್ಲಿ JD(U) ಗೆ ಕುಮಾರ್ ಸೇರ್ಪಡೆಗೊಳಿಸಿದರು. ಕೆಲವೇ ವಾರಗಳಲ್ಲಿ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ಬಡ್ತಿ ನೀಡಿದ್ದರು.
ಆದಾಗ್ಯೂ, ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಕುರಿತು ಕುಮಾರ್ ಅವರೊಂದಿಗಿನ ಜಗಳವು ಒಂದೆರಡು ವರ್ಷಗಳಲ್ಲಿ ಅವರನ್ನು ಪಕ್ಷದಿಂದ ಹೊರಹಾಕಲು ಕಾರಣವಾಯಿತು.
‘ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ’ : ಜೆಡಿಎಸ್ ವರಿಷ್ಟ ಹೆಚ್.ಡಿ ದೇವೇಗೌಡ ಭವಿಷ್ಯ |H.D Devegowda