Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಮುಲಾಜಿಲ್ಲದೇ ತೆರವುಗೊಳಿಸಿ: ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

07/06/2025 5:59 PM

ಬೆಂಗಳೂರು ಕಾಲ್ತುಳಿತ ದುರಂತ: ಸಿದ್ದರಾಮಯ್ಯಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡಬೇಕು- ವಿ.ಸೋಮಣ್ಣ ಆಗ್ರಹ

07/06/2025 5:50 PM

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

07/06/2025 5:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ‘ಡೆಂಗ್ಯೂ ನಿಯಂತ್ರಣ’ಕ್ಕೆ ಮುನ್ನೆಚ್ಚರಿಕೆ ವಹಿಸಲಾಗಿದೆ: ‘ಬಿಬಿಎಂಪಿ ವಿಶೇಷ ಆಯುಕ್ತ’ರ ಮಾಹಿತಿ
KARNATAKA

ಬೆಂಗಳೂರಲ್ಲಿ ‘ಡೆಂಗ್ಯೂ ನಿಯಂತ್ರಣ’ಕ್ಕೆ ಮುನ್ನೆಚ್ಚರಿಕೆ ವಹಿಸಲಾಗಿದೆ: ‘ಬಿಬಿಎಂಪಿ ವಿಶೇಷ ಆಯುಕ್ತ’ರ ಮಾಹಿತಿ

By kannadanewsnow0916/05/2024 3:02 PM

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.

ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಇಂದು ಪೂರ್ವ ವಲಯದ ರಾಮಸ್ವಾಮಿ ಪಾಳ್ಯದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತದನಾಡಿದ ಅವರು, ಡೆಂಘೀ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ಸೊಳ್ಳೆ ನಿಯಂತ್ರಣ ಕುರಿತು ಅರಿವು ಮೂಡಿಸುವ ಹಾಗೂ ಔಷಧಿ ಸಿಂಪಡಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಹೆಚ್ವಾಗಲಿದ್ದು, ಅದನ್ನು ಫಾಗಿಂಗ್ ಮತ್ತು ಔಷಧಿ ಸಿಫಡಿಸುವ ಮೂಲಕ ತಡೆಯಬೇಕು. ಹೂವಿನ ಕುಂಡ, ಬೀಸಾಕಿದ ಟೈರ್, ನೀರು ಸಂಗ್ರಹಿಸುವ ತೊಟ್ಟಿ, ನೀರಿನ ಬಾಟಲ್ ಸೇರಿದಂತೆ ಇನ್ನಿತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಈ ಸಂಬಂಧ ಅಂತಹ ಜಾಗದಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಆಯಾ ವಲಯದ ವಾರ್ಡ್ ಮಟ್ಟದಲ್ಲಿ ಒಂದು ವಾರ್ಡ್ ಗೆ 4 ಔಷಧಿ ಸಿಂಪಡೆಣೆ ಮಾಡುವ ತಂಡಗಳನ್ನು ನಿಯೋಜನೆ ಮಾಡಿದ್ದು, ತಾತ್ಕಾಲಿಕವಾಗಿ ನೀರು ನಿಲ್ಲುವ ಸ್ಥಳ ಹಾಗೂ ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಫಾಗಿಂಗ್ ಮತ್ತು ಔಷಧಿ ಸಿಂಪಡಣೆ ಮಾಡಲಾಗುತ್ತದೆ ಎಂದು ಹೇಳಿದರು.

ಲಾರ್ವಾ ಸಮೀಕ್ಷೆ ಪ್ರಾರಂಭ:

ಈಡೀಸ್, ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಘೀ ರೋಗ ಹರಡುತ್ತದೆ. ಆ ಸೊಳ್ಳೆಗಳು ತೆರೆಡಿಟ್ಟ ನೀರಿನ ತೊಟ್ಟಿಗಳು, ಏರ್ ಕೂಲರ್ ಗಳು, ಹೂವಿನ ಕುಂಡದ ತಟ್ಟೆಗಳು, ಬಕೆಟ್ ಗಳು, ಸೀಮೆಂಟ್ ತೊಟ್ಟಿಗಳು, ತೆಂಗಿನ ಚಿಪ್ಪುಗಳು, ಒಡೆದ ಟೈರ್ ಗಳಲ್ಲಿ ಉತ್ಪತ್ತಿಯಾಗುತ್ತವೆ. ಈ ಸಂಬಂಧ ಪ್ರಾರಂಭಿಕ ಹಂತದಲ್ಲೇ ಸೊಳ್ಳೆ ನಿಯಂತ್ರಣ ಮಾಡಲು ಲಾರ್ವಾ ಉತ್ಪಿತ್ತಿಯಾಗುವ ತಾಣಗಳನ್ನು‌ ಗುರಿತಿಸಿ ನಾಶಪಡಿಸಲಾಗುತ್ತದೆ.

ಕೊಳಚೆ ಹಾಗೂ ಇನ್ನಿತರೆ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಮ್ಮ ಕ್ಲಿನಿಕ್ ವೈದ್ಯರ ತಂಡ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗಳ ತಂಡಗಳನ್ನು ರಚಿಸಿಕೊಂಡು ಮನೆ-ಮನೆ ಭೇಟಿ ನೀಡಿ ಡೆಂಘೀ ಪ್ರಕರಣಗಳ ಪತ್ತೆ ಹಚ್ಚುವ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಸಾಮಾಜಿಕ ಜಾಲತಾಣ, ಜಾಥಾ ಹಾಗೂ ಧ್ವನಿವರ್ಧಕಗಳ ಮೂಲಕ ಡೆಂಘೀ ಜಾಗೃತಿ ಅಭಿಯಾನ:

ನಗರದಲ್ಲಿ ಡೆಂಘೀ ನಿಯಂತ್ರಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ಆಯಾ ವಲಯಗಳ ವಾರ್ಡ್ ಮಟ್ಟದಲ್ಲಿ ಜಾಗೃತಿ ಜಾಥಾ ಹಾಗೂ ಪಾಲಿಕೆಯ ಕಸದ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಡೆಂಘೀ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿಸಲಾಗುತ್ತಿದೆ. ಜೊತೆಗೆ ಮನೆ ಮನೆಗೆ ಡೆಂಗೀ ನಿಯಂತ್ರಣದ ಕುರಿತು ಬಿತ್ತಿಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.

ಈ ವೇಳೆ ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಮದನಿ, ಪೂರ್ವ ವಲಯ ಆರೊಗ್ಯಾಧಿಕಾರಿಯಾದ ಡಾ. ಭಾಗ್ಯಲಕ್ಷ್ಮಿ, ಡೆಂಗೀ ನೋಡಲ್ ಅಧಿಕಾರಿಯಾದ ಸುಜಾತಾ, ಆರೋಗ್ಯ ವೈದ್ಯಾಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಮೇ 1 ರಿಂದ 13ನೇ ವರೆಗಿನ ಡೆಂಘೀ ವರದಿ:

ಬೊಮ್ಮನಹಳ್ಳಿ: 23
ಪೂರ್ವ: 41
ಮಹದೇವಪುರ: 44
ಆರ್.ಆರ್ ನಗರ: 08
ದಕ್ಷಿಣ: 34
ಪಶ್ಚಿಮ: 16
ಯಲಹಂಕ: 06
ದಾಸರಹಳ್ಳಿ: 00

ಒಟ್ಟು: 172 ಪ್ರಕರಣ

‘ಆಧಾರ್ ಕಾರ್ಡ್’ ನವೀಕರಿಸಲು ಈ ದಿನವೇ ಲಾಸ್ಟ್ ಡೇಟ್ : ಈ ಸರಳ ರೀತಿಯಲ್ಲಿ ‘ಅಪ್ ಡೇಟ್’ ಮಾಡಿಸಿಕೊಳ್ಳಿ

ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ : ಉಲ್ಲಂಘಿಸಿದರೆ 3 ವರ್ಷ ಜೈಲು ಶಿಕ್ಷೆ, 10,000 ರೂ.ವರೆಗೆ ದಂಡ

ಅಂಜಲಿ ಕೊಲೆಗೆ ಪೊಲೀಸರೇ ಕಾರಣ: ಬಸವರಾಜ ಬೊಮ್ಮಾಯಿ ಗಂಭೀರ ಆರೋಪ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಮುಲಾಜಿಲ್ಲದೇ ತೆರವುಗೊಳಿಸಿ: ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

07/06/2025 5:59 PM3 Mins Read

ಬೆಂಗಳೂರು ಕಾಲ್ತುಳಿತ ದುರಂತ: ಸಿದ್ದರಾಮಯ್ಯಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡಬೇಕು- ವಿ.ಸೋಮಣ್ಣ ಆಗ್ರಹ

07/06/2025 5:50 PM1 Min Read

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

07/06/2025 5:41 PM2 Mins Read
Recent News

ಬೆಂಗಳೂರಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಮುಲಾಜಿಲ್ಲದೇ ತೆರವುಗೊಳಿಸಿ: ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

07/06/2025 5:59 PM

ಬೆಂಗಳೂರು ಕಾಲ್ತುಳಿತ ದುರಂತ: ಸಿದ್ದರಾಮಯ್ಯಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡಬೇಕು- ವಿ.ಸೋಮಣ್ಣ ಆಗ್ರಹ

07/06/2025 5:50 PM

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

07/06/2025 5:41 PM

‘ಫೈಲಿಂಗ್’ ನಿಯಮಗಳಲ್ಲಿ ಬದಲಾವಣೆ ; ಜುಲೈ’ನಿಂದ 3 ವರ್ಷಗಳ ಅವಧಿ ಮುಗಿದ ‘GST ಫೈಲಿಂಗ್’ ನಿರ್ಬಂಧ

07/06/2025 5:37 PM
State News
KARNATAKA

ಬೆಂಗಳೂರಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಮುಲಾಜಿಲ್ಲದೇ ತೆರವುಗೊಳಿಸಿ: ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

By kannadanewsnow0907/06/2025 5:59 PM KARNATAKA 3 Mins Read

ಬೆಂಗಳೂರು: ನಗರದಲ್ಲಿ ನಾಗರಿಕರಿಗೆ ಸುರಕ್ಷತೆ ಮತ್ತು ನಡೆಯಲು ಅನುಕೂಲಕರವಾಗುವಂತೆ, ಪಾದಚಾರಿ ಮಾರ್ಗ ಒತ್ತುವರಿಯಾಗಿರುವುದನ್ನು ಗುರುತಿಸಿ ತೆರವು ಕಾರ್ಯ ನಡೆಸುವಂತೆ ಮುಖ್ಯ ಆಯುಕ್ತರಾದ…

ಬೆಂಗಳೂರು ಕಾಲ್ತುಳಿತ ದುರಂತ: ಸಿದ್ದರಾಮಯ್ಯಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡಬೇಕು- ವಿ.ಸೋಮಣ್ಣ ಆಗ್ರಹ

07/06/2025 5:50 PM

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

07/06/2025 5:41 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ನಾಳೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆ

07/06/2025 5:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.