Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೇರಿಕಾದಲ್ಲಿ ಹೈದರಾಬಾದ್ ಯುವತಿಯ ಭೀಕರ ಕೊಲೆ: ಪ್ರೇಯಸಿಯನ್ನು ಕೊಂದ ಕಿರಾತಕ ಪ್ರಿಯಕರ ಭಾರತಕ್ಕೆ ಪರಾರಿ!

06/01/2026 9:02 AM

ಗಮನಿಸಿ : ವಾರಕ್ಕೆ 3 ಬಾರಿ ಈ ಗಂಜಿ ಕುಡಿದ್ರೆ ಎರಡು ಪಟ್ಟು ಕಡಿಮೆಯಾಗಲಿದೆ ತೂಕ, ನಿಯಂತ್ರಣಕ್ಕೆ ಬರಲಿದೆ `ಶುಗರ್.!

06/01/2026 8:57 AM

ಉದ್ಯೋಗವಾರ್ತೆ : `SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `ಭಾರತೀಯ ರೈಲ್ವೆ ಇಲಾಖೆ’ಯಿಂದ 22,000 ಹುದ್ದೆಗಳಿಗೆ ಅರ್ಜಿ ಆಹ್ವಾನ

06/01/2026 8:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ದಪಡಿಸಿ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ
KARNATAKA

ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ದಪಡಿಸಿ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

By kannadanewsnow0910/01/2025 4:54 PM

ಬೆಂಗಳೂರು: ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಆಧರಿಸಿ 2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 309(ಬಿ)ರಡಿಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಮುಂದಿನ ಐದು ವರ್ಷದ ದೂರದೃಷ್ಟಿ ಯೋಜನೆಯನ್ನು ಗ್ರಾಮ ಯೋಜನಾ ಸಮಿತಿ ಮತ್ತು ಗ್ರಾಮ ಪಂಚಾಯಿತಿ ಯೋಜನಾ ಸಮಿತಿಗಳ ಸಹಕಾರದೊಂದಿಗೆ ಸಿದ್ದಪಡಿಸಿದೆ. ದೂರದೃಷ್ಟಿ ಯೋಜನೆಯಲ್ಲಿ 9 ಆದ್ಯತಾ ವಲಯಗಳನ್ನು ಗುರುತಿಸಲಾಗಿದ್ದು ಅದಕ್ಕೆ ಪೂರಕವಾದ ಎಲ್ಲಾ ಚಟುವಟಿಕೆಗಳನ್ನು ಯೋಜನೆಯಲ್ಲಿ ಗುರುತಿಸಿ 2023-24ನೇ ಸಾಲಿನಿಂದ 2028-29ನೇ ಸಾಲಿನವರೆಗೆ ದೂರದೃಷ್ಟಿ ಯೋಜನೆಯನ್ನು ಸಿದ್ದಪಡಿಸಲಾಗಿದೆ.

ಈ ದೂರದೃಷ್ಟಿ ಯೋಜನೆ ಆಧರಿಸಿ ಗ್ರಾಮ ಪಂಚಾಯಿತಿಗಳು ಸಮಗ್ರ ಭಾಗವಹಿಸುವಿಕೆಯನ್ನು ಒಳಗೊಂಡ ವಾರ್ಷಿಕ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಬೇಕು, ಅದಕ್ಕೂ ಮುನ್ನ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸುವ ಸಲುವಾಗಿ ಸರಣಿ ಚಟುವಟಿಕೆಗಳನ್ನು ಅಭಿಯಾನದ ರೂಪದಲ್ಲಿ ಹಮ್ಮಿಕೊಳ್ಳಬೇಕು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸುವ ಸಂದರ್ಭದಲ್ಲಿ ಈ ಕೆಳಕಂಡ ಅಂಶಗಳನ್ನು ಪಾಲಿಸಬೇಕೆಂದು ಸಚಿವರು ಹೇಳಿದ್ದಾರೆ.

ವಾರ್ಷಿಕ ಕ್ರಿಯಾ ಯೋಜನೆಯ ಎಲ್ಲಾ ಚಟುವಟಿಕೆಗಳನ್ನು ಗ್ರಾಮ ಪಂಚಾಯಿತಿಗಳ ಐದು ವರ್ಷದ ದೂರದೃಷ್ಟಿ ಯೋಜನೆಯ ಗುರಿಯ ಸಾಧನೆಯನ್ನು ಗಮನದಲ್ಲಿಟ್ಟುಕೊಂಡು ಸಿದ್ದಪಡಿಸವುದು. ಸಮುದಾಯದ ಸಹಭಾಗಿತ್ವದೊಂದಿಗೆ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಲು ಕ್ರಮ ವಹಿಸುವುದು. ಗ್ರಾಮ ಪಂಚಾಯಿತಿಯ ಎಲ್ಲಾ ಅನುದಾನದ ಮೂಲಗಳು ಒಳಗೊಂಡಂತೆ ಒಂದು ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸುವುದು. ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆಯಲ್ಲಿ ಇರುವಂತೆ ಗ್ರಾಮ ಪಂಚಾಯಿತಿ ಹಂತದ ಇತರೆ ಅಭಿವೃದ್ಧಿ ಇಲಾಖೆಗಳ ಅನುದಾನ, ಯೋಜನೆಗಳು, ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಳ್ಳುವುದು. ಗ್ರಾಮ ಪಂಚಾಯಿತಿ ಹಂತದಲ್ಲಿ ಕೈಗೊಳ್ಳಲಾಗುವ ಕಡಿಮೆ ಖರ್ಚಿನಲ್ಲಿ ನಿರ್ವಹಿಸುವ ಚಟುವಟಿಕೆಗಳು ಹಾಗೂ ವೆಚ್ಚಗಳನ್ನು ಭರಿಸದೆ ಕೈಗೊಳ್ಳಬಹುದಾದ ಚಟುವಟಿಕೆಗಳನ್ನು ಗುರುತಿಸುವುದು. ಯೋಜನೆವಾರು ಅವಶ್ಯವಿರುವ ಚಟುವಟಿಕೆಗಳನ್ನು ಕಡ್ಡಾಯವಾಗಿ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯ ಅಂಗವಾಗಿರುವುದನ್ನು ಖಾತರಿಪಡಿಸಿಕೊಂಡು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಗ್ರಾಮ ಪಂಚಾಯತಿಗಳಿಗೆ ಸೂಚಿಸಿದ್ದಾರೆ.

Good News: ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: 5,000 ಜನರಿಗೆ ಸಾಗುವಳಿ ಚೀಟಿ

Electricity Bill: 2 ಬಿಲಿಯನ್ ರೂಪಾಯಿ ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ವ್ಯಕ್ತಿ!

Share. Facebook Twitter LinkedIn WhatsApp Email

Related Posts

ಗಮನಿಸಿ : ವಾರಕ್ಕೆ 3 ಬಾರಿ ಈ ಗಂಜಿ ಕುಡಿದ್ರೆ ಎರಡು ಪಟ್ಟು ಕಡಿಮೆಯಾಗಲಿದೆ ತೂಕ, ನಿಯಂತ್ರಣಕ್ಕೆ ಬರಲಿದೆ `ಶುಗರ್.!

06/01/2026 8:57 AM2 Mins Read

ALERT : `ಮೊಬೈಲ್’ ಬಳಕೆದಾರರು ಓದಲೇಬೇಕಾದ ಸುದ್ದಿ : `ಫೋನ್’ ಬಳಕೆಯಿಂದ ಹೆಚ್ಚುತ್ತಿದೆ ಈ ಗಂಭೀರ ಸಮಸ್ಯೆ.!

06/01/2026 8:37 AM2 Mins Read

ನಿಮ್ಮ `Gmail’ ಸ್ಟೋರೇಜ್ ಫುಲ್ ಆಗಿದೆಯೇ? ಫೋಟೋಗಳನ್ನು ಡಿಲೀಟ್ ಮಾಡದೇ ಸ್ಟೋರೇಜ್ ಖಾಲಿ ಮಾಡಲು ಇಲ್ಲಿದೆ ಬೆಸ್ಟ್ ಟ್ರಿಕ್.!

06/01/2026 8:18 AM2 Mins Read
Recent News

ಅಮೇರಿಕಾದಲ್ಲಿ ಹೈದರಾಬಾದ್ ಯುವತಿಯ ಭೀಕರ ಕೊಲೆ: ಪ್ರೇಯಸಿಯನ್ನು ಕೊಂದ ಕಿರಾತಕ ಪ್ರಿಯಕರ ಭಾರತಕ್ಕೆ ಪರಾರಿ!

06/01/2026 9:02 AM

ಗಮನಿಸಿ : ವಾರಕ್ಕೆ 3 ಬಾರಿ ಈ ಗಂಜಿ ಕುಡಿದ್ರೆ ಎರಡು ಪಟ್ಟು ಕಡಿಮೆಯಾಗಲಿದೆ ತೂಕ, ನಿಯಂತ್ರಣಕ್ಕೆ ಬರಲಿದೆ `ಶುಗರ್.!

06/01/2026 8:57 AM

ಉದ್ಯೋಗವಾರ್ತೆ : `SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `ಭಾರತೀಯ ರೈಲ್ವೆ ಇಲಾಖೆ’ಯಿಂದ 22,000 ಹುದ್ದೆಗಳಿಗೆ ಅರ್ಜಿ ಆಹ್ವಾನ

06/01/2026 8:48 AM

ಮೆರಿಟ್ ಆಧಾರದಲ್ಲಿ ಜನರಲ್ ಸೀಟುಗಳಿಗೂ ಅರ್ಹರು: SC/ST/OBC ಅಭ್ಯರ್ಥಿಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

06/01/2026 8:42 AM
State News
KARNATAKA

ಗಮನಿಸಿ : ವಾರಕ್ಕೆ 3 ಬಾರಿ ಈ ಗಂಜಿ ಕುಡಿದ್ರೆ ಎರಡು ಪಟ್ಟು ಕಡಿಮೆಯಾಗಲಿದೆ ತೂಕ, ನಿಯಂತ್ರಣಕ್ಕೆ ಬರಲಿದೆ `ಶುಗರ್.!

By kannadanewsnow5706/01/2026 8:57 AM KARNATAKA 2 Mins Read

ಈ ‘ಮ್ಯಾಜಿಕ್ ಗಂಜಿ’ಯನ್ನು ವಾರಕ್ಕೆ ಮೂರು ಬಾರಿ ಕುಡಿಯಿರಿ. ಇಂದಿನ ವೇಗದ ಜೀವನಶೈಲಿಯಲ್ಲಿ, ತೂಕ ಹೆಚ್ಚಾಗುವುದು ಮತ್ತು ಅಧಿಕ ರಕ್ತದ…

ALERT : `ಮೊಬೈಲ್’ ಬಳಕೆದಾರರು ಓದಲೇಬೇಕಾದ ಸುದ್ದಿ : `ಫೋನ್’ ಬಳಕೆಯಿಂದ ಹೆಚ್ಚುತ್ತಿದೆ ಈ ಗಂಭೀರ ಸಮಸ್ಯೆ.!

06/01/2026 8:37 AM

ನಿಮ್ಮ `Gmail’ ಸ್ಟೋರೇಜ್ ಫುಲ್ ಆಗಿದೆಯೇ? ಫೋಟೋಗಳನ್ನು ಡಿಲೀಟ್ ಮಾಡದೇ ಸ್ಟೋರೇಜ್ ಖಾಲಿ ಮಾಡಲು ಇಲ್ಲಿದೆ ಬೆಸ್ಟ್ ಟ್ರಿಕ್.!

06/01/2026 8:18 AM

BIG NEWS: ಕರ್ನಾಟಕದ ಸುದೀರ್ಘ ಅವಧಿಯ `CM’ ಆಗಲು ಜನರ ಆಶೀರ್ವಾದವೇ ಕಾರಣ : ಸಿಎಂ ಸಿದ್ದರಾಮಯ್ಯ

06/01/2026 7:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.