ಉತ್ತರಾಖಂಡ : ಉತ್ತರಾಖಂಡದ ಪೌರಿಯಲ್ಲಿ ಮದುವೆ ದಿಬ್ಬಣದ ಬಸ್ ಕಮರಿಗೆ ಬಿದ್ದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu) ಮತ್ತು ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರುʻಉತ್ತರಾಖಂಡದ ಪೌರಿ ಗರ್ವಾಲ್ನಲ್ಲಿ ಬಸ್ ಕಣಿವೆಗೆ ಬಿದ್ದು ಅನೇಕ ಸಾವು-ನೋವುಗಳ ಬಗ್ಗೆ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆʼ ಎಂದು ಬರೆದುಕೊಂಡಿದ್ದಾರೆ.
पौड़ी गढ़वाल, उत्तराखंड में बस के घाटी में गिरने पर कई लोगों के हताहत होने की दुर्घटना से दुखी हूं। इस दुर्घटना में अपने प्रियजनों को खोने वाले परिवारों के प्रति मेरी गहरी शोक-संवेदनाएं। मैं घायलों के शीघ्र स्वस्थ होने की कामना करती हूं।
— President of India (@rashtrapatibhvn) October 5, 2022
ಪ್ರಧಾನಿ ಮೋದಿ ಅವರು ಕೂಡ ಘಟನೆ ಬಗ್ಗೆ ಟ್ವೀಟ್ ಮಾಡಿದ್ದು, “ಉತ್ತರಾಖಂಡದ ಪೌರಿಯಲ್ಲಿ ಸಂಭವಿಸಿದ ಬಸ್ ಅಪಘಾತ ಹೃದಯ ವಿದ್ರಾವಕವಾಗಿದೆ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
The bus accident in Pauri, Uttarakhand is heart-rending. In this tragic hour my thoughts are with the bereaved families. I hope those who have been injured recover at the earliest. Rescue operations are underway. All possible assistance will be provided to those affected: PM Modi
— PMO India (@PMOIndia) October 5, 2022
ಮಂಗಳವಾರ ರಾತ್ರಿ ಪೌರಿ-ಗಢವಾಲ್ ಜಿಲ್ಲೆಯ ಧುಮಾಕೋಟ್ನ ಬಿರೋಖಾಲ್ ಪ್ರದೇಶದಲ್ಲಿ ಮದುವೆಯ ಮೆರವಣಿಗೆಯಲ್ಲಿ 40 ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಮರಿಗೆ ಬಿದ್ದ ಪರಿಣಾಮ 25 ಜನರು ಸಾವನ್ನಪ್ಪಿದ್ದಾರೆ.
BIGG NEWS : ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿದ ಡೆಂಗ್ಯೂ ಆತಂಕ : 207 ಪ್ರಕರಣಗಳು ಪತ್ತೆ!
BREAKING NEWS : ಭಾರತದ 4 ನಗರಗಳಲ್ಲಿ ‘ಜಿಯೋ ಟ್ರೂ 5ಜಿʼ ಅನಾವರಣಗೊಳಿಸಿದ ‘ರಿಲಯನ್ಸ್’ | Jio True 5G