ಕೋಲಾರ: ಭಾರತ ಐಕ್ಯತಾ ಯಾತ್ರೆ ಹಿನ್ನಲೆಯಲ್ಲಿ ಶುಕ್ರವಾರ ಮಂಡ್ಯಕ್ಕೆ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ ಎನ್ನಲಾಗಿದೆ.

ಕೋಲಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ . ಕೆಜಿಎಫ್‌ ಶಾಸಕಿ ರೂಪ ಶಶಿಧರ್‌ ಅವರು ಮಾತನಾಡಿದರು, ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ಅಕ್ಟೋಬರ್ 7 ರ ಮಂಡ್ಯ ಕಾರ್ಯಕ್ರಮಕ್ಕೆ ಕೋಲಾರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾಂಗ್ರೆಸ್‌ ಪಕ್ಷದ ಶಕ್ತಿ ಪ್ರದರ್ಶಿಸೋಣ ಅಂತ ಮನವಿ ಮಾಡಿಕೊಂಡರು. ಇದೇ ವೇಳೆ ಅವರುಒಡೆದು ಹೋದ ಮನಸ್ಸುಗಳನ್ನು ಒಂದು ಮಾಡುವ ಮೂಲಕ ಕೋಮು ಸಾಮರಸ್ಯ ತರುವ ಉದ್ದೇಶ ರಾಹುಲ್‌ ಗಾಂಧಿಯವರ ಯಾತ್ರೆ ಇದಾಗಿದೆ ಅಂತ ತಿಳಿಸಿದರು. ಡಿಕೆಶಿ, ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯವಿದೆ ಎಂದು ಬಿಜೆಪಿಯವರು ವದಂತಿ ಹಬ್ಬಿಸುತ್ತಿದ್ದಾರೆ, ಇದೆಲ್ಲಾ ಸುಳ್ಳು ಅಂತ ಹೇಳಿದರು.

Share.
Exit mobile version