ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದಂತ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈಗ ಎಫ್ಎಸ್ಎಲ್ ವರದಿಯನ್ನು ಬಹಿರಂಗ ಪಡಿಸುವಂತೆ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು,  ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ ಎಂದಿದ್ದಾರೆ.

FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ FSL ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ IPC ಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರ ಜೊತೆಗೆ 25 ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂದು ಕೇಳಿದ್ದಾರೆ.

ಈ ಇಡೀ ಪ್ರಕರಣ ಕಾಂಗ್ರೆಸ್ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ‘ಬಿಜೆಪಿ-ಜೆಡಿಎಸ್’ ಭರ್ಜರಿ ಜಯಭೇರಿ: ಕಾಂಗ್ರೆಸ್ 4 ಸ್ಥಾನ ಗೆಲುವು- ಸಮೀಕ್ಷೆ | India TV-CNX Opinion Poll

ಬಿಜೆಪಿ ‘Modi ka Parivar’ ಅಭಿಯಾನ ಆರಂಭ : “ಮೋದಿಗೆ ಕುಟುಂಬವಿಲ್ಲ” ಲಾಲು ಹೇಳಿಕೆಗೆ ತಿರುಗೇಟು

Share.
Exit mobile version