Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ವಿಷ ಸೇವಿಸಿ ನಾಲ್ವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ : ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆ.!

12/10/2025 7:06 AM

’99 ಚುನಾವಣೆ ಸೋಲಿಗೆ ರಾಹುಲ್ ಗಾಂಧಿಗೆ ನೊಬೆಲ್ ಪ್ರಶಸ್ತಿ ಸಿಗಲಿದೆ’ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

12/10/2025 7:00 AM

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

12/10/2025 7:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಒಳಮೀಸಲಾತಿ ಪ್ರತಿಭಟನಾಕಾರರು ಪೊಲೀಸರು ವಶಕ್ಕೆ
KARNATAKA

BREAKING: ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಒಳಮೀಸಲಾತಿ ಪ್ರತಿಭಟನಾಕಾರರು ಪೊಲೀಸರು ವಶಕ್ಕೆ

By kannadanewsnow0910/09/2025 5:22 PM

ಬೆಂಗಳೂರು: ನಾಲ್ಕು ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆ ತೀವ್ರ ಸ್ವರೂಪಕ್ಕೆ ಪಡೆದು, ವಿಧಾನಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದಂತ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾನ್ಯ ಸಿದ್ದರಾಮಯ್ಯನವರೇ, ರಾಜ್ಯದಲ್ಲಿ ಎಷ್ಟು ದಿನ ಮುಖ್ಯಮಂತ್ರಿಗಳಾಗಿ (ಸಿಎಂ) ಸಿ.ಎಂ. ಕುರ್ಚಿಯಲ್ಲಿ ಕೂತಿದ್ದೀರಿ ಎಂಬುದು ಮುಖ್ಯವಲ್ಲ; ಆ ಕುರ್ಚಿಯಲ್ಲಿ ಕೂತಾಗ ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದು ಅತ್ಯಂತ ಮುಖ್ಯವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಿ ಬಂಜಾರ, ಭೋವಿ, ಕೊರಚ, ಕೊರವ ಸಮುದಾಯಗಳಿಗೆ ಅನ್ಯಾಯವೆಸಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಳಿಗ್ಗೆ ಫ್ರೀಡಂ ಪಾರ್ಕ್ ನಲ್ಲಿ “ಬೆಂಗಳೂರು ಚಲೋ” ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಬೇಕಾಗಿತ್ತು ಎಂದು ನುಡಿದರು.

ಮುಖ್ಯಮಂತ್ರಿಗಳೇ, ಮನೆ ಮುರಿಯುವ ಕೆಲಸ ಮಾಡುವುದು ಸುಲಭ. ಮನೆ ಕಟ್ಟುವುದು ಅತ್ಯಂತ ಕಷ್ಟದ ಕೆಲಸ ಎಂದು ತಿಳಿಸಿದರು. ರಾಜ್ಯದ ಜನರು ನಿಮಗೆ ಆಶೀರ್ವಾದ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ತಂದಿದ್ದಾರೆ. ಈ ರಾಜ್ಯದ ಎಲ್ಲ ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಯಗಳು, ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡುವ ಅಪೇಕ್ಷೆ ಜನರಲ್ಲಿತ್ತು ಎಂದು ತಿಳಿಸಿದರು. ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಸರಕಾರವು ಶೋಷಿತರಿಗೆ ನ್ಯಾಯ ನೀಡುವ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆಕ್ಷೇಪಿಸಿದರು.

ಬಂಜಾರ, ಭೋವಿ, ಕೊರಚ, ಕೊರವ, ಅಲೆಮಾರಿ ಸಮುದಾಯದವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಹಿಂದೆ ಬಿಜೆಪಿ ಸರಕಾರ ಇದ್ದಾಗ ನಿಮ್ಮ ಸಮಾಜಕ್ಕೆ ಅನ್ಯಾಯ ಆಗಬಾರದೆಂದು ಶೇ 4.5 ರಷ್ಟು ಮೀಸಲಾತಿ ಕೊಟ್ಟಿದ್ದರು. ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡಲು ಶೇ 1 ಪ್ರತ್ಯೇಕವಾಗಿ ಇಡಲಾಗಿತ್ತು. ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರಕಾರ ಇದ್ದಾಗ ನಿಮ್ಮ ಪರವಾಗಿ ನಿರ್ಧಾರ ಮಾಡಿತ್ತು ಎಂದು ವಿವರಿಸಿದರು.

ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರು ತಾಂಡಾ ಅಭಿವೃದ್ಧಿ ನಿಗಮ, ಬೋವಿ ಅಭಿವೃದ್ಧಿ ನಿಗಮ ರಚಿಸಿದ್ದರು. ಅಲೆಮಾರಿ ಸಮುದಾಯ, ಕೊರಚ, ಕೊರಮ ಸೇರಿ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗದ ರೀತಿಯಲ್ಲಿ ಹಿಂದೆ ಯಡಿಯೂರಪ್ಪ ಅವರು ನೋಡಿಕೊಂಡಿದ್ದರು ಎಂದು ಗಮನ ಸೆಳೆದರು.

ಕಾಂಗ್ರೆಸ್ ಸರಕಾರದ ಒಡೆದಾಳುವ ನೀತಿ..

ಇವತ್ತು ಬ್ರಿಟಿಷರ ಒಡೆದಾಳುವ ನೀತಿಯನ್ನು ಕಾಂಗ್ರೆಸ್ ಸರಕಾರ ಅನುಸರಿಸುತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಬ್ರಿಟಿಷರ ಒಡೆದಾಳುವ ನೀತಿಯನ್ನು ಅನುಸರಿಸಿದೆ. ಬಂಜಾರ, ಭೋವಿ, ಕೊರಚ, ಕೊರವ, ಅಲೆಮಾರಿ ಸಮುದಾಯದವರಿಗೆ ಅನ್ಯಾಯ ಮಾಡುವ ಮತ್ತು ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಾಡಿದ್ದಾರೆ. ಮುಖ್ಯಮಂತ್ರಿಗಳನ್ನು ಆ ಭಗವಂತನೂ ಕ್ಷಮಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಡಾ. ಉಮೇಶ್ ಜಾಧವ್, ಶಾಸಕರಾದ ಪ್ರಭು ಚೌಹಾಣ್, ಎಂ. ಚಂದ್ರಪ್ಪ, ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಶಾಸಕರಾದ ಪಿ. ರಾಜೀವ್, ದೇವನಹಳ್ಳಿ ಚಂದ್ರಪ್ಪ, ಮಾಜಿ ಸಚಿವರು, ಮಾಜಿ ಶಾಸಕರು ಮತ್ತು ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ವಿಷ್ಣುವರ್ಧನ್ ಸ್ಮಾರಕಕ್ಕೆ 15 ಗುಂಟೆ ಜಮೀನಿಗೆ ಸ್ಯಾಂಡಲ್ ವುಡ್ ನಿರ್ಮಾಪಕರು ಸಚಿವ ಈಶ್ವರ್ ಖಂಡ್ರೆಗೆ ಮನವಿ

ಮಹಿಳೆಯರು ರಾತ್ರಿಯಲ್ಲಿ ಬ್ರಾ ಧರಿಸಿ ಮಲಗಿದರೆ ಈಗಲೇ ಜಾಗರೂಕರಾಗಿರಿ!

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

12/10/2025 7:00 AM1 Min Read

ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!

12/10/2025 6:50 AM2 Mins Read

BIG NEWS: ರಾಜ್ಯದ KPSC ಪರೀಕ್ಷೆ, ಮೌಲ್ಯಮಾಪನಕ್ಕೆ ನಿಯೋಜಿಸುವ ಸಿಬ್ಬಂದಿಗಳಿಗೆ ‘OOD’ ಕುರಿತು ಸರ್ಕಾರ ಮಹತ್ವದ ಆದೇಶ

12/10/2025 6:48 AM1 Min Read
Recent News

SHOCKING : ವಿಷ ಸೇವಿಸಿ ನಾಲ್ವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ : ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆ.!

12/10/2025 7:06 AM

’99 ಚುನಾವಣೆ ಸೋಲಿಗೆ ರಾಹುಲ್ ಗಾಂಧಿಗೆ ನೊಬೆಲ್ ಪ್ರಶಸ್ತಿ ಸಿಗಲಿದೆ’ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

12/10/2025 7:00 AM

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

12/10/2025 7:00 AM

ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!

12/10/2025 6:50 AM
State News
KARNATAKA

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

By kannadanewsnow5712/10/2025 7:00 AM KARNATAKA 1 Min Read

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ತಂದೆಯ ಸಾವಿನಿಂದ ಮನನೊಂದ ಮಗಳು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ…

ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!

12/10/2025 6:50 AM

BIG NEWS: ರಾಜ್ಯದ KPSC ಪರೀಕ್ಷೆ, ಮೌಲ್ಯಮಾಪನಕ್ಕೆ ನಿಯೋಜಿಸುವ ಸಿಬ್ಬಂದಿಗಳಿಗೆ ‘OOD’ ಕುರಿತು ಸರ್ಕಾರ ಮಹತ್ವದ ಆದೇಶ

12/10/2025 6:48 AM

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ಈ ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

12/10/2025 6:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.