Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಫುಡ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರು ದುರ್ಮರಣ!

06/07/2025 2:23 PM

BREAKING : ತುಮಕೂರಲ್ಲಿ ಭೀಕರ ಮರ್ಡರ್ : 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಪತ್ನಿಯ ಹತ್ಯೆಗೈದ ಪತಿ!

06/07/2025 2:16 PM

SHOCKING : ರಾಯಚೂರಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಯಿಂದ ಡೆಡ್ಲಿ ಅಟ್ಯಾಕ್ : ಮುಖ, ಕುತ್ತಿಗೆಗೆ ಕಚ್ಚಿ ಗಾಯ!

06/07/2025 2:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » PSI ಅನ್ನಪೂರ್ಣಗೆ ಅತ್ಯುನ್ನತ ಪದಕಕ್ಕೆ ಶಿಫಾರಸ್ಸು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
KARNATAKA

PSI ಅನ್ನಪೂರ್ಣಗೆ ಅತ್ಯುನ್ನತ ಪದಕಕ್ಕೆ ಶಿಫಾರಸ್ಸು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

By kannadanewsnow0914/04/2025 5:14 PM

ಬೆಳಗಾವಿ : ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್‌ಕೌಂಟರ್ ಮಾಡಿದ ಪಿಎಸ್‌ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸ್ಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸೋಮವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಪಿಎಸ್‌ಐ ಅನ್ನಪೂರ್ಣ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತೇನೆ. ನಾನು ಓರ್ವ ಸಚಿವೆಯಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ನಾನು ಹಿಂದಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇನೆ. ಇಂಥ ಪ್ರಕರಣದ ಆರೋಪಿಗಳಿಗೆ ಗಲ್ಲುಶಿಕ್ಷೆ ಆಗಬೇಕು, ದೌರ್ಜನ್ಯಕ್ಕೆ ಒಳಗಾದವರಿಗೆ ತ್ವರಿತವಾಗಿ ನ್ಯಾಯಸಿಗಬೇಕು. ಅನ್ನಪೂರ್ಣ ಅವರ ಕಾರ್ಯ ಇತರ ಅಧಿಕಾರಿಗಳಿಗೆ ದಾರಿ ದೀಪವಾಗಬೇಕು ಎಂದು ಸಚಿವರು ಹೇಳಿದರು.

ಇಂತಹ ಪಿಡುಗು ನಮ್ಮ ಸಮಾಜದಿಂದ ನಿರ್ಮೂಲನೆ ಆಗಬೇಕು. ಸರ್ಕಾರಿ ನೌಕರರಿಗೆ ನಮ್ಮ ಇಲಾಖೆಯಿಂದ ಕೊಡ ಮಾಡುವ ರಾಣಿ ಚನ್ನಮ್ಮ ಪ್ರಶಸ್ತಿ ನೀಡವುದಿಲ್ಲ. ಒಂದು ವೇಳೆ ಸರ್ಕಾರಿ ನೌಕರರಿಗೆ ಕೊಡಬೇಕು ಅಂತ ಬಂದರೆ ಅನ್ನಪೂರ್ಣ ಅವರ ಹೆಸರು ಮೊದಲಿರುತ್ತದೆ ಎಂದು ಉತ್ತರಿಸಿದರು.

ಇಂಥ ಘಟನೆ ನಡೆದಾಗ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಕರ್ನಾಟಕವನ್ನು ಬೇರೆ ರಾಜ್ಯಗಳಿಗೆ ಹೋಲಿಸಲು ನಾನು ಇಷ್ಟಪಡುವುದಿಲ್ಲ. ನಮ್ಮಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ನಮ್ಮನ್ನು ಟೀಕಿಸುವ ಬದಲಿಗೆ ಬಿಜೆಪಿಗರು ಮಣಿಪುರಕ್ಕೆ ಒಮ್ಮೆ ಭೇಟಿ ನೀಡಲಿ, ಪ್ರಧಾನಿ ನರೇಂದ್ರ ಮೋದಿ ಒಮ್ಮೆಯೂ ಅಲ್ಲಿಗೆ ಭೇಟಿ ಕೊಟ್ಟಿಲ್ಲ ಎಂದು ಸಚಿವರು ತಿರುಗೇಟು ನೀಡಿದರು.

ನಿಪ್ಪಾಣಿಯಲ್ಲಿ ಸರ್ಕಾರದಿಂದ ಕಾರ್ಯಕ್ರಮ

ನಿಪ್ಪಾಣಿಗೆ ಅಂಬೇಡ್ಕರ್ ಭೇಟಿ ನೀಡಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿಯವರು ಭೀಮ ಹೆಜ್ಜೆ ಹೆಸರಿನಲ್ಲಿ ಸಮಾವೇಶ ಮಾಡುತ್ತಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ಶ್ರದ್ಧಾ, ಭಕ್ತಿಯಿಂದ ನಂಬಿದೆ. ನಿಪ್ಪಾಣಿಯಲ್ಲಿ ಕಾರ್ಯಕ್ರಮ ಆಯೋಜನೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ಆಗಿದ್ದು, ಸರ್ಕಾರದಿಂದ ಕಾರ್ಯಕ್ರಮ ಮಾಡಲಾಗುವುದು ಎಂದರು.

ಜಾತಿ ಗಣತಿಗೆ ವಿರೋಧವಿಲ್ಲ

ಜಾತಿ ಗಣತಿ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಾತಿ ಗಣತಿಗೆ ನಮ್ಮ ವಿರೋಧ ಯಾವತ್ತೂ ಇಲ್ಲ. ವೀರಶೈವ- ಲಿಂಗಾಯತರನ್ನು ಪ್ರತ್ಯೇಕ ಮಾಡಿ ಗಣತಿ ಮಾಡಲಾಗಿದೆ. ಅದನ್ನು ಸರಿಪಡಿಸಿ ಇನ್ನೊಮ್ಮೆ ಗಣತಿಯನ್ನು ಇನ್ನೊಮ್ಮೆ ಮಾಡಬೇಕು. ಎಲ್ಲಾ ಜಾತಿಯಲ್ಲಿ ಜನರು ಹೆಚ್ಚಾಗಿದ್ದಾರೆ. ಅದರಂತೆ ನಮ್ಮ ವೀರಶೈವ, ಲಿಂಗಾಯತರಲ್ಲಿಯೂ ಜನ ಹೆಚ್ಚಾಗಿದ್ದಾರೆ. ಹೀಗಾಗಿ ವೀರಶೈವ- ಲಿಂಗಾಯತರು ಒಡೆದು ಹೋಗಿದ್ದು ಅಂಕಿ ಅಂಶ ಕಡಿಮೆ ಕಾಣಿಸುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

BIG NEWS: ಮುಸ್ಲೀಮರ ಮದುವೆ ‘ಕಾಂಟ್ರಾಕ್ಟ್ ಮ್ಯಾರೇಜ್’: ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ

ಗಮನಿಸಿ : ಎತ್ತರಕ್ಕೆ ಅನುಗುಣವಾಗಿ ದೇಹದ ತೂಕ ಎಷ್ಟಿರಬೇಕು ಗೊತ್ತಾ? ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಫುಡ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರು ದುರ್ಮರಣ!

06/07/2025 2:23 PM1 Min Read

BREAKING : ತುಮಕೂರಲ್ಲಿ ಭೀಕರ ಮರ್ಡರ್ : 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಪತ್ನಿಯ ಹತ್ಯೆಗೈದ ಪತಿ!

06/07/2025 2:16 PM1 Min Read

SHOCKING : ರಾಯಚೂರಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಯಿಂದ ಡೆಡ್ಲಿ ಅಟ್ಯಾಕ್ : ಮುಖ, ಕುತ್ತಿಗೆಗೆ ಕಚ್ಚಿ ಗಾಯ!

06/07/2025 2:12 PM1 Min Read
Recent News

BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಫುಡ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರು ದುರ್ಮರಣ!

06/07/2025 2:23 PM

BREAKING : ತುಮಕೂರಲ್ಲಿ ಭೀಕರ ಮರ್ಡರ್ : 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಪತ್ನಿಯ ಹತ್ಯೆಗೈದ ಪತಿ!

06/07/2025 2:16 PM

SHOCKING : ರಾಯಚೂರಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಯಿಂದ ಡೆಡ್ಲಿ ಅಟ್ಯಾಕ್ : ಮುಖ, ಕುತ್ತಿಗೆಗೆ ಕಚ್ಚಿ ಗಾಯ!

06/07/2025 2:12 PM

BREAKING : ರಾಯಚೂರಲ್ಲಿ ವೇಶ್ಯಾ ವಾಟಿಕೆ ಅಡ್ಡೆ ಮೇಲೆ ಪೋಲೀಸರ ದಾಳಿ : 6 ಮಹಿಳೆಯರ ರಕ್ಷಣೆ, ನಾಲ್ವರು ಅರೆಸ್ಟ್

06/07/2025 1:53 PM
State News
KARNATAKA

BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಫುಡ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರು ದುರ್ಮರಣ!

By kannadanewsnow0506/07/2025 2:23 PM KARNATAKA 1 Min Read

ಮೈಸೂರು : ತಡರಾತ್ರಿ ಮೈಸೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ…

BREAKING : ತುಮಕೂರಲ್ಲಿ ಭೀಕರ ಮರ್ಡರ್ : 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಪತ್ನಿಯ ಹತ್ಯೆಗೈದ ಪತಿ!

06/07/2025 2:16 PM

SHOCKING : ರಾಯಚೂರಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಯಿಂದ ಡೆಡ್ಲಿ ಅಟ್ಯಾಕ್ : ಮುಖ, ಕುತ್ತಿಗೆಗೆ ಕಚ್ಚಿ ಗಾಯ!

06/07/2025 2:12 PM

BREAKING : ರಾಯಚೂರಲ್ಲಿ ವೇಶ್ಯಾ ವಾಟಿಕೆ ಅಡ್ಡೆ ಮೇಲೆ ಪೋಲೀಸರ ದಾಳಿ : 6 ಮಹಿಳೆಯರ ರಕ್ಷಣೆ, ನಾಲ್ವರು ಅರೆಸ್ಟ್

06/07/2025 1:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.