ಕೊಪ್ಪಳ್ಳ: ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ್ ಅನುಮಾನಾಸ್ಪದ ರೀತಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. ಇಂತಹ ಅವರ ಮೃತದೇಹವನ್ನು ಇದೀಗ ಸ್ವಗ್ರಾಮ ಸೋಮನಾಳದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಯಾದಗಿರಿಗೆ ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಅನುಮಾನಾಸ್ಪದವಾಗಿ ಹಠಾತ್ ಸಾವನ್ನಪ್ಪಿದ್ದರು.
ಪಿಎಸ್ಐ ಪರಶುರಾಮ್ ಸಾವಿಗೆ ಶಾಸಕರು ಹಾಗೂ ಅವರ ಪುತ್ರ ಕಾರಣ ಎನ್ನಲಾಗಿತ್ತು. ಈ ಸಂಬಂಧ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ.
ಮೃತ ಪಿಎಸ್ಐ ಪರಶುರಾಮ್ ಅವರ ಪಾರ್ಥಿವ ಶರೀರವನ್ನು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮಕ್ಕೆ ಕೊಂಡಯ್ಯಲಾಗಿತ್ತು. ಪರಶುರಾಮ್ ಅವರ ಕುಟುಂಬಕ್ಕೆ ಸೇರಿದಂತ ಸ್ವಗ್ರಾಮ ಸೋಮನಾಳದಲ್ಲಿ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸರು. ಈ ಮೂಲಕ ಪಿಎಸ್ಐ ಪರಶುರಾಮ್ ಮಣ್ಣಲ್ಲಿ ಮಣ್ಣಾಗಿದ್ದಾರೆ.
ಪ್ರಧಾನಿ ಮಗ ‘ಸಿಎಂ’ ಆಗೋದು ದೊಡ್ಡದಲ್ಲ, ರೈತನ ಮಗ ‘ಡಿಸಿಎಂ’ ಆಗೋದು ದೊಡ್ಡ ವಿಚಾರ: ‘HDK’ಗೆ ಪ್ರದೀಪ್ ಈಶ್ವರ್ ಟಾಂಗ್
ವೀರಶೈವ, ಲಿಂಗಾಯತ ಸಮುದಾಯದವರಿಗೆ ಗುಡ್ ನ್ಯೂಸ್: ಈ ಯೋಜನೆಗಳಿಗೆ ಅರ್ಜಿ ಆಹ್ವಾನ