Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : ರಾಜ್ಯದಲ್ಲಿ ಯಾರಿಗೆಲ್ಲಾ `ಉಚಿತ ಬಸ್ ಪಾಸ್’ ಸೌಲಭ್ಯ ಇದೆ? ಇಲ್ಲಿದೆ ಮಾಹಿತಿ
KARNATAKA

ಸಾರ್ವಜನಿಕರೇ ಗಮನಿಸಿ : ರಾಜ್ಯದಲ್ಲಿ ಯಾರಿಗೆಲ್ಲಾ `ಉಚಿತ ಬಸ್ ಪಾಸ್’ ಸೌಲಭ್ಯ ಇದೆ? ಇಲ್ಲಿದೆ ಮಾಹಿತಿ

By kannadanewsnow57

ಬೆಂಗಳೂರು : ರಾಜ್ಯದ ಸಾರಿಗೆ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರು, ಅಂಗವಿಕಲರು, ಅಂಧರು, ಪತ್ರಕರ್ತರು, ಅಂಗವಿಕಲರು ಸೇರಿದಂತೆ ಹಲವರಿಗೆ ಉಚಿತ ಬಸ್ ಪಾಸ್ ಸೌಲಭ್ಯಗಳನ್ನು ನೀಡಲಾಗಿದೆ.

ರಾಜ್ಯದಲ್ಲಿ ಯಾರಿಗೆಲ್ಲಾ ಉಚಿತ ಬಸ್ ಪಾಸ್ ಇದೆ ಎಂಬ ಮಾಹಿತಿ ಇಲ್ಲಿದೆ

ಎಂಡೋಸಲ್ಫಾನ್ ಪೀಡಿತ ಸಂತ್ರಸ್ತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ

ಈ ಯೋಜನೆಗೆ ರೂ.8.04 ಕೋಟಿಗಳನ್ನು ಒದಗಿಸಲಾಗಿದ್ದು. ಈ ಯೋಜನೆಯನ್ನು 2013ರಲ್ಲಿ ಪ್ರಾರಂಭಿಸಲಾಯಿತು. ರಾಜ್ಯದ ಕರಾವಳಿ ಪ್ರದೇಶದಲ್ಲಿ ಸಾಮಾನ್ಯವಾಗಿ ಕಂಡುಬರುವ ಎಂಡೋಸಲ್ಫಾನ್ ಕಾಯಿಲೆಯಿಂದ ಬಳಲುತ್ತಿರುವ ಜನರ ಯೋಗಕ್ಷೇಮದ ದೃಷ್ಟಿಯಿಂದ ಎಂಡೋಸಲ್ಫಾನ್ ಪೀಡಿತರಿಗೆ ಅವರ ಸಹಾಯಕರೊಂದಿಗೆ ಪ್ರಯಾಣಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 4300 ಫಲಾನಿಭವಿಗಳಿಗೆ ಉಚಿತ ಬಸ್ ಪಾಸ್‌ಗಳನ್ನು ವಿತರಿಸಿದೆ. ನಾಲ್ಕು ರಸ್ತೆ ಸಾರಿಗೆ ನಿಗಮಗಳು ನಗರ, ಉಪನಗರ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ರಾಜ್ಯದೊಳಗೆ ಎಲ್ಲಿ ಬೇಕಾದರೂ ಪ್ರಯಾಣಿಸಲು ಅನುಮತಿಸಲಾಗಿದೆ.

 ಪತ್ರಕರ್ತರಿಗೆ ಉಚಿತ ಬಸ್

ಈ ಯೋಜನೆಗೆ ರೂ.0.50 ಕೋಟಿಯನ್ನು ಒದಗಿಸಲಾಗಿದ್ದು. ದಿನಾಂಕ:19.10.2010 ರಿಂದ (2010-11ನೇ ಸಾಲಿನಿಂದ) ವಾರ್ತಾ ಇಲಾಖೆಯಿಂದ ಗುರುತಿಸಲ್ಪಟ್ಟ ಮತ್ತು ಶಿಫಾರಸ್ಸು ಮಾಡಿದ ಮಾನ್ಯತೆ ಪಡೆದ ಪತ್ರಕರ್ತರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸ್ಮಾರ್ಟ್‌ ಕಾರ್ಡ್‌ಗಳನ್ನು ನೀಡಲಾಗುತ್ತದೆ ತಮ್ಮ ಪತ್ರಿಕಾ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ರಾಜ್ಯಾದ್ಯಂತ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ವಾರ್ತಾ ಇಲಾಖೆಯ ಬೇಡಿಕೆಯಂತೆ ಸ್ಮಾರ್ಟ್ ಕಾರ್ಡ್ ಮಾದರಿಯಲ್ಲಿ ಬಸ್ ಪಾಸ್ ಗಳನ್ನು ಸಿದ್ಧಪಡಿಸಿ ಪಾಲಿಕೆ ವತಿಯಿಂದ ವಾರ್ತಾ ಇಲಾಖೆಗೆ ನೀಡಲಾಗಿದೆ, ವಾರ್ತಾ ಇಲಾಖೆಯಿಂದ 2000 ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್‌ ಗಳನ್ನು ವಿತರಿಸಲು ಆದೇಶ ಹೊರಡಿಸಲಾಗಿದೆ.

ಅಂಧರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ

ಈ ಯೋಜನೆಗೆ ರೂ.20.39 ಕೋಟಿಗಳನ್ನು ಒದಗಿಸಲಾಗಿದ್ದು. ಈ ಯೋಜನೆಯನ್ನು 1978ರಲ್ಲಿ ಪ್ರಾರಂಭಿಸಲಾಯಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶೇ.100 ರಷ್ಟು ಅಂಧತ್ವ ಹೊಂದಿರುವ ಅಂಧರಿಗೆ ಉಚಿತ ಬಸ್‌ ಪಾಸ್‌ಗಳನ್ನು ವಿತರಿಸಲಾಗಿದೆ.ಈ ಪಾಸ್‌ನ ಸಿಂಧುತ್ವವು ಐದು ವರ್ಷಗಳು. ನಾಲ್ಕು ರಸ್ತೆ ಸಾರಿಗೆ ನಿಗಮಗಳು ನಿರ್ವಹಿಸುವ ನಗರ, ಉಪನಗರ, ಸಾಮಾನ್ಯ, ವೇಗದೂತ ಸೇವೆಗಳಲ್ಲಿ (ಅಂತರ ರಾಜ್ಯ ಸೇವೆಗಳನ್ನು ಒಳಗೊಂಡಂತೆ) 19825 ಫಲಾನುಭವಿಗಳು ಪುಯಾಣಿಸಲು ಅನುಮತಿಸಲಾಗಿದೆ.ಮತ್ತು ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಗೆ ಕ್ರಮವಾಗಿ, ರೂ.3.50 ಕೋಟಿ ಮತ್ತು ರೂ.1.42 ಕೋಟಿಗಳನ್ನು ಮೀಸಲಿಡಲಾಗಿದೆ.

ಅಂಗವಿಕಲರಿಗೆ ಉಚಿತ ಬಸ್ ಪಾಸ್ ಸೌಲಭ್ಯ

ಈ ಯೋಜನೆಗೆ ರೂ.23.45 ಕೋಟಿಗಳನ್ನು ಒದಗಿಸಲಾಗಿದ್ದು, ಈ ಯೋಜನೆಯನ್ನು 2003ರಲ್ಲಿ ಪ್ರಾರಂಭಿಸಲಾಯಿತು ದೈಹಿಕ ವಿಕಲಚೇತನರಿಗೆ ರಿಯಾಯಿತಿ ಪಾಸ್‌ಗಳನ್ನು ನೀಡಲು ಮಂಜೂರು ಮಾಡಲಾಗುವುದು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶೇ.40 ರಷ್ಟು ಮತ್ತು ಅದಕ್ಕಿಂತ ಹೆಚ್ಚಿನ ವಿಕಲಾಂಗ ಫಲಾನುಭವಿಗಳಿಗೆ ಬಸ್ ಪಾಸ್‌ಗಳನ್ನು ರಿಯಾಯಿತಿಯಲ್ಲಿ ನೀಡುತ್ತಿದೆ. ಈ ಫಲಾನುಭವಿಗಳು ತಮ್ಮ ನಿವಾಸದಿಂದ 100 ಕಿಮೀ ವ್ಯಾಪ್ತಿಯ ರಾಜ್ಯದೊಳಗೆ ರಿಯಾಯಿತಿ ಪಾಸ್ ಅನ್ನು ಬಳಸಬಹುದು. ನಾಲ್ಕು ರಸ್ತೆ ಸಾರಿಗೆ ನಿಗಮಗಳು ನಿರ್ವಹಿಸುವ ನಗರ, ಉಪನಗರ, ಸಾಮಾನ್ಯ, ವೇಗದೂತ ಸೇವೆಗಳಲ್ಲಿ 133000 ಫಲಾನುಭವಿಗಳಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಮತ್ತು ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಗೆ ಕ್ರಮವಾಗಿ ರೂ.4.02 ಕೋಟಿ ಮತ್ತು ರೂ.1.63 ಕೋಟಿಗಳನ್ನು ಮೀಸಲಿಡಲಾಗಿದೆ.

ಸ್ವಾತಂತ್ರ ಯೋಧರ ವಿಧವೆಯರ ಉಚಿತ ಬಸ್ ಪಾಸ್ ವಿತರಣೆ:

ಈ ಯೋಜನೆಗೆ ರೂ.0.02 ಕೋಟಿಗಳನ್ನು ಒದಗಿಸಲಾಗಿದ್ದು. ಈ ಯೋಜನೆಯನ್ನು 2009ರಲ್ಲಿ ಪ್ರಾರಂಭಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರ ವಿಧವೆಯರಿಗೆ ಉಚಿತ ಬಸ್ ಪಾಸ್ ನೀಡಲು. ಈ ಯೋಜನೆಯ ಅಡಿಯಲ್ಲಿ ರೂ.2,000/- ಮೌಲ್ಯದ ಉಚಿತ ಬಸ್ ಪ್ರಯಾಣ ಕೂಪನ್‌ಗಳನ್ನು ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯರು/ವಿಧವೆಯರಿಗೆ ನೀಡಲಾಗುತ್ತಿದೆ. ಕರ್ನಾಟಕ ಆಡಳಿತ ಸುಧಾರಣಾ ಸಮಿತಿ-2ರ ಮೊದಲ ವರದಿಗಳ ಶಿಫಾರಸ್ಸುಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ದಿನಾಂಕ:12.10.2021 ರಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡಾವಳಿಗಳ ಪ್ರಕಾರ ಜೀವಮಾನದ ಬಸ್ ಪಾಸ್‌ಗಳನ್ನು ವಿತರಿಸಲು ನಿರ್ದೇಶನವಿದೆ. ಸಾಮಾನ್ಯ ಸ್ಥಾಯಿ ಸಮಿತಿ ಆದೇಶ ಸಂಖ್ಯೆ.816/2022ರಲ್ಲಿ ಹೊರಡಿಸುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯರಿಗೆ/ವಿಧವೆಯರಿಗೆ ಜೀವಮಾನದ ಉಚಿತ ಬಸ್ ಪಾಸ್ ನೀಡಲು ನಿಗಮದಿಂದ ಕ್ರಮ ಕೈಗೊಳ್ಳಲಾಗಿದೆ.

ಈ ಪಾಸ್ ಹೊಂದಿರುವವರು ರಾಜ್ಯ ಮತ್ತು ಅಂತರ ರಾಜ್ಯದಾದ್ಯಂತ ಎಲ್ಲಾ ವರ್ಗದ ಬಸ್‌ಗಳಲ್ಲಿ ಪ್ರಯಾಣಿಸಲು ಅನುಮತಿಸಲಾಗಿದೆ. 75 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 110 ಫಲಾನುಭವಿಗಳು ಒಬ್ಬ ಸಂಗಾತಿಯೊಂದಿಗೆ ಪ್ರಯಾಣಿಸಲು ಅನುಮತಿಸಲಾಗಿದೆ.

ಹಿರಿಯ ನಾಗರಿಕರಿಗೆ ರಿಯಾಯಿತಿ ಪ್ರಯಾಣ ಸೌಲಭ್ಯ

ಈ ಯೋಜನೆಗೆ ರೂ.36.42 ಕೋಟಿಗಳನ್ನು ಒದಗಿಸಲಾಗಿದ್ದು, ಹಿರಿಯ ನಾಗರಿಕರಿಗೆ ರಿಯಾಯಿತಿ ಟಿಕೆಟ್‌ಗಳನ್ನು ಒದಗಿಸುವ ಯೋಜನೆ 2008ರಲ್ಲಿ ಪ್ರಾರಂಭಿಸಲಾಯಿತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕರ್ನಾಟಕ ರಾಜ್ಯದ 1640 ಹಿರಿಯ ನಾಗರಿಕರ ನಿವಾಸಗಳಿಗೆ ಟಿಕೆಟ್ ದರದ ಶೇ.25ರಷ್ಟು ರಿಯಾಯಿತಿಯನ್ನು ನೀಡಲಾಗಿರುತ್ತದೆ. ನಾಲ್ಕು ರಸ್ತೆ ಸಾರಿಗೆ ನಿಗಮಗಳು ನಿರ್ವಹಿಸುವ ನಗರ, ಉಪನಗರ, ಸಾಮಾನ್ಯ, ವೇಗದೂತ ಮತ್ತು ರಾಜಹಂಸ ಬಸ್‌ಗಳಲ್ಲಿ (ಅಂತರ ರಾಜ್ಯ ಬಸ್ಸುಗಳನ್ನು ಒಳಗೊಂಡಂತೆ) ಪ್ರಯಾಣಿಸಲು ಅವರಿಗೆ ಅನುಮತಿಸಲಾಗಿದೆ ಮತ್ತು ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕ್ರಮವಾಗಿ ರೂ.6.25 ಕೋಟಿ ಮತ್ತು ರೂ.2.53 ಕೋಟಿಗಳನ್ನು ಮೀಸಲಿಡಲಾಗಿದೆ.

ಹುತಾತ್ಮರ ಅವಲಂಬಿತರಿಗೆ ಉಚಿತ ಬಸ್ ಪಾಸ್

ಈ ಯೋಜನೆಗೆ ರೂ.1.51 ಕೋಟಿಗಳನ್ನು ಒದಗಿಸಲಾಗಿದ್ದು. ಈ ಯೋಜನೆಯನ್ನು 2012ರಲ್ಲಿ ಪ್ರಾರಂಭಿಸಲಾಯಿತು. ಅವಲಂಬಿತ ಹುತಾತ್ಮರಿಗೆ ಉಚಿತ ಪಾಸ್‌ಗಳನ್ನು ಒದಗಿಸಲು ದೇಶದ ರಕ್ಷಣೆಗಾಗಿ ಮಡಿದ ಹುತಾತ್ಮರ ಅವಲಂಬಿತರಿಗೆ 1350 ಉಚಿತ ಬಸ್ ಪಾಸ್ ನೀಡಲಾಗಿದೆ. ರಾಷ್ಟ್ರೀಯ ಸೇವೆ/ಯುದ್ಧದಲ್ಲಿ ಮಡಿದ ಹುತಾತ್ಮರ ಅವಲಂಬಿತರಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ. ನಾಲ್ಕು ರಸ್ತೆ ಸಾರಿಗೆ ನಿಗಮಗಳು ನಿರ್ವಹಿಸುವ ನಗರ, ಉಪನಗರ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ (ರಾಜ್ಯದೊಳಗೆ) ಪ್ರಯಾಣಿಸಲು ಅನುಮತಿಸಲಾಗಿದೆ.

ಗೋವಾ ಚಳುವಳಿಗಾರರಿಗೆ ಉಚಿತ ಬಸ್ ಪಾಸ್ ಸೌಲಭ್ಯ

ಈ ಯೋಜನೆಗೆ ರೂ.2.12 ಕೋಟಿ ಒದಗಿಸಲಾಗಿದ್ದು. 2017-18ನೇ ಸಾಲಿನಿಂದ ಗೋವಾ ವಿಮೋಚನಾ ಹೋರಾಟಗಾರರಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ. ಗೋವಾ ವಿಮೋಚನಾ ಆಂದೋಲನದಲ್ಲಿ ಭಾಗವಹಿಸಿದ ಕಾರ್ಯಕರ್ತರಿಗೆ ನಿಗಮವು 465 ಉಚಿತ ಬಸ್ ಪಾಸ್ ವಿತರಿಸಿದೆ. ಫಲಾನುಭವಿಗಳು ರಾಜ್ಯ ಮತ್ತು ಅಂತರರಾಜ್ಯ ಮಾರ್ಗಗಳಲ್ಲಿ ನಿಗಮದ ಎಲ್ಲಾ ವರ್ಗದ ಬಸ್‌ಗಳಲ್ಲಿ ಪ್ರಯಾಣಿಸಬಹುದು. 75 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಫಲಾನುಭವಿಗಳು ಒಬ್ಬರು ಸಹ ಪ್ರಯೋಶಿಕರೊಂದಿಗೆ ಉಚಿತವಾಗಿ ಪ್ರಯಾಣಿಸಬಹುದು.

ಸ್ವಾತಂತ್ರ ಹೋರಾಟಗಾರರಿಗೆ ಉಚಿತ ಬಸ್ ಪಾಸ್ ವಿತರಣೆ

ಈ ಯೋಜನೆಗೆ ರೂ.0.44 ಕೋಟಿಗಳನ್ನು ಒದಗಿಸಲಾಗಿದ್ದು. ಈ ಯೋಜನೆಯನ್ನು 1995 ರಿಂದ ಪ್ರಾರಂಭಿಸಲಾಯಿತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸ್ವಾತಂತ್ರ್ಯ ಹೋರಾಟಗಾರರಿಗೆ ಉಚಿತ ಬಸ್ ಪಾಸ್‌ಗಳನ್ನು ನೀಡುತ್ತಿದೆ.75 ವರ್ಷ ಮೇಲ್ಪಟ್ಟ ಸ್ವಾತಂತ್ರ ಹೋರಾಟಗಾರರು ಒಬ್ಬ ಸಹಾಯಕನೊಂದಿಗೆ ಮುಕ್ತವಾಗಿ ಪ್ರಯಾಣಿಸಲು ಅವಕಾಶವಿದೆ. ಅನುಷ್ಠಾನಕ್ಕೆ ಸಂಬಂಧಿಸಿದಂತೆ ದಿನಾಂಕ:12.10.2021 ರಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡಾವಳಿಗಳ ಪ್ರಕಾರ ಈ ಪ್ರಯಾಣಿಕರಿಗೆ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳು ನಿರ್ವಹಿಸುವ ಎಲ್ಲಾ ವರ್ಗದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ. ಕರ್ನಾಟಕ ಆಡಳಿತ ಸುಧಾರಣಾ ಸಮಿತಿ-2ರ ಮೊದಲ ವರದಿಗಳ ಶಿಫಾರಸುಗಳು ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯರು/ವಿಧವೆಯರಿಗೆ ಜೀವಮಾನದ ಬಸ್ ಪಾಸ್‌ಗಳನ್ನು ನೀಡಲು ನಿರ್ದೇಶನವಿದೆ.ಅದರಂತೆ ಸಾಮಾನ್ಯ ಸ್ಥಾಯಿ ಸಮಿತಿ ಆದೇಶ ಸಂಖ್ಯೆ.816/2022 ಹೊರಡಿಸುವ ಮೂಲಕ ಸ್ವಾತಂತ್ರ ಹೋರಾಟಗಾರರ ಪತ್ನಿಯರಿಗೆ/ವಿಧವೆಯರಿಗೆ ಜೀವಮಾನದ ಉಚಿತ ಬಸ್ ಪಾಸ್ ನೀಡಲು ನಿಗಮದಿಂದ ಕ್ರಮ ಕೈಗೊಳ್ಳಲಾಗಿದೆ. ಈ ಪಾಸ್ ಹೊಂದಿರುವವರು ರಾಜ್ಯ ಮತ್ತು ಅಂತರ ರಾಜ್ಯದಾದ್ಯಂತ ಎಲ್ಲಾ ವರ್ಗದ ಬಸ್‌ಗಳಲ್ಲಿ ಪಯಾಣಿಸಲು ಅನುಮತಿಸಲಾಗಿದೆ. 75 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 190 ಫಲಾನುಭವಿಗಳು ಒಬ್ಬ ಸಂಗಾತಿಯೊಂದಿಗೆ ಪ್ರಯಾಣಿಸಲು ಅನುಮತಿಸಲಾಗಿದೆ.

Public attention: Who in the state has the `free bus pass' facility? Here is the information
Share. Facebook Twitter LinkedIn WhatsApp Email

Related Posts

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

2 Mins Read
Recent News

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

State News
KARNATAKA

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: “ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಂತೆ ಜನಿವಾರ ಧರಿಸಲೂ ಅನುಮತಿ ನೀಡಲಾಗಿದೆ ಎಂಬ ವಾದ ಕರ್ನಾಟಕ ಸರ್ಕಾರದ್ದು. ಸದ್ಯ ‘ಉಡದಾರ’ ಧರಿಸಲು…

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.