Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನೂತನ ಸಂಪುಟ ಸೇರುವ ಮುಸ್ಲಿಂ ನಾಯಕರು ಯಾರು, ಸಂಭಾವ್ಯ ಸಚಿವರು ಯಾರು?

BIG NEWS : ಮೈಸೂರಲ್ಲಿ ಆನೆದಂತ ಮಾರಾಟಕ್ಕೆ ಯತ್ನ : ನಿವೃತ್ತ ಮಹಿಳಾ ಅಧಿಕಾರಿ ಸೇರಿ ನಾಲ್ವರು ಅರೆಸ್ಟ್!

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿಎಂ ಸಿದ್ದರಾಮಯ್ಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ‘ಕಸ ಸುರಿಯುವ ಹಬ್ಬ’ದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ: 2.80 ಲಕ್ಷ ದಂಡ ಸಂಗ್ರಹ
KARNATAKA

ಬೆಂಗಳೂರಲ್ಲಿ ‘ಕಸ ಸುರಿಯುವ ಹಬ್ಬ’ದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ: 2.80 ಲಕ್ಷ ದಂಡ ಸಂಗ್ರಹ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಬೆಂಗಳೂರು ನಗರದಲ್ಲಿ “ಕಸ ಸುರಿಯುವ ಹಬ್ಬ” ದ ಮೂಲಕ 218 ಮನೆಗಳ ಮುಂದೆ ಕಸ ಸುರಿದು 2.80 ಲಕ್ಷ ರೂ. ಗಳ ದಂಡ ವಿಧಿಸಲಾಗಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕರೀಗೌಡ ರವರು ತಿಳಿಸಿದರು. 

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಪ್ರತಿ ಮನೆಗೆ ಬೆಳಿಗ್ಗೆ ಆಟೋ ಟಿಪ್ಪರ್ ಗಳಲ್ಲಿ ಹೋಗಿ ಕಸವನ್ನು ಸಂಗ್ರಹಿಸಲಾಗುತ್ತಿದೆ. ಆದರೂ ಕೆಲ ಸಾರ್ವಜನಿಕರು ಕಸವನ್ನು ರಸ್ತೆ ಬದಿ, ಪಾದಚಾರಿ ಮಾರ್ಗ ಹಾಗೂ ಖಾಲಿ ಜಾಗಗಳಲ್ಲಿ ಎಸೆಯುತ್ತಿದ್ದಾರೆ.

ರಸ್ತೆ ಬದಿ ಕಸ ಸುರಿಯುವುದರಿಂದ ನಗರ ನೈರ್ಮಲ್ಯ ಹಾಳಾಗುತ್ತಿದೆ. ಇಂತಹ ಪ್ರಕರಣಗಳನ್ನು ತಪ್ಪಿಸುವ ಉದ್ದೇಶದಿಂದ  ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದಿಂದ ರಸ್ತೆ ಬದಿ ಕಸ ಬಿಸಾಡುವವರನ್ನು ಗುರುತಿಸಿ ಅವರ ಮನೆ ಮುಂದೆ ಕಸ ಬಿಸಾಡುವಂತಹ ವಿನೂತನ ಜಾಗೃತಿ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಆಟೋ ಟಿಪ್ಪರ್ ಗಳಿಗೆ ಕಸ ಕೊಡದೆ ರಾತ್ರಿ ವೇಳೆ ರಸ್ತೆ ಬದಿ ಹಾಗೂ ಇನ್ನಿತರೆ ಕಡೆ ಕಸ ಎಸೆಯುತ್ತಾರೆ. ಬೇರೆಯವರ ಮನೆ ಮುಂದೆ/ರಸ್ತೆಗಳಲ್ಲಿ ಕಸ ಬಿದ್ದಾಗ ಹೇಗೆ ಅನ್ನಿಸುತ್ತದೆ ಎಂದು ಮನವರಿಕೆ ಮಾಡಿಕೊಡುವ ಸಲುವಾಗಿ ಅವರ ಮನೆ ಮುಂದೆಯೇ ಕಸ ಸುರಿಯಲಾಗಿದೆ.

ಅದರಂತೆ, ರಸ್ತೆಗೆ ಕಸ ಎಸೆದಿರುವಂತಹ 218 ಮನೆಗಳ ಮುಂದೆ ಇಂದು ಕಸ ಸುರಿದು, ರೂ. 2,80,000 ಗಳ ಮೊತ್ತದ ದಂಡವನ್ನು ವಸೂಲಿ ಮಾಡಲಾಗಿದೆ. ತದನಂತರ ಕಸವನ್ನು ತೆರವುಗೊಳಿಸಲಾಗಿದೆ. ಬೆಂಗಳೂರು ನಗರದ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡಲು ದಯವಿಟ್ಟು ಸಹಕರಿಸಿ, ಆಟೋ ಟಿಪ್ಪರ್ ಬಂದಾಗ ಹಸಿ ಕಸ ಹಾಗೂ ಒಣ ಕಸವನ್ನು ಬೇರ್ಪಡಿಸಿ ಕಸವನ್ನು ನೀಡುವಂತೆ ಅವರು ತಿಳಿಸಿದ್ದಾರೆ.

ರಸ್ತೆ ಬದಿ ಕಸ ಎಸೆಯದಂತೆ ಜಾಗೃತಿ:

ರಸ್ತೆ ಬದಿ ಸೇರಿದಂತೆ ಎಲ್ಲೆಂದರಲ್ಲಿ ಕಸವನ್ನು ಎಸೆಯುವುದನ್ನು ನಿಲ್ಲಿಸಬೇಕಾಗಿದ್ದು, ನಗರ ಪಾಲಿಕೆ ವತಿಯಿಂದ ಮನೆ ಮನೆಗೆ ಬರುವ ಆಟೋ ಟಿಪ್ಪರ್ ಗಳಿಗೆ ಕಸವನ್ನು ಒಣ ಕಸ ಮತ್ತು ಹಸಿ ಕಸವನ್ನಾಗಿ ಬೇರ್ಪಡಿಸಿ ನೀಡುವ ಕುರಿತಾಗಿ ಹಾಗೂ ನಿಗದಿತ ಸಮಯದಲ್ಲಿ  ಕಸವನ್ನು  ನೀಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ನಗರ ವ್ಯಾಪ್ತಿಯಲ್ಲಿ 65 ಕಸ ಕಿಯೋಸ್ಕ್ ಸ್ಥಾಪನೆ:

ನಗರದಲ್ಲಿ ರಸ್ತೆ ಬದಿ ಕಸ ಬಿಸಾಡುವುದನ್ನು ನಿಯಂತ್ರಿಸುವ ಸಲುವಾಗಿ ನಗರದಾದ್ಯಂತ ಸುಮಾರು 65 ಕಸ ಕಿಯೋಸ್ಕ್ ಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಸ್ವಚ್ಛ ಬೆಂಗಳೂರಿನ ನಿರ್ಮಾಣಕ್ಕೆ ಇದು ಸಹಕಾರಿಯಾಗಲಿದ್ದು, ಈಗಾಗಲೇ ಬಿಟಿಎಂ ವ್ಯಾಪ್ತಿಯಲ್ಲಿ ಕಸ ಕಿಯೋಸ್ಕ್ ತೆರೆದಿದ್ದು, ನಾಗರಿಕರಿಂದ ಅದಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಕಸ ಕಿಯೋಸ್ಕ್ ನಿಂದ ಸ್ಥಳಿಯವಾಗಿ ಬ್ಲಾಕ್ ಸ್ಪಾಟ್ ಗಳ ನಿರ್ಮೂಲನೆ, ತ್ಯಾಜ್ಯ ದುರ್ವಾಸನೆ ಸೇರಿದಂತೆ ಇತರ ಸಮಸ್ಯೆಗಳನ್ನು ನಿಯಂತ್ರಿಸಬಹುದಾಗಿದೆ. ಪ್ರತಿ ಕಸ ಕಿಯೋಸ್ಕ್ ನಲ್ಲಿ 100 ಲೀಟರ್ ಸಾಮರ್ಥ್ಯದ ನಾಲ್ಕು ಸಂಗ್ರಹಣಾ ಬಿನ್ ಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ನಿಗದಿಪಡಿಸಿದ ಸಮಯದಲ್ಲಿ ತಮ್ಮ ಬೇರ್ಪಡಿಸಿದ ಕಸವನ್ನು ಯಾವುದೇ ಶುಲ್ಕವಿಲ್ಲದೆ ಈ ಕಿಯೋಸ್ಕ್  ಗಳಿಗೆ ಉಚಿತವಾಗಿ ನೀಡಬಹುದಾಗಿದೆ.

9448197197 ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸಿ:

ನಗರದ ಸ್ವಚ್ಛತೆಯ ದೃಷ್ಟಿಯಿಂದ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತವು ದೂರು ಕೇಂದ್ರ ಸ್ಥಾಪಿಸಿದ್ದು, ಅದಕ್ಕಾಗಿ ಪ್ರತ್ಯೇಕ ವ್ಯಾಟ್ಸಪ್ ಸಂಖ್ಯೆಯನ್ನು 9448197197 ನೀಡಿದೆ.  ಈ ಸಂಖ್ಯೆಗೆ ಛಾಯಾಚಿತ್ರದೊಂದಿಗೆ ಸಂದೇಶ ಕಳುಹಿಸುವ ಮೂಲಕ ದೂರು ದಾಖಲಿಸಬಹುದು.  ಆ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ತ್ಯಾಜ್ಯ ಅಥವಾ ಕಸ ವಿಲೇವಾರಿ ಮಾಡಿ ಸಮಸ್ಯೆ ಬಗೆಹರಿಸಲಿದ್ದಾರೆ.

‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಬೇಕಾದ ‘ಅಗತ್ಯ ದಾಖಲೆ’ಗಳಿವು

‘ಬೆಂಗಳೂರು ಗ್ರಾಮಾಂತರ ಸರ್ಕಾರಿ ನೌಕರರ ಸಂಘ’ದ ಜಿಲ್ಲಾಧ್ಯಕ್ಷರಾಗಿ ‘ಕೆ.ಹನುಮಂತರಾಯಪ್ಪ’ ಆಯ್ಕೆ

Share. Facebook Twitter LinkedIn WhatsApp Email

Related Posts

BIG NEWS : ನೂತನ ಸಂಪುಟ ಸೇರುವ ಮುಸ್ಲಿಂ ನಾಯಕರು ಯಾರು, ಸಂಭಾವ್ಯ ಸಚಿವರು ಯಾರು?

2 Mins Read

BIG NEWS : ಮೈಸೂರಲ್ಲಿ ಆನೆದಂತ ಮಾರಾಟಕ್ಕೆ ಯತ್ನ : ನಿವೃತ್ತ ಮಹಿಳಾ ಅಧಿಕಾರಿ ಸೇರಿ ನಾಲ್ವರು ಅರೆಸ್ಟ್!

2 Mins Read

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿಎಂ ಸಿದ್ದರಾಮಯ್ಯ

1 Min Read
Recent News

BIG NEWS : ನೂತನ ಸಂಪುಟ ಸೇರುವ ಮುಸ್ಲಿಂ ನಾಯಕರು ಯಾರು, ಸಂಭಾವ್ಯ ಸಚಿವರು ಯಾರು?

BIG NEWS : ಮೈಸೂರಲ್ಲಿ ಆನೆದಂತ ಮಾರಾಟಕ್ಕೆ ಯತ್ನ : ನಿವೃತ್ತ ಮಹಿಳಾ ಅಧಿಕಾರಿ ಸೇರಿ ನಾಲ್ವರು ಅರೆಸ್ಟ್!

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿಎಂ ಸಿದ್ದರಾಮಯ್ಯ

BIG NEWS : ಪಟ್ಟಾಭಿಷೇಕ ಮುಹೂರ್ತಕ್ಕೆ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಲಿರುವ ಡಿಕೆ ಶಿವಕುಮಾರ್!

State News
KARNATAKA

BIG NEWS : ನೂತನ ಸಂಪುಟ ಸೇರುವ ಮುಸ್ಲಿಂ ನಾಯಕರು ಯಾರು, ಸಂಭಾವ್ಯ ಸಚಿವರು ಯಾರು?

By ಸುರೇಶ್‌ KARNATAKA 2 Mins Read

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಷಣಕ್ಕೂ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು…

BIG NEWS : ಮೈಸೂರಲ್ಲಿ ಆನೆದಂತ ಮಾರಾಟಕ್ಕೆ ಯತ್ನ : ನಿವೃತ್ತ ಮಹಿಳಾ ಅಧಿಕಾರಿ ಸೇರಿ ನಾಲ್ವರು ಅರೆಸ್ಟ್!

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿಎಂ ಸಿದ್ದರಾಮಯ್ಯ

BIG NEWS : ಪಟ್ಟಾಭಿಷೇಕ ಮುಹೂರ್ತಕ್ಕೆ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಲಿರುವ ಡಿಕೆ ಶಿವಕುಮಾರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.