Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM

ವಿಜ್ಞಾನಿಗಳ ಅದ್ಭುತ ಆವಿಷ್ಕಾರ ; ‘ಮ್ಯಾಜಿಕ್ ಪ್ಲಾಸ್ಟಿಕ್’ ತಯಾರಿ, ನೀರಲ್ಲಿ ಹಾಕಿದ್ರೆ ತಕ್ಷಣ ಕರಗುತ್ತೆ

06/06/2025 9:03 PM

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

06/06/2025 8:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಮಾ.11ರಿಂದ ‘5, 8, 9ನೇ ತರಗತಿ ವಿದ್ಯಾರ್ಥಿ’ಗಳಿಗೆ ‘ಪಬ್ಲಿಕ್ ಪರೀಕ್ಷೆ’: ‘ಅಂತಿಮ ವೇಳಾಪಟ್ಟಿ’ ಪ್ರಕಟ
KARNATAKA

BIG NEWS: ಮಾ.11ರಿಂದ ‘5, 8, 9ನೇ ತರಗತಿ ವಿದ್ಯಾರ್ಥಿ’ಗಳಿಗೆ ‘ಪಬ್ಲಿಕ್ ಪರೀಕ್ಷೆ’: ‘ಅಂತಿಮ ವೇಳಾಪಟ್ಟಿ’ ಪ್ರಕಟ

By kannadanewsnow0905/01/2024 8:04 PM

ಬೆಂಗಳೂರು: ಈಗಾಗಲೇ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮಕ್ಕಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಾಂಕನ ( SA-2) ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5. 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನ (Summative Assessment-(SA-2) ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ. ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ವೆಬ್‌ಸೈಟ್‌ನಲ್ಲಿ https://kseab.karnataka.gov.in/ ನಲ್ಲಿ ಪ್ರಕಟಿಸಲಾಗಿದೆ.

ಮುಂದುವರೆದು ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು (ಆಡಳಿತ ಮತ್ತು ಅಭಿವೃದ್ಧಿ) ಹಾಗೂ ಎಲ್ಲಾ ಬ್ಲಾಕುಗಳ ಕ್ಷೇತ್ರಶಿಕ್ಷಣಾಧಿಕಾರಿಗಳು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು/ ಪ್ರಾಂಶುಪಾಲರುಗಳಿಗೆ, ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಲು ತಿಳಿಸಿದೆ ಹಾಗೂ ಸದರಿ ಮೌಲ್ಯಾಂಕನ ಕುರಿತು ಸುತ್ತೋಲೆಯನ್ನು ಶೀಘ್ರದಲ್ಲಿಯೇ ನೀಡಲಾಗುವುದು ಎಂದು ತಿಳಿಸಲಾಗಿದೆ‌.

ಹೀಗಿದೆ 5, 8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯ ಅಂತಿಮ ವೇಳಾಪಟ್ಟಿ

ಹೀಗಿದೆ ಮಾರ್ಚ್-2024ರ 5ನೇ ತರಗತಿ ಮೌಲ್ಯಾಂಕನ ಕಾರ್ಯದ ತಾತ್ಕಾಲಿಕ ವೇಳಾಪಟ್ಟಿ

  • ದಿನಾಂಕ 11-03-2024ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು.
  • ದಿನಾಂಕ 12-03-2023ರ ಮಂಗಳವಾರ- ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
  • ದಿನಾಂಕ 13-03-2024ರ ಬುಧವಾರ – ಕೋರ್ ವಿಷಯ – ಪರಿಸರ ಅಧ್ಯಯನ
  • ದಿನಾಂಕ 14-03-2024ರ ಗುರುವಾರ- ಕೋರ್ ವಿಷಯ – ಗಣಿತ

ಹೀಗಿದೆ ಮಾರ್ಚ್-2024ರ 8ನೇ ತರಗತಿ ಮೌಲ್ಯಾಂಕನ ಕಾರ್ಯದ ತಾತ್ಕಾಲಿಕ ವೇಳಾಪಟ್ಟಿ

  • ದಿನಾಂಕ 11-03-2024ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಇಂಗ್ಲೀಷ್ ( NCERT), ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು, ಸಂಸ್ಕೃತ
  • ದಿನಾಂಕ 12-03-2024ರ ಮಂಗಳವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ.
  • ದಿನಾಂಕ 13-03-2024ರ ಬುಧವಾರ – ತೃತೀಯ ಭಾಷೆ – ಹಿಂದಿ, ಹಿಂದಿ ( NCERT), ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • ದಿನಾಂಕ 14-03-2024ರ ಗುರುವಾರ – ಕೋರ್ ವಿಷಯ – ಗಣಿತ.
  • ದಿನಾಂಕ 15-03-2024ರ ಶುಕ್ರವಾರ – ಕೋರ್ ವಿಷಯ – ವಿಜ್ಞಾನ.
  • ದಿನಾಂಕ 16-03-2024ರ ಶನಿವಾರ – ಕೋರ್ ವಿಷಯ- ಸಮಾಜ ವಿಜ್ಞಾನ.
  • ದಿನಾಂಕ 18-03-2024ರ ಸೋಮವಾರ – ದೈಹಿಕ ಶಿಕ್ಷಣ.

ಹೀಗಿದೆ ಮಾರ್ಚ್-2024ರ 9ನೇ ತರಗತಿ ಮೌಲ್ಯಾಂಕನ ಕಾರ್ಯದ ತಾತ್ಕಾಲಿಕ ವೇಳಾಪಟ್ಟಿ

  • ದಿನಾಂಕ 11-03-2024ರ ಸೋಮವಾರ- ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಇಂಗ್ಲೀಷ್(NCERT), ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು, ಸಂಸ್ಕೃತ.
  • ದಿನಾಂಕ 12-03-2024ರ ಮಂಗಳವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ.
  • ದಿನಾಂಕ 13-03-2024ರ ಬುಧವಾರ – ತೃತೀಯ ಭಾಷೆ – ಹಿಂದಿ, ಹಿಂದಿ ( NCERT), ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • ದಿನಾಂಕ 14-03-2024ರ ಗುರುವಾರ – ಕೋರ್ ವಿಷಯ – ಗಣಿತ
  • ದಿನಾಂಕ 15-03-2024ರ ಶುಕ್ರವಾರ – ಕೋರ್ ವಿಷಯ – ವಿಜ್ಞಾನ
  • ದಿನಾಂಕ 16-03-2024ರ ಶನಿವಾರ – ಕೋರ್ ವಿಷಯ – ಸಮಾಜ ವಿಜ್ಞಾನ
  • ದಿನಾಂಕ 18-03-2024ರ ಸೋಮವಾರ – ದೈಹಿಕ ಶಿಕ್ಷಣ.

ಗಮನಿಸಿ: ‘KSRTC ತಾಂತ್ರಿಕ ಸಹಾಯಕ ಹುದ್ದೆ’ಯ ‘ಸಂಭವನೀಯ ಆಯ್ಕೆ ಪಟ್ಟಿ’ ಪ್ರಕಟ

BREAKING : ಅಪಹರಣಕ್ಕೊಳಗಾದ ಸರಕು ಹಡಗು ನೌಕಾಪಡೆ ವಶಕ್ಕೆ ; ಕಡಲ್ಗಳ್ಳರಿಗೆ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM1 Min Read

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

06/06/2025 8:44 PM2 Mins Read

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ಐವರು ‘IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

06/06/2025 8:38 PM1 Min Read
Recent News

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM

ವಿಜ್ಞಾನಿಗಳ ಅದ್ಭುತ ಆವಿಷ್ಕಾರ ; ‘ಮ್ಯಾಜಿಕ್ ಪ್ಲಾಸ್ಟಿಕ್’ ತಯಾರಿ, ನೀರಲ್ಲಿ ಹಾಕಿದ್ರೆ ತಕ್ಷಣ ಕರಗುತ್ತೆ

06/06/2025 9:03 PM

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

06/06/2025 8:44 PM

ಕೊರೊನಾ ಕೇಸ್ ಹೆಚ್ಚಳದ ನಡುವೆ ‘ಸ್ಪ್ಯಾಮ್ ಸಂದೇಶ’ಗಳ ಕಾಟ, ಆಸ್ಪತ್ರೆಗಳಿಂದ ವೈಯಕ್ತಿಕ ಡೇಟಾ ದುರುಪಯೋಗ ; ಸಮೀಕ್ಷೆ

06/06/2025 8:40 PM
State News
KARNATAKA

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

By kannadanewsnow0906/06/2025 9:18 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ 10ಕ್ಕೂ ಪ್ರಯಾಣಿಕರಿಗೆ ಗಾಯವಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಮೈಸೂರು…

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

06/06/2025 8:44 PM

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ಐವರು ‘IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

06/06/2025 8:38 PM

BIG NEWS: ಜೂ.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

06/06/2025 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.