Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಕ್ರೇನ್ ಮೇಲೆ ರಷ್ಯಾ ದಾಳಿ : ಪುಟಿನ್ “ಸಂಪೂರ್ಣವಾಗಿ ಹುಚ್ಚ” ಎಂದು ಕರೆದ ಹೀಗಳಿಸಿದ ಟ್ರಂಪ್

26/05/2025 7:59 AM

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಎರಡೂವರೆ ವರ್ಷದ ಬಾಲಕಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ.!

26/05/2025 7:57 AM

ALERT : ಚಹಾ ಜೊತೆ ಸಿಗರೇಟ್ ಸೇದುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು ಹುಷಾರ್.!

26/05/2025 7:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : ‘ಹೀಟ್ ಸ್ಟ್ರೋಕ್’ ತಪ್ಪಿಸಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ
INDIA

ಸಾರ್ವಜನಿಕರೇ ಗಮನಿಸಿ : ‘ಹೀಟ್ ಸ್ಟ್ರೋಕ್’ ತಪ್ಪಿಸಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ

By kannadanewsnow5728/04/2024 1:07 PM

ಭಾರತೀಯ ಹವಾಮಾನ ಇಲಾಖೆಯು ಪ್ರಸ್ತುತ ಹಾಗೂ ಮೇ ಅಂತ್ಯದವರೆಗೆ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚರಿಕೆಯನ್ನು ನೀಡಿರುತ್ತದೆ. ಜಿಲ್ಲೆಯಲ್ಲಿ ಸೂರ್ಯನ ಶಾಖವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್‍ವೇವ್ (ಶಾಖದ ಹೊಡೆತ) ಸ್ಟ್ರೋಕ್‍ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಎಲ್ಲಾ ಸಾರ್ವಜನಿಕರಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಲಹೆಗಳನ್ನು ನೀಡಿದೆ.

ಬೇಸಿಗೆಯಲ್ಲಿನ ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ವಹಿಸಬೇಕಾದ ಸೂಚನೆಗಳು : ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು. (ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ), ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದು. ಮಜ್ಜಿಗೆ, ಎಳನೀರು, ಹಣ್ಣಿನ ರಸ, ಗ್ಲೂಕೋಸ್, ಓಆರ್‍ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು. ಸಾರ್ವಜನಿಕರು ಬಿಸಿಲಿನ ದಿನಗಳಲ್ಲಿ ಕೊಡೆ/ಛತ್ರಿ ಹಾಗೂ ತಂಪು ಕನ್ನಡಕ, ಟವಲ್ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯುವುದು, ತೆಳುವಾದ ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸಬೇಕು. ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಗಾಳಿಯಾಡುವ ಪಾದರಕ್ಷೆ ಧರಿಸಬೇಕು.

ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಬೇಕು. ಹಿರಿಯ ನಾಗರಿಕರು ಹಾಗೂ ಮಕ್ಕಳು ಹೆಚ್ಚು ನೀರು ಕುಡಿಯಬೇಕು. ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು, ಹೀಟ್ ಸ್ಟ್ರೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಬಾತ್ ಮಾಡಬೇಕು ಅಥವಾ ಐಸ್ ಪ್ಯಾಕ್‍ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್‍ಪ್ಯಾಕ್‍ಗಳ ಮದ್ಯ ಇಡಬಹುದು.

ಹೀಟ್‍ವೇವ್ ಸ್ಟ್ರೋಕ್‍ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡು ಬರದಿದ್ದರೆ ಅವರನ್ನು ಕೂಲಿಂಗ್ ವ್ಯವಸ್ಥೆಯೊಂದಿಗೆ ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಹೊರಾಂಗಣದಲ್ಲಿ ಬಿಸಿಲಿನಲ್ಲಿ ಕೆಲಸ ಮಾಡುವವರಿಗೆ ಕಡ್ಡಾಯ ವಿರಾಮವನ್ನು ನಿಗಧಿಪಡಿಸುವುದು, ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬಾರದು. ಬೇಸಿಗೆ ದಿನಗಳಲ್ಲಿ ತಣ್ಣೀರಿನ ಸ್ನಾನ ಒಳ್ಳೆಯದು ಎಂದು ಸೂಚನೆ ನೀಡಲಾಗಿದೆ.

Public should note: Follow these precautionary measures to avoid 'heat stroke' ಸಾರ್ವಜನಿಕರೇ ಗಮನಿಸಿ : ‘ಹೀಟ್ ಸ್ಟ್ರೋಕ್’ ತಪ್ಪಿಸಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ
Share. Facebook Twitter LinkedIn WhatsApp Email

Related Posts

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಎರಡೂವರೆ ವರ್ಷದ ಬಾಲಕಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ.!

26/05/2025 7:57 AM1 Min Read

BIG NEWS : ಪ್ರಸ್ತುತ ಕೋವಿಡ್ ಪ್ರಕರಣಗಳು ಸಂಪೂರ್ಣವಾಗಿ ಹೊಸ ರೂಪಾಂತರದಿಂದ ಉಂಟಾಗಿಲ್ಲ: ತಜ್ಞರು

26/05/2025 7:48 AM1 Min Read

ಭಾರತಕ್ಕೆ, ಚೀನಾ ನಂ.1 ಎದುರಾಳಿ, ಪಾಕಿಸ್ತಾನ ‘ಪೂರಕ’ ಭದ್ರತಾ ಸಮಸ್ಯೆ: US ವರದಿ

26/05/2025 7:40 AM1 Min Read
Recent News

ಉಕ್ರೇನ್ ಮೇಲೆ ರಷ್ಯಾ ದಾಳಿ : ಪುಟಿನ್ “ಸಂಪೂರ್ಣವಾಗಿ ಹುಚ್ಚ” ಎಂದು ಕರೆದ ಹೀಗಳಿಸಿದ ಟ್ರಂಪ್

26/05/2025 7:59 AM

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಎರಡೂವರೆ ವರ್ಷದ ಬಾಲಕಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ.!

26/05/2025 7:57 AM

ALERT : ಚಹಾ ಜೊತೆ ಸಿಗರೇಟ್ ಸೇದುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು ಹುಷಾರ್.!

26/05/2025 7:53 AM

BIG NEWS : ಪ್ರಸ್ತುತ ಕೋವಿಡ್ ಪ್ರಕರಣಗಳು ಸಂಪೂರ್ಣವಾಗಿ ಹೊಸ ರೂಪಾಂತರದಿಂದ ಉಂಟಾಗಿಲ್ಲ: ತಜ್ಞರು

26/05/2025 7:48 AM
State News
KARNATAKA

ALERT : ಚಹಾ ಜೊತೆ ಸಿಗರೇಟ್ ಸೇದುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು ಹುಷಾರ್.!

By kannadanewsnow5726/05/2025 7:53 AM KARNATAKA 2 Mins Read

ಚಹಾ ಮತ್ತು ಸಿಗರೇಟ್ ಗೆ ಅನೇಕ ಜನರು ವ್ಯಸನಿಗಳಾಗಿದ್ದಾರೆ. ಈ ಸಂಯೋಜನೆಯು ನಿಮ್ಮ ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾಗಿದೆ ಮತ್ತು ನಿಮ್ಮ…

ನೀತಿ ಆಯೋಗದ ಸಭೆಗೆ ಗೈರು : ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗರಂ

26/05/2025 7:33 AM

ಸಾರ್ವಜನಿಕರೇ ಗಮನಿಸಿ : ಖರೀದಿಸುವಾಗ `ಚಿನ್ನ’ದ ಶುದ್ಧತೆಯನ್ನು ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

26/05/2025 7:18 AM

ಕೋವಿಡ್ ಲಕ್ಷಣ ಇರುವವರಿಗೆ RT -PCR ಪರೀಕ್ಷೆ: ಸಚಿವ ಶರಣ ಪ್ರಕಾಶ ಪಾಟೀಲ್ | Covid-19

26/05/2025 7:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.