ಕೆಎನ್ ಎನ್ ನ್ಯೂಸ್ ಡೆಸ್ಕ್ : ಪಂಜಾಬಿ ನಟ ರಾಣಾ ಜಂಗ್ ಬಹದ್ದೂರ್ ಅವರು ಭಗವಾನ್ ವಾಲ್ಮೀಕಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ದೂರು ದಾಖಲಾಗಿದೆ. ಹೀಗಾಗಿ ಅವರನ್ನು ಬುಧವಾರ ಜಲಂಧರ್ ಪೊಲೀಸರು ಬಂಧಿಸಿದ್ದಾರೆ.
ವರದಿಗಳ ಪ್ರಕಾರ, ನಟ ರಾಣಾ ಜಂಗ್ ಬಹದ್ದೂರ್ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಭಗವಾನ್ ವಾಲ್ಮೀಕಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ, ಜನರ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸಿದ್ದರು. ಈ ಹೇಳಿಕೆಗಳು ಜಲಂಧರ್ನಲ್ಲಿ ಪ್ರತಿಭಟನೆಗೆ ಕಾರಣವಾಗಿದೆ. ಈ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ರಾಣಾ ಜಂಗ್ನನ್ನು ಬಂಧಿಸಿದ್ದಾರೆ.
ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 295 ರ ಅಡಿಯಲ್ಲಿ ರಾಣಾನನ್ನು ಬಂಧಿಸಲಾಗಿದೆ ಎಂದು ಜಲಂಧರ್ ಉಪ ಪೊಲೀಸ್ (ಡಿಸಿಪಿ) ಜಸ್ಕಿರಂಜಿತ್ ಸಿಂಗ್ ತೇಜಾ ಹೇಳಿದ್ದಾರೆ.
ಇಂತಹ ಹೇಳಿಕೆ ನೀಡಿದ್ದಕ್ಕಾಗಿ ರಾಣಾ ಜಂಗ್ ಕ್ಷಮೆಯಾಚಿಸಿದ್ದಾರೆ. “ನನ್ನ ಹೇಳಿಕೆಗಳಿಂದ ಆಕ್ರೋಶಗೊಂಡ ಜನರಲ್ಲಿ ನಾನು ಮನಃಪೂರ್ವಕವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ. ಸಮಾಜ ದೊಡ್ಡದು. ಆದರೆ, ನಾನು ಚಿಕ್ಕವನು. ನಾನು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ. ನಾನು ಕೇವಲ ನಟ. ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದು ಉಲ್ಲೇಖಿಸಿದ್ದಾರೆ.
ಈ ಹಿಂದೆ ಜಲಂಧರ್ನ ಭಗವಾನ್ ವಾಲ್ಮೀಕಿ ಚೌಕ್ನಲ್ಲಿ ವಾಲ್ಮೀಕಿ ಸಮುದಾಯದವರು ಧರಣಿ ಸತ್ಯಾಗ್ರಹ ನಡೆಸಿದ್ದರು. ಜಲಂಧರ್ನ ಬಸ್ ನಿಲ್ದಾಣದ ಬಳಿ ರಾಣಾ ಜಂಗ್ ಬಹದ್ದೂರ್ ಅವರ ಪ್ರತಿಕೃತಿಯನ್ನು ಸುಟ್ಟು ಹಾಕಿದ್ದರು. ಹೋಶಿಯಾರ್ಪುರ ಮತ್ತು ಅಮೃತಸರದಲ್ಲೂ ಇದೇ ರೀತಿಯ ಪ್ರತಿಭಟನೆಗಳು ನಡೆದವು.