ಕರ್ನಾಟಕ ಹೈಕೋರ್ಟ್ ನಲ್ಲಿ ಕನ್ನಡದಲ್ಲೇ ವಿಚಾರಣೆ ನಡೆಸಲು ಪುರುಷೋತ್ತಮ ಬಿಳಿಮಲೆ ಆಗ್ರಹ
ಬೆಂಗಳೂರು: ಕೆಲವೇ ಗೌರವಾನ್ವಿತ ನ್ಯಾಯಾಧೀಶರುಗಳ ವಿಶೇಷ ಆಸಕ್ತಿಯಿಂದ ಕನ್ನಡ ಭಾಷೆ ನ್ಯಾಯಾಲಯ ವ್ಯವಸ್ಥೆಯಲ್ಲಿ ಉಸಿರಾಡುತ್ತಿದ್ದು, ಕಕ್ಷಿದಾರರು, ನ್ಯಾಯವಾದಿಗಳು ಕನ್ನಡದವರೇ ಆಗಿದ್ದರೂ ಸಹ ವಿಚಾರಣೆಗಳು, ತೀರ್ಪುಗಳು ಸಾಮಾನ್ಯವಾಗಿ ಆಂಗ್ಲ ಭಾಷೆಯಲ್ಲಿ ಇರುವುದು ವ್ಯವಸ್ಥೆಯ ಅಣಕವಾಗಿದ್ದು, ರಾಜ್ಯ ಉಚ್ಚ ನ್ಯಾಯಾಲಯವು ಕನ್ನಡದಲ್ಲಿ ವಿಚಾರಣ ವ್ಯವಸ್ಥೆಯನ್ನು ಜಾರಿಯಲ್ಲಿಡುವಲ್ಲಿ ಗಂಭೀರವಾಗಿ ಚಿಂತಿಸಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಈ ಕುರಿತಂತೆ ರಾಜ್ಯ ಉಚ್ಚ ನ್ಯಾಯಾಲಯ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದಿರುವ ಬಿಳಿಮಲೆ, ಕನ್ನಡದಲ್ಲಿ ನ್ಯಾಯದಾನವನ್ನು … Continue reading ಕರ್ನಾಟಕ ಹೈಕೋರ್ಟ್ ನಲ್ಲಿ ಕನ್ನಡದಲ್ಲೇ ವಿಚಾರಣೆ ನಡೆಸಲು ಪುರುಷೋತ್ತಮ ಬಿಳಿಮಲೆ ಆಗ್ರಹ
Copy and paste this URL into your WordPress site to embed
Copy and paste this code into your site to embed