ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಹಿರಿಯ ಪತ್ರಕರ್ತ ಪುಷ್ಪರಾಜ್ ಶೆಟ್ಟಿ ಭರ್ಜರಿ ಗೆಲುವು ಸಾಧಿಸಿ, ಚುನಾಯಿತರಾಗಿದ್ದಾರೆ.
ಇಂದು ರಾಜ್ಯದ 20 ಜಿಲ್ಲೆಗಳಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕಗಳಿಗೆ ಪದಾಧಿಕಾರಿಗಳ ಆಯ್ಕೆಗಾಗಿ ಮತದಾನ ನಡೆಯಿತು. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜಿಲ್ಲಾ ಘಟಕಕ್ಕೂ ಮತದಾನ ನಡೆಯಿತು.
ಇಂದು ನಡೆದಂತ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪುಷ್ಪರಾಜ್ ಬಿಎನ್ ಹಾಗೂ ಶ್ರವಣ್ ಕುಮಾರ್.ಕೆ ಸ್ಪರ್ಧಿಸಿದ್ದರು. ಇವರಲ್ಲಿ ಪುಷ್ಪರಾಜ್ ಬಿಎನ್ ಅವರು 187 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದರೇ, ಶ್ರವಣ್ ಕುಮಾರ್ ಕೆ. 144 ಮತಗಳನ್ನು ಪಡೆಯುವ ಮೂಲಕ ಸೋಲು ಕಂಡಿದ್ದಾರೆ.
ಹೀಗಿದೆ ದಕ್ಷಿಣ ಕನ್ನಡ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಆಯ್ಕೆಗೊಂಡವರ ವಿವರ
- ಅಧ್ಯಕ್ಷರಾಗಿ ಪುಷ್ಪರಾಜ್ ಬಿಎನ್ ಆಯ್ಕೆ
- ಉಪಾಧ್ಯಕ್ಷರಾಗಿ ವಿಲ್ ಫ್ರೆಡ್ ಡಿಸೋಜಾ, ಮುಹಮ್ಮದ್ ಆರೀಫ್, ರಾಜೇಶ್ ಶೆಟ್ಟಿ ಆಯ್ಕೆ
- ಕಾರ್ಯದರ್ಶಿ ಸ್ಥಾನಕ್ಕೆ ಎ.ಸಿದ್ಧಿಕ್ ನೀರಾಜೆ, ಸುರೇಶ್ ಡಿ ಪಳ್ಳಿ, ಸತೀಶ್ ಇರಾ ವಿಜೇತರಾಗಿದ್ದಾರೆ.
- ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ಹಾಲಿ ಅಧ್ಯಕ್ಷರಾಗಿದ್ದ ಶ್ರೀನಿವಾಸ ನಾಯಕ್.ಕೆ ಗೆಲುವು ಸಾಧಿಸಿದ್ದಾರೆ.
- ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದಂತ ಅಶೋಕ್ ಶೆಟ್ಟಿ ಬಿಎನ್, ಸಂದೇಶ್ ಜಾರ, ಸಂದೀಪ್ ಕುಮಾರ್.ಎಂ, ಲಕ್ಷ್ಮೀನಾರಾಯಣ ರಾವ್, ಹರೀಶ್ ಮೋಟುಕಾನ, ದಿವಾಕರ ಪದ್ಮುಂಜ, ಕಿರಣ್ ಯು ಸಿರ್ಸೀಕರ್, ಅಭಿಷೇಕ್ ಹೆಚ್.ಎಸ್, ಜಯಶ್ರೀ, ಭುವನೇಶ್ವರ ಜಿ, ಸಂದೀಪ್ ವಾಗ್ಲೆ, ಹರೀಶ್ ಕೆ. ಆದೂರ್, ಗಿರೀಶ್ ಅಡ್ಪಂಗಾಯ, ಸಂದೀಪ್ ಸಾಲ್ಯಾನ್ ಹಾಗೂ ಆರೀಫ್ ಕಲ್ಕಟ್ಟ ವಿಜೇತರಾಗಿದ್ದಾರೆ.


BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ
BREAKING: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರದ ತಡೆ: ಪರಿಸರವಾದಿಗಳ ಹೋರಾಟಕ್ಕೆ ಗೆಲುವು








