Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಖ್ಯಾತ ವಿದ್ವಾಂಸ, ಬರಹಗಾರ ದಾಜಿ ಪನ್ಶಿಕರ್ ನಿಧನ| Daji Panshikar passes away

07/06/2025 10:38 AM

ಈದ್‌ ಸಂಭ್ರಮ: ಶುಭಾಶಯ ಕೋರಿದ ಪ್ರಧಾನಿ ಮೋದಿ

07/06/2025 10:24 AM

ನಿರೀಕ್ಷಣಾ ಜಾಮೀನು ಯಾಂತ್ರಿಕವಾಗಿ ನೀಡಬಾರದು: ಸುಪ್ರೀಂ ಕೋರ್ಟ್ | Anticipatory bail

07/06/2025 10:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಆರ್. ಅಶೋಕ್’ಗೆ ಕಾಂಗ್ರೆಸ್ ಪಕ್ಷ, ಸರ್ಕಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆಯಿಲ್ಲ: ರಮೇಶ್ ಬಾಬು ವಾಗ್ಧಾಳಿ
KARNATAKA

‘ಆರ್. ಅಶೋಕ್’ಗೆ ಕಾಂಗ್ರೆಸ್ ಪಕ್ಷ, ಸರ್ಕಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆಯಿಲ್ಲ: ರಮೇಶ್ ಬಾಬು ವಾಗ್ಧಾಳಿ

By kannadanewsnow0903/11/2024 5:13 PM

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಲೊಟ್ಟೆಗೊಲ್ಲ ಹಳ್ಳಿ ಭೂ ಪ್ರಕರಣದಲ್ಲಿ ಮಾಡಿರಬಹುದಾದ ವಂಚನೆ, ಅವರ ಶಿಕ್ಷಣ ಸಂಸ್ಥೆಗೆ ಪಡೆದಿರುವ ಅಕ್ರಮ ಭೂಮಿ, ಕಂದಾಯ ಸಚಿವರಾಗಿ ಅಕ್ರಮವಾಗಿ ಹಂಚಿರುವ ಭೂಮಿಯ ಆರೋಪಗಳಿಗೆ ಸಾರ್ವಜನಿಕವಾಗಿ ಇಲ್ಲಿಯವರೆಗೆ ಉತ್ತರ ನೀಡದೆ ಪಲಾಯನ ಮಾಡುತ್ತಿರುವ ಆರ್. ಅಶೋಕ್ ರವರು, ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಮೇಲೆ ಮಾತನಾಡುವ ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ವಾಗ್ಧಾಳಿ ನಡೆಸಿದ್ದಾರೆ.

ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕದ ನವರಂಗಿ ವಿರೋಧ ಪಕ್ಷದ ನಾಯಕ ಶ್ರೀ ಆರ್ ಅಶೋಕ್ ರವರು ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎನ್ನುವ ಮಾತನ್ನು ಹೇಳಿದ್ದಾರೆ. ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಅಥವಾ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಉಪಚುನಾವಣೆಗಳನ್ನು ದುರಾಡಳಿತದ ಮೇಲೆ ನಡೆಸುವ ಅವಶ್ಯಕತೆ ಇರುವುದಿಲ್ಲ. ಅಂತಹ ಅವಶ್ಯಕತೆ ಏನಾದರೂ ಇದ್ದರೆ ಅದು ಭಾರತೀಯ ಜನತಾ ಪಕ್ಷದ ನಾಯಕರಿಗೆ ಮತ್ತು ಅವರ ಪಕ್ಷಕ್ಕೆ ಇರುತ್ತದೆ. ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಅವರ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಉಳಿಸಿಕೊಳ್ಳುವ ಹತಾಶ ಪ್ರಯತ್ನ. ಕರ್ನಾಟಕದ ನವರಂಗಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಕಾಂಗ್ರೆಸ್ ಪಕ್ಷದ ದುರಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎನ್ನುವ ಮಾತನ್ನು ಹೇಳಿದ್ದಾರೆ. ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಅಥವಾ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಉಪಚುನಾವಣೆಗಳನ್ನು ದುರಡಳಿತದ ಮೇಲೆ ನಡೆಸುವ ಅವಶ್ಯಕತೆ ಇರುವುದಿಲ್ಲ ಅಂತಹ ಅವಶ್ಯಕತ್ತೆ ಏನಾದರೂ ಇದ್ದರೆ ಅದು ಭಾರತೀಯ ಜನತಾ ಪಕ್ಷದ ನಾಯಕರಿಗೆ ಮತ್ತು ಅವರ ಪಕ್ಷಕ್ಕೆ ಇರುತ್ತದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ನಾಯಕರಾದ ಯತ್ನಾಳ್ ಅವರು ಆರ್. ಅಶೋಕ್ ರವರು ಅಡ್ಜಸ್ಟ್ಮೆಂಟ್ ಗಿರಾಕಿ ಎನ್ನುವ ವಿಷಯವನ್ನು ಹಲವಾರು ಬಾರಿ ಪ್ರಸ್ತಾಪ ಮಾಡಿರುತ್ತಾರೆ. ಇದರ ಜೊತೆಗೆ ಕರ್ನಾಟಕದ ಪದ್ಮನಾಭನಗರದ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಬಾರಿ ಜೆಡಿಎಸ್ ನಾಯಕರು ಜೊತೆ ಹೊಂದಾಣಿಕೆ ಮಾಡಿಕೊಂಡು ಗೆಲ್ಲುವ ಆರ್ ಅಶೋಕ್ ಅವರು, ತಾವು ಸಮರ್ಥ ವಿರೋಧ ಪಕ್ಷದ ನಾಯಕರು ಎಂಬುದನ್ನ ಇದುವರೆಗೆ ರುಜುವಾತು ಮಾಡಲು ಸಾಧ್ಯವಾಗಿಲ್ಲ. ಬೆಂಗಳೂರು ದಕ್ಷಿಣ ತಾಲೂಕಿನ ಬಿ.ಎಮ್. ಕಾವಲು ಗ್ರಾಮದಲ್ಲಿ 2500 ಎಕರೆ ಅಕ್ರಮ ಮಂಜೂರಾತಿಗೆ ಸಂಬಂಧ ಪಟ್ಟಂತೆ ಗುರುತರವಾದ ಆರೋಪವನ್ನು ಎದುರಿಸುತ್ತಿರುವ ಅಶೋಕ್ ರವರು, ಈ ಪ್ರಕರಣದ ಮಾಹಿತಿಯನ್ನು ತಮ್ಮ ಚುನಾವಣಾ ಪ್ರಮಾಣ ಪತ್ರದಲ್ಲಿ ನೀಡದೆ ಪ್ರಮಾದವನ್ನು ಎಸಗಿರುತ್ತಾರೆ ಎಂದಿದ್ದಾರೆ.

ಇದರ ಜೊತೆಗೆ ಅವರು ಕರ್ನಾಟಕದ ಕಂದಾಯ ಸಚಿವರಾಗಿ ಬಿಜೆಪಿ ಸರ್ಕಾರದಲ್ಲಿ ಅನೇಕ ವೈಫಲ್ಯಗಳನ್ನು ಕಂಡಿರುತ್ತಾರೆ ಉದಾಹರಣೆಗೆ ಅವರ ಅವಧಿಯಲ್ಲಿ ಸುಮಾರು 5 ಲಕ್ಷ ಪೋಡಿ ಪ್ರಕರಣಗಳು ಬಾಕಿ ಇದ್ದು, ಇದರಿಂದ ಇಡೀ ರಾಜ್ಯದ ರೈತರು ಸಂಕಷ್ಟ ಅನುಭವಿಸಿದರು. ಬಿಜೆಪಿ ಸರ್ಕಾರದಲ್ಲಿ ಗೃಹ ಸಚಿವರಾಗಿ ವೈಫಲ್ಯ ಕಂಡ ಇವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಿಲ್ಲ. ಬೆಂಗಳೂರು ಜಯನಗರದ ಡಬಲ್ ಕೊಲೆ ಇದುವರೆಗೂ ಪತ್ತೆ ಆಗಲಿಲ್ಲ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಲೊಟ್ಟೆಗೊಲ್ಲ ಹಳ್ಳಿ ಭೂ ಪ್ರಕರಣದಲ್ಲಿ ಮಾಡಿರಬಹುದಾದ ವಂಚನೆ, ಅವರ ಶಿಕ್ಷಣ ಸಂಸ್ಥೆಗೆ ಪಡೆದಿರುವ ಅಕ್ರಮ ಭೂಮಿ, ಕಂದಾಯ ಸಚಿವರಾಗಿ ಅಕ್ರಮವಾಗಿ ಹಂಚಿರುವ ಭೂಮಿಯ ಆರೋಪಗಳಿಗೆ ಸಾರ್ವಜನಿಕವಾಗಿ ಇಲ್ಲಿಯವರೆಗೆ ಉತ್ತರ ನೀಡದೆ ಪಲಾಯನ ಮಾಡುತ್ತಿರುವ ಆರ್. ಅಶೋಕ್ ರವರು, ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಮೇಲೆ ಮಾತನಾಡುವ ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ ಎಂದು ವಾಗ್ಧಾಳಿ ನಡೆಸಿದ್ದಾರೆ.

ಕರ್ನಾಟಕದ ಹೊಂದಾಣಿಕೆ ರಾಜಕಾರಣದ ಪಿತಾಮಹ ಖ್ಯಾತಿಯ ಆರ್ ಅಶೋಕ್ ರವರು 2013ರ ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಹೊಂದಾಣಿಕೆ ಮಾಡಿಸಿ ಅನಿತಾ ಕುಮಾರಸ್ವಾಮಿ ಮತ್ತು ಪುಟ್ಟರಾಜು ಅವರಿಗೆ ಕೈಕೊಟ್ಟು ದೇವೇಗೌಡರಿಂದ ಚೀಮಾರಿ ಹಾಕಿಸಿಕೊಂಡ ಘಟನೆ ಮಾಸುವ ಮುನ್ನವೇ ಚೆನ್ನಪಟ್ಟಣ ದಲ್ಲಿ ಹೊಸ ನಾಟಕ ಆರಂಭಿಸಿದ್ದಾರೆ. ಉಪ ಚುನಾವಣೆ ಪೂರ್ವದಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುವಂತೆ ಯೋಗೀಶ್ವರ್ ಅವರಿಗೆ ಚಿತಾವಣೆ ಮಾಡಿದ ಅಶೋಕ್, ಪ್ರತಿದಿನ ಒಂದೊಂದು ವೇಷ ಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯಲ್ಲಿ ಅನೇಕ ಹಿರಿಯರ ತುಳಿದು ವಿರೋಧ ಪಕ್ಷದ ಸ್ಥಾನ ಪಡೆದಿರುವ ಇವರು, ರಾಜ್ಯದ ಸಮಸ್ಯೆಗಳ ಮೇಲೆ ಬೆಳುಕು ಚೆಲ್ಲುವ ಬದಲು, ರಾಜಕೀಯ ಭಾಷಣ ಮಾಡಿಕೊಂಡು ಅಲೆದಾಡುತ್ತಿದ್ದಾರೆ. ಇದು ಈ ರಾಜ್ಯದ ದುರಂತ ಮತ್ತು ಬಿಜೆಪಿ ಅಧೋಗತಿ ಎಂಬುದಾಗಿ ಗುಡುಗಿದ್ದಾರೆ.

ಅತ್ಯಂತ ಹಿರಿಯರು ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾಗಿ ಸದನದ ಗೌರವವನ್ನು ಎತ್ತಿ ಹಿಡಿದಿದ್ದಾರೆ. ಆರ್. ಅಶೋಕ್ ಸಾದ್ಯವಾದರೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಗೌರವ ತುಂಬಲಿ. ಇಲ್ಲದೇ ಹೋದರೆ ರಾಜೀನಾಮೆ ನೀಡಿ ಮನೆ ಸೇರಲಿ. ಒಬ್ಬ ವಿರೋಧ ಪಕ್ಷದ ನಾಯಕರಾಗಿ ವೈಫಲ್ಯದಿಂದ ಸೋತಿರುವ ಆರ್. ಅಶೋಕ್, ಕಾಂಗ್ರೆಸ್ ಟೀಕೆಗೆ ಮುನ್ನ ಅವರ ಆತ್ಮ ವಿಮರ್ಶೆ ಮಾಡಿಕೊಳ್ಳಲಿ ಎಂಬುದಾಗಿ ತಿಳಿಸಿದ್ದಾರೆ.

BREAKING: ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ: ಪೊಲೀಸರಿಗೆ ದೂರು ನೀಡಿದ 2ನೇ ಪತ್ನಿ ಸುಮಿತ್ರಾ

ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ: ಆರ್.ಅಶೋಕ್

Share. Facebook Twitter LinkedIn WhatsApp Email

Related Posts

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM1 Min Read

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM3 Mins Read

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM1 Min Read
Recent News

ಖ್ಯಾತ ವಿದ್ವಾಂಸ, ಬರಹಗಾರ ದಾಜಿ ಪನ್ಶಿಕರ್ ನಿಧನ| Daji Panshikar passes away

07/06/2025 10:38 AM

ಈದ್‌ ಸಂಭ್ರಮ: ಶುಭಾಶಯ ಕೋರಿದ ಪ್ರಧಾನಿ ಮೋದಿ

07/06/2025 10:24 AM

ನಿರೀಕ್ಷಣಾ ಜಾಮೀನು ಯಾಂತ್ರಿಕವಾಗಿ ನೀಡಬಾರದು: ಸುಪ್ರೀಂ ಕೋರ್ಟ್ | Anticipatory bail

07/06/2025 10:18 AM

ಆರ್ಬಿಐ ನೀತಿ ಕಡಿತದ ನಂತರ ಸಾಲದ ದರಗಳು 30 ಬಿಪಿಎಸ್ ಕಡಿಮೆಯಾಗಲಿವೆ: SBI ವರದಿ

07/06/2025 9:42 AM
State News
KARNATAKA

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

By kannadanewsnow0907/06/2025 8:47 AM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತದಲ್ಲಿ ಸರ್ಕಾರ ನುಣುಚಿಕೊಳ್ಳಲು ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದೆ. ಈ ದುರಂತ…

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.