Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಾಳೆ ‘ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka 2nd PUC Exam-3 Result

30/06/2025 7:39 PM

BREAKING: ಹಾಸನದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣ: ಹೃದಯಾಘಾತಕ್ಕೆ ಮತ್ತೊಂದು ಬಲಿ

30/06/2025 7:34 PM

ಭಾರತೀಯ ‘ರಾಗ’ಗಳನ್ನ ಕೇಳುವುದ್ರಿಂದ ಗಮನ, ಭಾವನಾತ್ಮಕ ಸಮತೋಲನ ಸುಧಾರಣೆ : ಅಧ್ಯಯನ

30/06/2025 7:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ಸರ್ಕಾರದಿಂದ ಬಾಳಂತಿಯರಿಗೆ ‘ಸಾವಿನ ಭಾಗ್ಯ’: ಲೋಕಾಯುಕ್ತ ತನಿಖೆಗೆ ವಹಿಸಲು ‘ಆರ್.ಅಶೋಕ್ ಆಗ್ರಹ’
KARNATAKA

ಕಾಂಗ್ರೆಸ್ ಸರ್ಕಾರದಿಂದ ಬಾಳಂತಿಯರಿಗೆ ‘ಸಾವಿನ ಭಾಗ್ಯ’: ಲೋಕಾಯುಕ್ತ ತನಿಖೆಗೆ ವಹಿಸಲು ‘ಆರ್.ಅಶೋಕ್ ಆಗ್ರಹ’

By kannadanewsnow0901/12/2024 6:44 PM

ಬಳ್ಳಾರಿ: ಪಶ್ಚಿಮ ಬಂಗಾ ಫಾರ್ಮಾಸ್ಯುಟಿಕಲ್ಸ್‌ ಕಂಪನಿಯ ಐವಿ ದ್ರಾವಣ ಕಳಪೆ ಎಂದು ಆರು ತಿಂಗಳ ಹಿಂದೆಯೇ ಸರ್ಕಾರಕ್ಕೆ ವರದಿ ಸಲ್ಲಿಕೆಯಾದರೂ, ಅದನ್ನೇ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ. ಇದರ ಹಿಂದೆ ಬಲಾಢ್ಯರ ಕಾಣದ ಕೈ ಕೆಲಸ ಮಾಡಿದೆ. ಈ ಸಾವುಗಳಿಗೆ ಸರ್ಕಾರವೇ ನೇರ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಅವರು, ವೈದ್ಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ 10 ತಿಂಗಳಲ್ಲಿ 111 ನವಜಾತ ಶಿಶುಗಳು ಸಾವನ್ನಪ್ಪಿವೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ಕು ತಾಯಂದಿರು ಹೆರಿಗೆ ನಂತರ ಮೃತರಾಗಿದ್ದಾರೆ. ಈಗ ಜನರಲ್ಲಿ ಭಯದ ವಾತಾವರಣವಿದೆ. ಹಾಗೆಯೇ ಇಲ್ಲಿ ಮೆಡಿಕಲ್‌ ಮಾಫಿಯಾ ಕೂಡ ಇದೆ. ಇದು ಒಂದು ಜಿಲ್ಲೆಯಲ್ಲಿ ಕಂಡುಬಂದ ಸಮಸ್ಯೆ. ಇನ್ನೂ ಅನೇಕ ಜಿಲ್ಲೆಗಳಲ್ಲಿ ಏನಾಗಿದೆ ಎಂಬುದನ್ನು ನೋಡಬೇಕಿದೆ. ಈ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು. ಇಲ್ಲವಾದರೆ ನಾನೇ ಲೋಕಾಯುಕ್ತಕ್ಕೆ ದೂರು ನೀಡುತ್ತೇನೆ ಎಂದರು.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವಿ ದ್ರಾವಣ ನೀಡಿದ ಬಳಿಕ ತಾಯಂದಿರ ಲಿವರ್‌ ವಿಫಲವಾಗಿದೆ. ರಕ್ತದೊತ್ತಡ ಸಂಪೂರ್ಣ ಇಳಿಮುಖವಾಗಿದೆ. ಈ ದ್ರಾವಣ ಯಾರ ಪ್ರಭಾವದಿಂದ ಕರ್ನಾಟಕಕ್ಕೆ ಬಂತು ಎಂದು ನೋಡಬೇಕಿದೆ. ಹಿಂದೆ ಇದ್ದ ಡ್ರಗ್‌ ಕಂಟ್ರೋಲರ್‌ ಆರು ತಿಂಗಳ ಹಿಂದೆ ಐವಿ ದ್ರಾವಣ ಖರೀದಿಸಬಾರದು ಎಂದು ಸರ್ಕಾರಕ್ಕೆ ತಿಳಿಸಿದ್ದರು. ಬಳಸಬಾರದು ಎಂದು ಹೇಳಿದ್ದರೂ ಯಾವ ಕಾಣದ ಬಲಾಢ್ಯ ಕೈ ಇದನ್ನೇ ಖರೀದಿ ಮಾಡಬೇಕೆಂದು ಪ್ರಭಾವ ಬೀರಿದೆ ಎಂದು ನೋಡಬೇಕಿದೆ. ಈ ಕಂಪನಿಯ ಅನ್ಸಾರಿ ಎಂಬುವರು ಇಲ್ಲಿ ಪ್ರಭಾವ ಬೀರಿದ್ದು, ಈತನನ್ನು ಬಂಧಿಸಿದರೆ ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬಹುದು ಎಂದರು.

ಎರಡು ತಿಂಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡ ಅಧಿಕಾರಿಯನ್ನು ಸರ್ಕಾರ ಅಮಾನತು ಮಾಡಿ ನುಣುಚಿಕೊಂಡಿದೆ. ಸಚಿವರೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಕಳಪೆ ದ್ರಾವಣ

ಅಧಿಕಾರಿಗಳಾದ ಚಿದಾನಂದ ವಟಾರೆ, ರಘುನಂದನ್‌, ನಂದಿನಿ, ಶೈಲಾವತಿ ಇದನ್ನು ಶಿಫಾರಸು ಮಾಡಿದ್ದಾರೆ. 97 ಬ್ಯಾಚ್‌ಗಳಲ್ಲಿ 23 ಬ್ಯಾಚ್‌ಗಳು ಕಳಪೆ ಗುಣಮಟ್ಟ ಹೊಂದಿವೆ ಎಂದು ವರದಿ ನೀಡಲಾಗಿದೆ. ಔಷಧಿಯಲ್ಲಿ ಶೇ.1 ರಷ್ಟು ಕಳಪೆ ಇದ್ದರೂ ಅದು ರೋಗಿಗಳಿಗೆ ಅಪಾಯ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಕಳಪೆ ಔಷಧಿ ಇದ್ದರೂ ಅದನ್ನು ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ. ಇದರ ಹಿಂದೆ ಸರ್ಕಾರವೇ ಇದೆ. ಈ ಸಾವುಗಳಿಗೆ ಯಾರು ನ್ಯಾಯ ನೀಡುತ್ತಾರೆ ಎಂದು ಪ್ರಶ್ನಿಸಿದರು.

ಇದು ವೈದ್ಯರ ಲೋಪವಲ್ಲ. ಈ ದ್ರಾವಣ ನೀಡಿದ ನಂತರ ತಾಯಂದಿರ ಅಂಗಾಂಗ ವೈಫಲ್ಯವಾಗಿದೆ. ಸರ್ಕಾರವೇ ಬಾಳಂತಿಯರನ್ನು ಕೊಲ್ಲುವ ಕೆಲಸ ಮಾಡಿದ್ದು, ಇದು ಸಂಪೂರ್ಣವಾಗಿ ಸರ್ಕಾರದ್ದೇ ತಪ್ಪು. ಬಾಳಂತಿಯರಿಗೆ ಸಾವಿನ ಭಾಗ್ಯ ನೀಡಿದ ಕಾಂಗ್ರೆಸ್‌, ಹಾಸನದಲ್ಲಿ ಸಮಾವೇಶ ಮಾಡಲು ಮುಂದಾಗಿದೆ. ಖಜಾನೆ ಖಾಲಿ ಮಾತ್ರವಲ್ಲ, ಆಸ್ಪತ್ರೆಗಳಲ್ಲಿ ಔಷಧಿ ಕೂಡ ಖಾಲಿಯಾಗಿದೆ ಎಂದು ದೂರಿದರು.

ಇಷ್ಟಾದರೂ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ. ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಕಾಣೆಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿಗೆ ಬಂದರೂ ಆಸ್ಪತ್ರೆಗೆ ಭೇಟಿ ನೀಡಿಲ್ಲ. ಭ್ರಷ್ಟಾಚಾರ, ಸ್ವಜನಪಕ್ಷಪಾತ ಮಾತ್ರ ಇವರ ಕಾರ್ಯಕ್ರಮ ಎಂದರು.

25 ಲಕ್ಷ ರೂ. ಪರಿಹಾರ ಕೊಡಿ

ರಾಜ್ಯ ಸರ್ಕಾರ ಮೃತ ಬಾಳಂತಿಯರಿಗೆ 2 ಲಕ್ಷ ರೂ. ಪರಿಹಾರ ನೀಡಿದೆ. ಸರ್ಕಾರಕ್ಕೆ ಜೀವದ ಬೆಲೆ ಗೊತ್ತಿಲ್ಲ. ಮೃತಪಟ್ಟ ಪ್ರತಿ ಸಂತ್ರಸ್ತರಿಗೂ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

Watch Video: ಫೆಂಗಲ್‌ ಚಂಡಮಾರುತ ಎಫೆಕ್ಟ್: ಲ್ಯಾಂಡ್‌ ಆಗಲು ಪರದಾಡಿ ಮತ್ತೆ ಹಾರಿದ ವಿಮಾನ, ವಿಡಿಯೋ ವೈರಲ್‌

BREAKING: ಬ್ರಹ್ಮಗಂಟು ಧಾರಾವಾಹಿ ‘ಖ್ಯಾತಿಯ ನಟಿ ಶೋಭಿತಾ’ ಆತ್ಮಹತ್ಯೆ | Brahmangantu Shobita No More

Share. Facebook Twitter LinkedIn WhatsApp Email

Related Posts

BREAKING: ನಾಳೆ ‘ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka 2nd PUC Exam-3 Result

30/06/2025 7:39 PM2 Mins Read

BREAKING: ಹಾಸನದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣ: ಹೃದಯಾಘಾತಕ್ಕೆ ಮತ್ತೊಂದು ಬಲಿ

30/06/2025 7:34 PM1 Min Read

BREAKING: ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಡಿಸಿಎಫ್, ಎಸಿಎಫ್ ಗಳಿಗೆ ಕಡ್ಡಾಯ ರಜೆ ನೀಡಿ ಆದೇಶ

30/06/2025 7:08 PM3 Mins Read
Recent News

BREAKING: ನಾಳೆ ‘ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka 2nd PUC Exam-3 Result

30/06/2025 7:39 PM

BREAKING: ಹಾಸನದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣ: ಹೃದಯಾಘಾತಕ್ಕೆ ಮತ್ತೊಂದು ಬಲಿ

30/06/2025 7:34 PM

ಭಾರತೀಯ ‘ರಾಗ’ಗಳನ್ನ ಕೇಳುವುದ್ರಿಂದ ಗಮನ, ಭಾವನಾತ್ಮಕ ಸಮತೋಲನ ಸುಧಾರಣೆ : ಅಧ್ಯಯನ

30/06/2025 7:26 PM

BREAKING: ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಡಿಸಿಎಫ್, ಎಸಿಎಫ್ ಗಳಿಗೆ ಕಡ್ಡಾಯ ರಜೆ ನೀಡಿ ಆದೇಶ

30/06/2025 7:08 PM
State News
KARNATAKA

BREAKING: ನಾಳೆ ‘ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka 2nd PUC Exam-3 Result

By kannadanewsnow0930/06/2025 7:39 PM KARNATAKA 2 Mins Read

ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶಗಳು ಜುಲೈ 1 ಕ್ಕೆ ಪ್ರಕಟಗೊಳ್ಳಲಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ…

BREAKING: ಹಾಸನದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣ: ಹೃದಯಾಘಾತಕ್ಕೆ ಮತ್ತೊಂದು ಬಲಿ

30/06/2025 7:34 PM

BREAKING: ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಡಿಸಿಎಫ್, ಎಸಿಎಫ್ ಗಳಿಗೆ ಕಡ್ಡಾಯ ರಜೆ ನೀಡಿ ಆದೇಶ

30/06/2025 7:08 PM

BREAKING: ನಾಳೆ ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

30/06/2025 6:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.