ಬೆಂಗಳೂರು: ಇಂದು ನಡೆದಂತ ಪ್ರೆಸ್ ಕ್ಲಪ್ ಆಫ್ ಬೆಂಗಳೂರು ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆರ್.ಶ್ರೀಧರ್ ಪುನರಾಯ್ಕೆ ಆಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಬೆಳ್ಳಿತಟ್ಟೆ ಆಯ್ಕೆಯಾಗಿದ್ದಾರೆ.
ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಪದಾಧಿಕಾರಿಗಳ ಆಯ್ಕೆಗಾಗಿ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿದ್ದಂತ ಶೇಷಚಂದ್ರಿಕಾ ಅವರು ಗೆದ್ದಂತ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದಾರೆ.
ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆರ್.ಶ್ರೀಧರ್ ಅವರು 404 ಮತಗಳ ಮೂಲಕ ಗೆಲುವು ಸಾಧಿಸಿದ್ದಾರೆ. ಉಪಾಧ್ಯಕ್ಷರಾಗಿ ಮೋಹನ್ ಕುಮಾರ್ ಬಿಎನ್ 417 ಮತಗಳನ್ನು ಪಡೆದು ಆಯ್ಕೆಯಾದ್ರೇ, ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಬೆಳ್ಳಿತಟ್ಟೆ 336 ಮತಗಳನ್ನು ಗಳಿಸಿ ಆಯ್ಕೆಯಾಗಿದ್ದಾರೆ ಅಂತ ತಿಳಿಸಿದರು.
ಇನ್ನೂ ಕಮಿಟಿ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದಂತ ಶಿವಣ್ಣ 234, ಶರಣಬಸಪ್ಪ ಎ.ಹೆಚ್ 258, ಯಾಸಿರ್ ಮುಸ್ತಾಫ್ 259, ಮಮತಾಜ್ ಆಲಿಂ 272, ರೋಹಿಣಿ ಅಡಿಗ 306, ಮಂಜುನಾಥ್ ಸಿಆರ್ 281 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ ಅಂತ ಘೋಷಣೆ ಮಾಡಿದರು.
ಇಂದಿನ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಚುನಾವಣೆಯಲ್ಲಿ ಮಹಿಳಾ ಮೀಸಲಾತಿಯಡಿ ಸ್ಪರ್ಧಿಸಿದ್ದಂತ ಮಿನಿ ತೇಜಸ್ವಿ ಅವರು ಅತಿಹೆಚ್ಚು 491 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ ಎಂದರು.
ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದಂತ ಟಿವಿ5 ಔಟ್ ಪುಟ್ ಹೆಡ್ ಗಣೇಶ್ ಜಿ ಅವರು 556 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೇ, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಧರಣೀಶ್ 195 ಮತಗಳಿಂದ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಮಂಜುನಾಥ್ ಜಿವೈ ಅವರು 288 ಮತಗಳನ್ನು ಪಡೆದು ಗೆಲುವು ಸಾಧಿಸಿ, ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಶೇಷಚಂದ್ರಿಕಾ ಅವರು ಘೋಷಣೆ ಮಾಡಿದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು