Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ : 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಜ್ಜು

08/12/2025 6:58 AM

BREAKING: ಬಿಗ್ ಬಾಸ್ 19 ಪ್ರಶಸ್ತಿ ಮುಡಿಗೇರಿಸಿಕೊಂಡ ಗೌರವ್ ಖನ್ನಾ | Bigg Boss

08/12/2025 6:51 AM

ತೆಲಂಗಾಣದಿಂದ ಅಮೇರಿಕಾ ಅಧ್ಯಕ್ಷರಿಗೆ ವಿಶೇಷ ಗೌರವ: ದೂತಾವಾಸದ ರಸ್ತೆಗೆ ‘ಡೊನಾಲ್ಡ್ ಟ್ರಂಪ್ ಅವೆನ್ಯೂ’ ಹೆಸರಿಡಲು ನಿರ್ಧಾರ

08/12/2025 6:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಂದಿನ ತಿಂಗಳಿಂದ ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಕ್ರಮ; ಮಧು ಬಂಗಾರಪ್ಪ
KARNATAKA

ಮುಂದಿನ ತಿಂಗಳಿಂದ ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಕ್ರಮ; ಮಧು ಬಂಗಾರಪ್ಪ

By kannadanewsnow0710/01/2024 5:00 AM

ಕೊಡಗು: ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಚಿಂತಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಪೊನ್ನಂಪೇಟೆ ಪ್ರವಾಸಿ ಮಂದಿರದಲ್ಲಿ ಸೋಮವಾರ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು ಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಮುಂದಾಗಲಾಗಿದೆ ಎಂದು ಸಚಿವರು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಬಗೆ ಹರಿಸಲಾಗುತ್ತಿದೆ. 13 ಸಾವಿರ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ. 37 ಸಾವಿರ ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸರ್ಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕೈಗೊಂಡಿದೆ. ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕ ಸೇರಿದಂತೆ ಮಧ್ಯಾಹ್ನದ ಬಿಸಿ ಊಟ, ಮೊಟ್ಟೆ ಹಾಗೂ ಹಾಲು ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ತಲುಪಿಸಲಾಗುತ್ತಿದೆ ಎಂದರು.
ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹೊರಯಾಗದಂತೆ ತಪ್ಪಿಸುವಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಕೊಡಗು ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ಶಾಲೆಗಳು ಇದ್ದು, ಈ ಶಾಲೆಗಲನ್ನು ಅಭಿವೃದ್ಧಿ ಪಡಿಸಲು ಮುಂದಾಗಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಹಳೆ ಶಾಲೆಗಳ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ನೆಲದಲ್ಲಿ ಕೂರಬಾರದು. ಶಾಲೆಗಳಿಗೆ ಡೆಸ್ಕ್, ಬೆಂಚ್ ಇತರೆ ಸಾಮಾಗ್ರಿಗಳನ್ನು ವಿತರಿಸಲಾಗುವುದು ಎಂದರು. ಹೊಸ ತಾಲ್ಲೂಕುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇಮಕಾತಿ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳ ಕೊರತೆ ಇರುವುದರಿಂದ ನೇಮಕ ಮಾಡಿಲ್ಲ. ಮುಂದಿನ ದಿನಗಳಲ್ಲಿ ನೇಮಕಾತಿ ಮಾಡಲಾಗುವುದು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳ ಕುಂದುಕೊರತೆ ಸಂಬಂಧಿಸಿದಂತೆ ಅಹವಾಲು ಆಲಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಹಾಕಿ ಕ್ರೀಡೆಯು ಕೊಡಗು ಜಿಲ್ಲೆಯ ಸಂಸ್ಕøತಿಯ ಭಾಗವಾಗಿದೆ ಎಂದರು. ಪೊನ್ನಂಪೇಟೆ ಹಾಕಿ ಕ್ರೀಡಾಂಗಣಕ್ಕೆ ಇನ್ನಷ್ಟು ಮೂಲ ಸೌಲಭ್ಯ ಕಲ್ಪಿಸಲಾಗುವುದು. ಆ ನಿಟ್ಟಿನಲ್ಲಿ ಕ್ರಿಯಾ ಯೋಜನೆ ರೂಪಿಸಲಾಗುವುದು. ಜಿಲ್ಲೆಯ ಹಾಕಿ ಕ್ರೀಡಾ ಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವಂತಾಗಬೇಕು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 10 ಆಟದ ಮೈದಾನಗಳನ್ನು ಗುರುತಿಸಲಾಗಿದ್ದು, ಸ್ಥಳೀಯ ಕ್ರೀಡಾಪಟುಗಳು ಇದರ ಪ್ರಯೋಜನ ಪಡೆಯುವಂತಾಗಬೇಕು ಎಂದರು.

'Ragi Malt' to be distributed to students from next month; Madhu Bangarappa ಮುಂದಿನ ತಿಂಗಳಿಂದ ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಕ್ರಮ; ಮಧು ಬಂಗಾರಪ್ಪ
Share. Facebook Twitter LinkedIn WhatsApp Email

Related Posts

ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ : 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಜ್ಜು

08/12/2025 6:58 AM1 Min Read

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ಕುಡಿದ ಮತ್ತಿನಲ್ಲಿ ಕಾಂಪೌಂಡ್ ಗೆ ಗುದ್ದಿದ ಕಾರು ಚಾಲಕ!

08/12/2025 6:03 AM1 Min Read

BREAKING : ದೆಹಲಿ ಕಾರು ಸ್ಪೋಟ ಹಿನ್ನೆಲೆ : ಬೆಳಗಾವಿಯಲ್ಲಿ ಹೈಅಲರ್ಟ್ ಘೋಷಣೆ, ಅಧಿವೇಶನಕ್ಕೆ ಬಿಗಿ ಪೊಲೀಸ್ ಭದ್ರತೆ ನಿಯೋಜನೆ!

08/12/2025 5:49 AM1 Min Read
Recent News

ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ : 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಜ್ಜು

08/12/2025 6:58 AM

BREAKING: ಬಿಗ್ ಬಾಸ್ 19 ಪ್ರಶಸ್ತಿ ಮುಡಿಗೇರಿಸಿಕೊಂಡ ಗೌರವ್ ಖನ್ನಾ | Bigg Boss

08/12/2025 6:51 AM

ತೆಲಂಗಾಣದಿಂದ ಅಮೇರಿಕಾ ಅಧ್ಯಕ್ಷರಿಗೆ ವಿಶೇಷ ಗೌರವ: ದೂತಾವಾಸದ ರಸ್ತೆಗೆ ‘ಡೊನಾಲ್ಡ್ ಟ್ರಂಪ್ ಅವೆನ್ಯೂ’ ಹೆಸರಿಡಲು ನಿರ್ಧಾರ

08/12/2025 6:42 AM

BREAKING : ಇನ್ನು ಆಧಾ‌ರ್ ದೃಢೀಕರಣಕ್ಕೆ ಹೊಸ ನೀತಿ : ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ಶೀಘ್ರ ಹೊಸ ನಿಯಮ ಜಾರಿ

08/12/2025 6:34 AM
State News
KARNATAKA

ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ : 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಜ್ಜು

By kannadanewsnow0508/12/2025 6:58 AM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ಕರ್ನಾಟಕದ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದೆ. ರೈತರ ಸಮಸ್ಯೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯದ ಆರೋಪಗಳೊಂದಿಗೆ…

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ಕುಡಿದ ಮತ್ತಿನಲ್ಲಿ ಕಾಂಪೌಂಡ್ ಗೆ ಗುದ್ದಿದ ಕಾರು ಚಾಲಕ!

08/12/2025 6:03 AM

BREAKING : ದೆಹಲಿ ಕಾರು ಸ್ಪೋಟ ಹಿನ್ನೆಲೆ : ಬೆಳಗಾವಿಯಲ್ಲಿ ಹೈಅಲರ್ಟ್ ಘೋಷಣೆ, ಅಧಿವೇಶನಕ್ಕೆ ಬಿಗಿ ಪೊಲೀಸ್ ಭದ್ರತೆ ನಿಯೋಜನೆ!

08/12/2025 5:49 AM

BIG NEWS : ಎರಡು ಮಕ್ಕಳನ್ನಷ್ಟೇ ಮಾಡಿಕೊಳ್ಳಿ : ನವ ದಂಪತಿಗಳಿಗೆ ಸಿಎಂ ಸಿದ್ದರಾಮಯ್ಯ ಸಲಹೆ

08/12/2025 5:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.