Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಂಧೂ ನದಿಯಲ್ಲಿ ಕಾಲುವೆಗಳನ್ನು ಪುನರ್ನಿರ್ಮಿಸಲಿದೆ ಭಾರತ | Indus canals

17/05/2025 12:35 PM

IPL 2025 : ಟಾಪ್-4 ಸ್ಥಾನಗಳಿಗಾಗಿ 7 ತಂಡಗಳ ಪೈಪೋಟಿ : ` ಪ್ಲೇಆಫ್ ರೇಸ್’ ನಲ್ಲಿವೆ ಈ ಟೀಮ್ ಗಳು |

17/05/2025 12:20 PM

BREAKING : ಮಂಗಳೂರಿನಲ್ಲಿ `ಬ್ಯಾಡ್ಮಿಂಟನ್’ ಆಡಿದ CM ಸಿದ್ದರಾಮಯ್ಯ.!

17/05/2025 11:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಹುಲ್ ಗಾಂಧಿಗೆ ಈ ರಾಜ್ಯದ ಸಿಎಂ ಯಾರು? ಡಿಸಿಎಂ ಯಾರು? ಅಂತಾನೇ ಗೊತ್ತಿಲ್ಲ- ನಿಖಿಲ್ ಕುಮಾರಸ್ವಾಮಿ
KARNATAKA

ರಾಹುಲ್ ಗಾಂಧಿಗೆ ಈ ರಾಜ್ಯದ ಸಿಎಂ ಯಾರು? ಡಿಸಿಎಂ ಯಾರು? ಅಂತಾನೇ ಗೊತ್ತಿಲ್ಲ- ನಿಖಿಲ್ ಕುಮಾರಸ್ವಾಮಿ

By kannadanewsnow0918/04/2024 6:02 PM

ಮಂಡ್ಯ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈ ರಾಜ್ಯದ ಮುಖ್ಯಮಂತ್ರಿ ಯಾರು ಕೆಪಿಸಿಸಿ ಅಧ್ಯಕ್ಷರು ಯಾರು ಅಂತಾನೇ ಗೊತ್ತಿಲ್ಲ ಅಂತವರು ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

ಮದ್ದೂರು ವಿಧಾನಸಭಾ ಕ್ಷೇತ್ರದ ಸೋಮನಹಳ್ಳಿ, ಕೆಸ್ತೂರು, ಚಾಮನಹಳ್ಳಿ, ಭಾರತೀನಗರ ಹಾಗೂ ಮದ್ದೂರು ಟೌನ್ ವ್ಯಾಪ್ತಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪರ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೊನ್ನೆಯಷ್ಟೇ ಮಂಡ್ಯ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರ ಮಂಡ್ಯದಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಪಕ್ಷದೊಂದಿಗೆ ವಿಲೀನವಾಗಲಿದೆ ಆಗಾಗಿ ಮೈತ್ರಿ ಅಭ್ಯರ್ಥಿಯನ್ನು ಜಿಲ್ಲೆಯ ಜನತೆ ತಿರಸ್ಕರಿಸಬೇಕೆಂದು ಕರೆ ನೀಡಿದ್ದರು.

ಈ ವಿಚಾರವಾಗಿ ಇಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಪಾಪ ರಾಹುಲ್ ಗಾಂಧಿ ಅವರಿಗೆ ಈ ರಾಜ್ಯದ ಮುಖ್ಯಮಂತ್ರಿ ಯಾರು, ಕೆಪಿಸಿಸಿ ಅಧ್ಯಕ್ಷರು ಅಂತಾನೇ ತಿಳಿದಿಲ್ಲ. ಇಂತಹ ವ್ಯಕ್ತಿಯನ್ನ ಈ ದೇಶದ ಪ್ರಧಾನಿ ಮಾಡಬೇಕೆಂದು ಕಾಂಗ್ರೆಸ್ ನಾಯಕರು ಹೊರಟಿದ್ದಾರೆ. ಈಗ ನಡೆಯುತ್ತಿರುವ ಚುನಾವಣೆಯಲ್ಲಿ ದೇಶದ ಉದ್ದಗಲಕ್ಕೂ ವ್ಯಾಪಿಸಿರುವ ಅತೀ ದೊಡ್ಡ ಪಕ್ಷ ಕೇವಲ 281 ಅಭ್ಯರ್ಥಿಗಳನ್ನು ಕಣಕ್ಕಿಸಿದೆ ಇಂತಹ ವ್ಯಕ್ತಿಗಳು ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ ಎಂದು ಪ್ರಶ್ನಿಸಿದರು.

ಇನ್ನು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಕುಮಾರಸ್ವಾಮಿ, ಇದರಲ್ಲಿ ತಪ್ಪೇನಿದೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಯಾರ ಪರ ಬೇಕಾದರೂ ಪ್ರಚಾರ ಮಾಡಬಹುದು. ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ಅದಕ್ಕೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಯಾರು ಯಾರ ಪರವಾಗಿಬೇಕಾದ್ರು ಪ್ರಚಾರ ಮಾಡಬಹುದು. ಈಗಾಗಲೇ ಜಿಲ್ಲೆಯ ಜನತೆ ಯಾರಿಗೆ ಮತ ನೀಡಿದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಅನ್ನೋದನ್ನು ತೀರ್ಮಾನ ಮಾಡಿದ್ದಾರೆ ಎಂದರು.

ಇನ್ನು ಸಂಸದೆ ಸುಮಲತಾ ಅಂಬರೀಶ್ ಅವರು ಕೆಲವೇ ದಿನಗಳಲ್ಲಿ ಚುನಾವಣೆ ಪ್ರಚಾರ ಮುಗಿಯುತ್ತಿದ್ದರು ಸಹ ಪ್ರಚಾರ ಕಾರ್ಯ ಆರಂಭಿಸಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಇತ್ತಿಚೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ಸಹ ಮೈತ್ರಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಅವರ ಪಕ್ಷ ಯಾವಾಗ ಸೂಚನೆ ನೀಡುತ್ತೋ ಆಗ ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ಸಮಜಾಯಿಷಿ ನೀಡಿದರು.

ನಮ್ಮ ತಂದೆ ಎರಡು ಬಾರಿ ಮುಖ್ಯಮಂತ್ರಿಯಾಗುವ ಮೊದಲು ರಾಜ್ಯದ ರೈತರಿಗೆ ಕೊಟ್ಟಂತ ವಾಗ್ಧಾನವನ್ನು ಉಳಿಸಿಕೊಂಡಿದ್ದಾರೆ‌. ಅವರು ಚುನಾವಣೆಯಲ್ಲಿ ಎಲ್ಲೆ ಸ್ಪರ್ಧೆ ಮಾಡಿದರು ಜನತೆ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಈಗಾಗಲೇ ಜಿಲ್ಲೆಯ 8 ತಾಲೂಕಿನಲ್ಲಿ ಬಹಿರಂಗ ಸಭೆ ಆಯೋಜಿಸಿದ್ದು, ಬೃಹತ್ ಸಮಾವೇಶದಲ್ಲಿ ರಾಜ್ಯ ನಾಯಕರು ಸಹ ಭಾಗಿಯಾಗಿಲಿದ್ದಾರೆ. ನಾನು ಸಹ ಇಂದಿನಿಂದ ಎಲ್ಲಾ ಹೋಬಳಿ ಮಟ್ಟದಲ್ಲಿ ಪ್ರಚಾರ ಕೈಗೊಂಡಿದ್ದು, ಈ ಬಾರಿ ಕುಮಾರಸ್ವಾಮಿಯವರನ್ನು ಜಿಲ್ಲೆಯ ಜನತೆ ಆಶೀರ್ವಾದ ಮಾಡಲಿದ್ದಾರೆ ಎಂದು ತಿಳಿಸಿದರು.

ವರದಿ: ಗಿರೀಶ್ ರಾಜ್, ಮಂಡ್ಯ

‘ಮಂಡ್ಯ’ದಲ್ಲಿ ವರುಣನ ಆರ್ಭಟ: ಬಿರು ಬಿಸಿಲಿನಿಂದ ಕಂಗೆಟ್ಟ ಜನತೆಗೆ ತಂಪೆರೆದ ‘ಮಳೆರಾಯ’

ಇರಾನ್ ವಶದಲ್ಲಿದ್ದ ಭಾರತೀಯ ಸಿಬ್ಬಂದಿಯಾಗಿದ್ದ ಕೇರಳದ ಮಹಿಳೆ ಸ್ವದೇಶಕ್ಕೆ ವಾಪಸ್

Share. Facebook Twitter LinkedIn WhatsApp Email

Related Posts

BREAKING : ಮಂಗಳೂರಿನಲ್ಲಿ `ಬ್ಯಾಡ್ಮಿಂಟನ್’ ಆಡಿದ CM ಸಿದ್ದರಾಮಯ್ಯ.!

17/05/2025 11:58 AM1 Min Read

`ಪೊಲೀಸ್ ಸಬ್ ಇನ್ಸ್‍ಪೆಕ್ಟರ್’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

17/05/2025 11:51 AM1 Min Read

BIG NEWS : ಆನ್‍ಲೈನ್ ಮೂಲಕ `ಮೊಬೈಲ್’ ಖರೀದಿಸಿದ ವಿದ್ಯಾರ್ಥಿಗೆ ಮೋಸ: ಅಮೆಜಾನ್ ಕಂಪನಿಗೆ ಭಾರೀ ದಂಡ ವಿಧಿಸಿ ಆದೇಶ.!

17/05/2025 11:49 AM1 Min Read
Recent News

ಸಿಂಧೂ ನದಿಯಲ್ಲಿ ಕಾಲುವೆಗಳನ್ನು ಪುನರ್ನಿರ್ಮಿಸಲಿದೆ ಭಾರತ | Indus canals

17/05/2025 12:35 PM

IPL 2025 : ಟಾಪ್-4 ಸ್ಥಾನಗಳಿಗಾಗಿ 7 ತಂಡಗಳ ಪೈಪೋಟಿ : ` ಪ್ಲೇಆಫ್ ರೇಸ್’ ನಲ್ಲಿವೆ ಈ ಟೀಮ್ ಗಳು |

17/05/2025 12:20 PM

BREAKING : ಮಂಗಳೂರಿನಲ್ಲಿ `ಬ್ಯಾಡ್ಮಿಂಟನ್’ ಆಡಿದ CM ಸಿದ್ದರಾಮಯ್ಯ.!

17/05/2025 11:58 AM

`ಪೊಲೀಸ್ ಸಬ್ ಇನ್ಸ್‍ಪೆಕ್ಟರ್’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

17/05/2025 11:51 AM
State News
KARNATAKA

BREAKING : ಮಂಗಳೂರಿನಲ್ಲಿ `ಬ್ಯಾಡ್ಮಿಂಟನ್’ ಆಡಿದ CM ಸಿದ್ದರಾಮಯ್ಯ.!

By kannadanewsnow5717/05/2025 11:58 AM KARNATAKA 1 Min Read

ಮಂಗಳೂರು : ಸಿಎಂ ಸಿದ್ದರಾಮಯ್ಯ ಮಂಗಳೂರು ಪ್ರವಾಸ ಕೈಗೊಂಡಿದ್ದು, ಮಂಗಳೂರಿನ ಉರ್ವದಲ್ಲಿ ನೂತನವಾಗಿ ನಿರ್ಮಿಸಿರುವ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಒಳಾಂಗಣ…

`ಪೊಲೀಸ್ ಸಬ್ ಇನ್ಸ್‍ಪೆಕ್ಟರ್’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

17/05/2025 11:51 AM

BIG NEWS : ಆನ್‍ಲೈನ್ ಮೂಲಕ `ಮೊಬೈಲ್’ ಖರೀದಿಸಿದ ವಿದ್ಯಾರ್ಥಿಗೆ ಮೋಸ: ಅಮೆಜಾನ್ ಕಂಪನಿಗೆ ಭಾರೀ ದಂಡ ವಿಧಿಸಿ ಆದೇಶ.!

17/05/2025 11:49 AM

ALERT : ಸಾರ್ವಜನಿಕರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಹೆಸರಿನಲ್ಲಿ `ಸಿಮ್ ಕಾರ್ಡ್’ ಬಳಸುತ್ತಾರೆ ವಂಚಕರು.!

17/05/2025 11:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.