Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪರ್ಪ್ಲೆಕ್ಸಿಟಿ’ ಹೊಸ ವೈಶಿಷ್ಟ್ಯ ರಾಜಕಾರಣಿಗಳ ಹೂಡಿಕೆ ರಹಸ್ಯ ಬಹಿರಂಗಪಡಿಸುತ್ತೆ!

01/11/2025 9:46 PM

ಹಾವೇರಿ: ನ.3ರಂದು ‘ತುಳಜಾಭವಾನಿ ದೇವಿ’ಯ 26ನೇ ವರ್ಷದ ಜಾತ್ರಾ ಮಹೋತ್ಸವ

01/11/2025 9:43 PM

ಬೆಳಗಾವಿ ಕರ್ನಾಟಕದ ಒಂದು ಭಾಗ, ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸೇರಲು ಬಿಡುವುದಿಲ್ಲ: ಸಿಎಂ ಸಿದ್ಧರಾಮಯ್ಯ

01/11/2025 9:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕಾಂಗ್ರೆಸ್ ‌ಭವನ’ ಭೂಮಿಪೂಜೆಗಾಗಿ ‘ರಾಹುಲ್ ಗಾಂಧಿ’ಗೆ ಆಹ್ವಾನ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

‘ಕಾಂಗ್ರೆಸ್ ‌ಭವನ’ ಭೂಮಿಪೂಜೆಗಾಗಿ ‘ರಾಹುಲ್ ಗಾಂಧಿ’ಗೆ ಆಹ್ವಾನ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0919/03/2025 9:21 PM

ನವದೆಹಲಿ: “ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾ‌ನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ಪೂಜೆಗೆ ಸಮಯ ನೀಡಿ ಎಂದು ಹೇಳಿದ್ದೇನೆ. 100 ಕಾಂಗ್ರೆಸ್ ಕಚೇರಿಗಳನ್ನು ಕಟ್ಟಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅವರು ಸಮಯ ನೀಡಿದಾಗ ಭೂಮಿಪೂಜೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ದೆಹಲಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು.

ರಾಜ್ಯದಲ್ಲಿ ಪಕ್ಷದ ಬೆಳವಣಿಗೆ ವಿಚಾರವಾಗಿ ಹೈಕಮಾಂಡ್ ಬಳಿ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ, “ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಸಬೇಕು ಎಂದು ಸೂಚನೆ ನೀಡಲಾಗಿದ್ದು, ವಿಧಾನಸಭೆ ಅಧಿವೇಶನ ಮುಗಿದ ನಂತರ ಎಲ್ಲಾ ಕ್ಷೇತ್ರಗಳಲ್ಲಿ ಸಭೆ ನಡೆಸಲಾಗುವುದು” ಎಂದರು.

“ರಾಜ್ಯದ ಎಲ್ಲಾ ಬೆಳವಣಿಗೆಗಳು ಹೈಕಮಾಂಡಿನ ಗಮನದಲ್ಲಿವೆ. ಕಾರ್ಯಕರ್ತರ ಸಭೆ ವಿಚಾರವನ್ನು ತಿಳಿಸಲಾಗಿದೆ. ಸಭೆಯ ವರದಿಯನ್ನು ನೀಡಬೇಕು ಎಂದು ಸೂಚನೆ ನೀಡಿದ್ದಾರೆ” ಎಂದರು.

ಅಧಿಕಾರ ಹಸ್ತಾಂತರ ವಿಚಾರವಾಗಿ ಚರ್ಚೆ ನಡೆಸಲಾಯಿತೇ ಎಂದು ಕೇಳಿದಾಗ, “ಈ ರೀತಿಯ ಯಾವ ಸುದ್ದಿಯೂ ಇಲ್ಲ,‌ ಏನೂ ಇಲ್ಲ. ನಾವು ಇದರ ಬಗ್ಗೆ ಯಾವ ವಿಚಾರವನ್ನೂ ಮಾತನಾಡಲು ಹೋಗುವುದಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಿ ಎಂದಷ್ಟೇ ಹೈಕಮಾಂಡ್ ಹೇಳಿದೆ” ಎಂದು ತಿಳಿಸಿದರು.

ಎಐಸಿಸಿ ಕಚೇರಿಗೆ ಭೇಟಿ ಕುರಿತು ಪ್ರಶ್ನಿಸಿದಾಗ “ದೆಹಲಿಗೆ ಬಂದಾಗಲೆಲ್ಲಾ ಪಕ್ಷದ ದೇವಾಲಯ ಎಐಸಿಸಿ ಕಚೇರಿಗೆ ಭೇಟಿ ನೀಡುತ್ತೇನೆ” ಎಂದರು.

ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರ ನಕಾರ; ನಮಗೂ ಕಾನೂನು ಗೊತ್ತಿದೆ

ರಾಮನಗರ ಜಿಲ್ಲೆ ಹೆಸರು ಬದಲಾವಣೆಯನ್ನು ಕೆಂದ್ರ ತಿರಸ್ಕರಿಸಿರುವ ಬಗ್ಗೆ ಕೇಳಿದಾಗ, “ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ರಾಜ್ಯದ ವಿಚಾರ. ನಮಗೂ ಕಾನೂನು ಗೊತ್ತಿದೆ. ಇದನ್ನು ಹೇಗೆ ಜಾರಿಗೆ ತರಬೇಕು ಎಂಬುದು ನಮಗೆ ಗೊತ್ತಿದೆ” ಎಂದು ಹೇಳಿದರು.

“ಇಲ್ಲಿ ಒಂದಷ್ಟು ಸಚಿವರು ಇದ್ದಾರಲ್ಲ ಅವರುಗಳು ಕೇಂದ್ರ ಗೃಹ ಸಚಿವರಿಗೆ ಹೇಳಿ ಹೆಸರು ಬದಲಾವಣೆ ಬೇಡ ಎಂದು ಬರೆಸಿದ್ದಾರೆ” ಎಂದರು. ಈ ವೇಳೆ ಕುಮಾರಸ್ವಾಮಿ ಅವರೇ ಎಂದು ಮರು ಪ್ರಶ್ನಿಸಿದಾಗ ‘ಇನ್ನ್ಯಾರು’ ಎಂದು ಹೆಸರು ಹೇಳದೆ ಛೇಡಿಸಿದರು.

“ಈ ವಿಚಾರವಾಗಿ ಎಲ್ಲಾ ಇಲಾಖೆಗಳು ಧನಾತ್ಮಕವಾಗಿ ಸ್ಪಂದಿಸಿದ್ದವು. ಹಾಗೆ ನೋಡಿದರೆ ಇದರ ಅವಶ್ಯಕತೆಯೂ ಇಲ್ಲ” ಎಂದರು.

ದ್ವೇಷದ ರಾಜಕಾರಣಕ್ಕೆ ಸಾಕ್ಷಿ

“ನೀವು ಹೆಸರು ಬದಲಾವಣೆ ಮಾಡಿಕೊಳ್ಳುವಾಗ ಒಂದು ಅಫಿಡವಿಟ್ ಮಾಡಿಕೊಂಡು ಬದಲಾವಣೆ ಮಾಡಿಕೊಳ್ಳಬಹುದಂತೆ. ಇದು ರಾಜ್ಯದ ವಿಷಯ. ದ್ವೇಷದ ರಾಜಕಾರಣ ಹೇಗೆ ನಡೆಯುತ್ತಿದೆ ಹಾಗೂ ರಾಮನಗರ ಜನತೆಯ ಮೇಲೆ ನಡೆಸುತ್ತಿರುವ ಗದಾ‌ಪ್ರಹಾರಕ್ಕೆ ಇದೆಲ್ಲಾ ಸಾಕ್ಷಿ” ಎಂದು ವ್ಯಂಗ್ಯವಾಡಿದರು.

ಪೋಟೊ ಹಾಕಿಕೊಂಡು ನೋಡಿಕೊಳ್ಳಲಿ

ನನ್ನ ಕೊಲೆಗೆ ಶಿವಕುಮಾರ್, ಸುರೇಶ್, ಹನುಮಂತರಾಯಪ್ಪ, ಕುಸುಮ ಸಂಚು ಹೂಡಿದ್ದಾರೆ ಎನ್ನುವ ಶಾಸಕ ಮುನಿರತ್ನ ಆರೋಪದ ಬಗ್ಗೆ ಕೇಳಿದಾಗ, “ದಿನಾ ಪೋಟೋ ಹಾಕಿಕೊಂಡು ನೋಡಿಕೊಳ್ಳಲು ಹೇಳಿ” ಎಂದು ಕುಟುಕಿದರು.

ನಿಮ್ಮ ಕಾಲೇಜಿನ ಸಹಚರರೊಂದಿಗೆ ಡೇಟಿಂಗ್‌ ಮಾಡಲು ಪ್ರತ್ಯೇಕ ಆಯ್ಕೆ ವಿನ್ಯಾಸಗೊಳಿಸಿದ ‘ಟಿಂಡರ್‌ ಡೇಟಿಂಗ್‌ ಆಪ್‌’

ನಕಲಿ ಕೀಟ ನಾಶಕ ಉತ್ಪನ್ನಗಳ ಹಾವಳಿ ತಪ್ಪಿಸಲು ಕ್ರಮ: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

Share. Facebook Twitter LinkedIn WhatsApp Email

Related Posts

ಹಾವೇರಿ: ನ.3ರಂದು ‘ತುಳಜಾಭವಾನಿ ದೇವಿ’ಯ 26ನೇ ವರ್ಷದ ಜಾತ್ರಾ ಮಹೋತ್ಸವ

01/11/2025 9:43 PM1 Min Read

ಬೆಳಗಾವಿ ಕರ್ನಾಟಕದ ಒಂದು ಭಾಗ, ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸೇರಲು ಬಿಡುವುದಿಲ್ಲ: ಸಿಎಂ ಸಿದ್ಧರಾಮಯ್ಯ

01/11/2025 9:23 PM2 Mins Read

ನೀವು ‘CM ಸಿದ್ಧರಾಮಯ್ಯ’ಗೆ ದೂರು ನೀಡಬೇಕೇ? ಜಸ್ಟ್ ಹೀಗೆ ಮಾಡಿ ಸಾಕು, ನಿಮ್ಮ ‘ಸಮಸ್ಯೆ ಕ್ಲಿಯರ್’

01/11/2025 9:09 PM2 Mins Read
Recent News

‘ಪರ್ಪ್ಲೆಕ್ಸಿಟಿ’ ಹೊಸ ವೈಶಿಷ್ಟ್ಯ ರಾಜಕಾರಣಿಗಳ ಹೂಡಿಕೆ ರಹಸ್ಯ ಬಹಿರಂಗಪಡಿಸುತ್ತೆ!

01/11/2025 9:46 PM

ಹಾವೇರಿ: ನ.3ರಂದು ‘ತುಳಜಾಭವಾನಿ ದೇವಿ’ಯ 26ನೇ ವರ್ಷದ ಜಾತ್ರಾ ಮಹೋತ್ಸವ

01/11/2025 9:43 PM

ಬೆಳಗಾವಿ ಕರ್ನಾಟಕದ ಒಂದು ಭಾಗ, ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸೇರಲು ಬಿಡುವುದಿಲ್ಲ: ಸಿಎಂ ಸಿದ್ಧರಾಮಯ್ಯ

01/11/2025 9:23 PM

ಇಲ್ಲಿ ‘ಗೋಡಂಬಿ’ ತರಕಾರಿ ಬೆಲೆಗೆ ಮಾರ್ತಾರೆ ; ನೀವು ₹500 ಕೊಟ್ರೂ ಮನೆಗೆ ಚೀಲ ತುಂಬಿಸಿಕೊಂಡು ಬರ್ಬೊದು!

01/11/2025 9:19 PM
State News
KARNATAKA

ಹಾವೇರಿ: ನ.3ರಂದು ‘ತುಳಜಾಭವಾನಿ ದೇವಿ’ಯ 26ನೇ ವರ್ಷದ ಜಾತ್ರಾ ಮಹೋತ್ಸವ

By kannadanewsnow0901/11/2025 9:43 PM KARNATAKA 1 Min Read

ಹಾವೇರಿ: ಜಿಲ್ಲೆಯಲ್ಲಿ ಪ್ರಸಿದ್ಧ ಜಾತ್ರೆಗಳಲ್ಲಿ ಒಂದು ಅಕ್ಕಿ ಆಲೂರಿನ ಶ್ರೀ ತುಳಜಾಭವಾನಿ ದೇವಿಯದ್ದು. ನವೆಂಬರ್.3, 2025ರಂದು 26ನೇ ವರ್ಷದ ಜಾತ್ರಾ…

ಬೆಳಗಾವಿ ಕರ್ನಾಟಕದ ಒಂದು ಭಾಗ, ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸೇರಲು ಬಿಡುವುದಿಲ್ಲ: ಸಿಎಂ ಸಿದ್ಧರಾಮಯ್ಯ

01/11/2025 9:23 PM

ನೀವು ‘CM ಸಿದ್ಧರಾಮಯ್ಯ’ಗೆ ದೂರು ನೀಡಬೇಕೇ? ಜಸ್ಟ್ ಹೀಗೆ ಮಾಡಿ ಸಾಕು, ನಿಮ್ಮ ‘ಸಮಸ್ಯೆ ಕ್ಲಿಯರ್’

01/11/2025 9:09 PM

ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ: ಸಿದ್ಧರಾಮಯ್ಯ

01/11/2025 8:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.