ನವದೆಹಲಿ: ಈಗಾಗಲೇ ಜಾರಿ ನಿರ್ದೇಶನಾಲಯದಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸಿತ್ತು. ಸತತ ಮೂರು ದಿನಗಳ ಕಾಲ 40 ಗಂಟೆಯವರೆಗೆ ವಿಚಾರಣೆ ನಡೆಸಿದ್ದಂತ ಇಡಿ, ಇದೀಗ ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ( ED summons Rahul Gandhi ) ಜಾರಿ ಮಾಡಿದೆ.
BIG NEWS: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಮಾಜಿ ಸೈನಿಕ ಕೋಟಾದಲ್ಲಿ ಮೊದಲ Rank ಪಡೆದಿದ್ದ ಅಭ್ಯರ್ಥಿ ಅರೆಸ್ಟ್
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿನ ಅಕ್ರಮ ಹಣ ವರ್ಗಾವಣೆ ಸಂಬಂಧ ಇಡಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿತ್ತು. ಈ ವಿಚಾರಣೆಯ ಬಳಿಕ, ಹುಟ್ಟು ಹಬ್ಬದ ನಂತ್ರ ವಿಚಾರಣೆಗೆ ಹಾಜರಾಗಲು ಅವಕಾಶ ನೀಡುವಂತೆ ಇಡಿಗೆ ಮನವಿ ಮಾಡಿದ್ದರಿಂದ, ವಿಚಾರಣೆಯಿಂದ ವಿನಾಯ್ತಿಯನ್ನು ನೀಡಲಾಗಿತ್ತು.
ದೆಹಲಿಗೆ ಪ್ರಯಾಣ ಬೆಳೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್: ನಾಳೆ ಜಂತರ್ ಮಂತರ್ ನಲ್ಲಿನ ಪ್ರತಿಭಟನೆಯಲ್ಲಿ ಭಾಗಿ
ಇದೀಗ ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ( Congress Leader Rahul Gandhi ) ಸಮನ್ಸ್ ಜಾರಿಗೊಳಿಸಿದೆ. ಸುಮಾರು 40 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಂತ ಇಡಿಯ ಅಧಿಕಾರಿಗಳ ಮುಂದೆ ನಾಳೆ ರಾಹುಲ್ ಗಾಂಧಿ ಹಾಜರಾಗಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.
ಎಸ್ಎಸ್ಸಿ ನೇಮಕಾತಿ: ಶೀಘ್ರವೇ 42,000 ಹುದ್ದೆಗಳಿಗೆ ಅರ್ಜಿ ಆಹ್ವಾನ | SSC recruitment