Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಿನಕ್ಕೆ ಎಷ್ಟು ಬಾರಿ ಮೂತ್ರ ವಿಸರ್ಜನೆ ಮಾಡುವುದು ಸಾಮಾನ್ಯ? ಇಲ್ಲಿದೆ ಉಪಯುಕ್ತ ಮಾಹಿತಿ!

20/03/2026 10:55 AM

ಇಂಗ್ಲೆಂಡ್ ಕ್ರಿಕೆಟ್‌ಗೆ ‘ಯುದ್ಧ’ದ ಬಿಸಿ: ಮಾರುಕಟ್ಟೆಯಲ್ಲಿ ‘ಡ್ಯೂಕ್ಸ್’ ಬಾಲ್‌ಗಳ ಭೀಕರ ಅಭಾವ!

20/03/2026 10:52 AM

BREAKING : ಚಿತ್ರದುರ್ಗದಲ್ಲಿ ಘೋರ ಘಟನೆ : ಪತ್ನಿ, ಮಗಳು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ಮಾಡಿ ವ್ಯಕ್ತಿ ಪರಾರಿ!

20/03/2026 10:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುಂದಿನ ತಿಂಗಳು ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ : ನ.15 ರಿಂದ 20 ರೊಳಗೆ ಸಚಿವ ಸಂಪುಟ ಪುನಾರಚನೆ ಫಿಕ್ಸ್!
KARNATAKA

BREAKING : ಮುಂದಿನ ತಿಂಗಳು ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ : ನ.15 ರಿಂದ 20 ರೊಳಗೆ ಸಚಿವ ಸಂಪುಟ ಪುನಾರಚನೆ ಫಿಕ್ಸ್!

By kannadanewsnow0523/10/2025 9:54 AM

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ನಿನ್ನೆ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಕಲ್ಪ ಪೂರೈಸಿದರು. ನೆಕ್ಸ್ಟ್ ಸಿಎಂ ಆಗಲು ಸಂಕಲ್ಪ ತೊಟ್ಟಿದ್ದಾರೆ ಎಂದು ಮಠದ ಆಚಾರ್ಯ ಒಬ್ಬರು ಮಾಧ್ಯಮಗಳಿಗೆ ಹೇಳಿದ್ದಾರೆ. ಇದರ ನಡುವೆ ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ. ಹಾಗಾಗಿ ವೈಚಾರಿಕವಾಗಿ ಮತ್ತು ಪ್ರಗತಿಪರವಾದ ಸಿದ್ಧಾಂತ ಇಟ್ಟುಕೊಂಡವರಿಗೆ ನಾಯಕತ್ವ ವಹಿಸಿಕೊಳ್ಳಲು ಒಬ್ಬರು ಬೇಕು. ಸತೀಶ್ ಜಾರಕಿಹೊಳಿ ಅಂತಹ ನಾಯಕರು ಜವಾಬ್ದಾರಿ ವಹಿಸಿಕೊಳ್ಳುತ್ತಾರೆ ಎಂದು ಅಹಿಂದ ದಾಳ ಉರುಳಿಸಿದ್ದಾರೆ.

ಇದರ ಮಧ್ಯ ಇದೀಗ ನವೆಂಬರ್ ನಲ್ಲಿ ಬಹುದೊಡ್ಡ ಕ್ರಾಂತಿ ಅಗಲಿದೆ ಎಂದು ಕೆಲವು ನಾಯಕರು ಈಗಾಗಲೇ ಭವಿಷ್ಯ ನುಡಿದಿದ್ದರು. ಅದರಂತೆ ನವೆಂಬರ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ 15 ರಿಂದ 20 ರ ಒಳಗಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂದು ಹೇಳಲಾಗುತ್ತಿದೆ. ಹೌದು ನವೆಂಬರ್ 15 ರಿಂದ 20 ರ ನಡುವೆ ರಾಜ್ಯ ರಾಜಕಾರಣದಲ್ಲಿ ಭಾರಿ ಮಹತ್ವದ ಬೆಳವಣಿಗೆ ಆಗುವ ಸಾಧ್ಯತೆ ಇದೆ. ನವೆಂಬರ್ 19 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಆಹ್ವಾನಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ.

ನವೆಂಬರ್ 19ರಂದು ರಾಜ್ಯಮಟ್ಟದ ಕಾರ್ಯಕ್ರಮ ಒಂದಕ್ಕೆ ರಾಹುಲ್ ಗಾಂಧಿಗೆ ಆಹ್ವಾನ ನೀಡಲಾಗಿದ್ದು ರಾಹುಲ್ ಗಾಂಧಿಗೆ ಆಹ್ವಾನ ಮಾಡುವ ಕುರಿತು ಈಗಾಗಲೇ ಮಾತುಕತೆ ನಡೆದಿದೆ. ಡಿಸಿಎಂ ಡಿಕೆ ಶಿವಕುಮಾರ್ ಹೆಚ್ಚು ಆಸಕ್ತಿ ವಹಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲು ಡಿಸಿಎಂ ಡಿಕೆ ಶಿವಕುಮಾರ್ ತಯಾರಿ ಮಾಡಿಕೊಂಡಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ಜೊತೆಗೆ ಸಂಪುಟ ಪುನಾರಚನೆ ಬಗ್ಗೆಯೂ ಕೂಡ ಚರ್ಚೆ ನಡೆಸುವ ಸಾಧ್ಯತೆ ಇದೆ.ನವೆಂಬರ್ 15 ರಿಂದ 20ರ ಒಳಗಾಗಿ ಸಚಿವ ಸಂಪುಟ ಪುನಃ ರಚನೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ.

ಈ ವೇಳೆ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡಿ ಮುಗಿಸುವ ಇರಾದೆ ಹೊಂದಿದ್ದಾರೆ. ಇದೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ನವೆಂಬರ್ ಅಂತ್ಯಕ್ಕೆ ತಮ್ಮ ಲೆಕ್ಕಾಚಾರದಲ್ಲಿ ಕಡುಬು ಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.ಇದಕ್ಕಿಂತ ಮುಂಚಿತವಾಗಿಯೇ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆ ಸೂತ್ರ ಹೆಣೆದಿದ್ದಾರೆ. ಇದಕ್ಕೆ ಪೂರಕವಾಗಿ ಕರ್ನಾಟಕಕ್ಕೆ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಸೂತ್ರದೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕಾಯುತ್ತಿದ್ದಾರೆ. ರಾಹುಲ್ ಗಾಂಧಿ ರಾಜ್ಯ ಪ್ರವಾಸದ ವೇಳೆ ಕೆಲವು ಮಹತ್ವದ ಬೆಳವಣಿಗೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

ದಿನಕ್ಕೆ ಎಷ್ಟು ಬಾರಿ ಮೂತ್ರ ವಿಸರ್ಜನೆ ಮಾಡುವುದು ಸಾಮಾನ್ಯ? ಇಲ್ಲಿದೆ ಉಪಯುಕ್ತ ಮಾಹಿತಿ!

20/03/2026 10:55 AM2 Mins Read

BREAKING : ಚಿತ್ರದುರ್ಗದಲ್ಲಿ ಘೋರ ಘಟನೆ : ಪತ್ನಿ, ಮಗಳು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ಮಾಡಿ ವ್ಯಕ್ತಿ ಪರಾರಿ!

20/03/2026 10:43 AM1 Min Read

ಶಿವಮೊಗ್ಗದಲ್ಲಿ ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು : ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ

20/03/2026 10:37 AM1 Min Read
Recent News

ದಿನಕ್ಕೆ ಎಷ್ಟು ಬಾರಿ ಮೂತ್ರ ವಿಸರ್ಜನೆ ಮಾಡುವುದು ಸಾಮಾನ್ಯ? ಇಲ್ಲಿದೆ ಉಪಯುಕ್ತ ಮಾಹಿತಿ!

20/03/2026 10:55 AM

ಇಂಗ್ಲೆಂಡ್ ಕ್ರಿಕೆಟ್‌ಗೆ ‘ಯುದ್ಧ’ದ ಬಿಸಿ: ಮಾರುಕಟ್ಟೆಯಲ್ಲಿ ‘ಡ್ಯೂಕ್ಸ್’ ಬಾಲ್‌ಗಳ ಭೀಕರ ಅಭಾವ!

20/03/2026 10:52 AM

BREAKING : ಚಿತ್ರದುರ್ಗದಲ್ಲಿ ಘೋರ ಘಟನೆ : ಪತ್ನಿ, ಮಗಳು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ಮಾಡಿ ವ್ಯಕ್ತಿ ಪರಾರಿ!

20/03/2026 10:43 AM

ಇರಾನ್ ಕ್ಷಿಪಣಿ ದಾಳಿಗೆ ಅಮೆರಿಕದ ಅತ್ಯಾಧುನಿಕ F-35 ಯುದ್ಧ ವಿಮಾನ ಜಖಂ: ತುರ್ತು ಭೂಸ್ಪರ್ಶ!

20/03/2026 10:38 AM
State News
KARNATAKA

ದಿನಕ್ಕೆ ಎಷ್ಟು ಬಾರಿ ಮೂತ್ರ ವಿಸರ್ಜನೆ ಮಾಡುವುದು ಸಾಮಾನ್ಯ? ಇಲ್ಲಿದೆ ಉಪಯುಕ್ತ ಮಾಹಿತಿ!

By kannadanewsnow5720/03/2026 10:55 AM KARNATAKA 2 Mins Read

ನಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಮೂತ್ರಪಿಂಡಗಳು (Kidneys) ಪ್ರಮುಖ ಪಾತ್ರವಹಿಸುತ್ತವೆ. ನಾವು ಸೇವಿಸುವ ಆಹಾರ ಮತ್ತು ದ್ರವ ಪದಾರ್ಥಗಳನ್ನು ಫಿಲ್ಟರ್…

BREAKING : ಚಿತ್ರದುರ್ಗದಲ್ಲಿ ಘೋರ ಘಟನೆ : ಪತ್ನಿ, ಮಗಳು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ಮಾಡಿ ವ್ಯಕ್ತಿ ಪರಾರಿ!

20/03/2026 10:43 AM

ಶಿವಮೊಗ್ಗದಲ್ಲಿ ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು : ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ

20/03/2026 10:37 AM

ALERT : ಹಾರ್ಟ್ ಅಟ್ಯಾಕ್ Vs ಕಾರ್ಡಿಯಾಕ್ ಅರೆಸ್ಟ್ ನಡುವಿನ ವ್ಯತ್ಯಾಸವೇನು? ತಿಳಿಯಿರಿ

20/03/2026 10:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.