ಮೈಸೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ರಾಜ್ಯಕ್ಕೆ ಕಾಂಗ್ರೆಸ್ ನಾಯಕ ಆಗಮಿಸಳಿದ್ದು, ಮಂಡ್ಯ ವಿವಿ ಆವರಣದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದೆ.ರಾಹುಲ್ ಗಾಂಧಿ ಆಗಮನದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು ರಾಜ್ಯಕ್ಕೆ ರಾಹುಲ್ ಗಾಂಧಿ ಬರುವುದರಿಂದ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ರಾಹುಲ್ ಗಾಂಧಿ ಬರುವುದರಿಂದ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಮಂಡ್ಯದಲ್ಲಿ ರಾಹುಲ್ ಗಾಂಧಿ ಅರ್ಧ ಗಂಟೆ ಭಾಷಣ ಮಾಡಿದರೆ ಏನು ಆಗಲ್ಲ. ಮಂಡ್ಯ ಜನತೆ ಮೈತ್ರಿ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ನಿರ್ಧರಿಸಿದ್ದಾರೆ. ರಾಹುಲ್ ಗಾಂಧಿ ಬಂದು ಹೋಗುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ತಿಳಿಸಿದರು.

ಒಕ್ಕಲಿಗರ ರಕ್ಷಣೆಗೆ ನಾನಿದ್ದೇನೆ ಎಂಬ ಡಿಸಿಎಂ ಡಿಕೆ ಹೇಳಿಕೆಯ ವಿಚಾರವಾಗಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು ಸಿದ್ದರಾಮಯ್ಯ ಸರ್ಕಾರದಲ್ಲಿ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಅಂತ ಆಯ್ತು ಇದನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರೇ ಒಪ್ಪಿಕೊಂಡಂತೆ ಆಗಿದೆ ಮಂಡ್ಯದಲ್ಲಿ ಮಾರಿ ಸೆಮ್ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದು ನನ್ನ ಗೆಲುವು ಮಂಡ್ಯ ಜಿಲ್ಲೆಯ ಜನತೆಯ ಕೈಯಲ್ಲಿ ಇದೆ. ಹಣ ಇದೆ ಎಂಬ ಅಹಂಕಾರದಿಂದ ಈ ರೀತಿ ಮಾತನಾಡುತ್ತಿದ್ದಾರೆ.

Share.
Exit mobile version