Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ವಿದ್ಯಾರ್ಥಿಗಳು ಪಂಚಮಂತ್ರ ಅಳವಡಿಸಿಕೊಂಡಾಗ ಯಶಸ್ಸು ಖಂಡಿತ- ನ್ಯಾಯಮೂರ್ತಿ ಹೆಚ್.ಪಿ ಸಂದೇಶ್

22/06/2025 10:21 PM

2ನೇ ಬಾರಿಗೆ ‘ಸಾಗರ ತಾಲ್ಲೂಕು ಮೊಗವೀರ ಸಂಘ’ದ ನೂತನ ಅಧ್ಯಕ್ಷರಾಗಿ ‘ಸತೀಶ್ ಕೆ ಮೊಗವೀರ’ ಆಯ್ಕೆ

22/06/2025 9:37 PM

BIG NEWS : ಭಕ್ತಾದಿಗಳ ಗಮನಕ್ಕೆ : ಮುರುಡೇಶ್ವರ ದೇವಸ್ಥಾನದಲ್ಲಿ ‘ವಸ್ತ್ರ ಸಂಹಿತೆ’ ಜಾರಿ

22/06/2025 9:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ, ರದ್ದು | South Western Railway
KARNATAKA

‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ, ರದ್ದು | South Western Railway

By kannadanewsnow0922/07/2024 7:33 PM

ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯಿಂದ ವಿವಿಧ ಕಾರಣಗಳಿಂದಾಗಿ ಕೆಲ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿದ್ದರೇ, ಇನ್ನೂ ಕೆಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ನಿಟ್ಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್-64ರ ರಸ್ತೆ ಕೆಳಸೇತುವೆಗೆ ತಾತ್ಕಾಲಿಕ ಗರ್ಡರ್ ಗಳನ್ನು ಅಳವಡಿಸುವ ಮತ್ತು ತೆಗೆದುಹಾಕಲು ಅಗತ್ಯ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳನ್ನು ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ ಮತ್ತು ಸಮಯ ಮರುನಿಗದಿ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ:

8 ರೈಲುಗಳ ಸಂಚಾರ ರದ್ದು:

ಈ ಕೆಳಗಿನ ರೈಲುಗಳ ಸಂಚಾರ ಆಗಸ್ಟ್ 8 ಮತ್ತು 15 ರಂದು ತಾತ್ಕಾಲಿಕವಾಗಿ 2 ದಿನ ರದ್ದು ಮಾಡಲಾಗುತ್ತಿದೆ:

1. ರೈಲು ಸಂಖ್ಯೆ 07346 ತುಮಕೂರು-ಚಾಮರಾಜನಗರ ಡೈಲಿ ಪ್ಯಾಸೆಂಜರ್ ಸ್ಪೆಷಲ್.
2. ರೈಲು ಸಂಖ್ಯೆ 07328 ಚಾಮರಾಜನಗರ-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್.
3. ರೈಲು ಸಂಖ್ಯೆ 16239 ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್‌ಪ್ರೆಸ್.
4. ರೈಲು ಸಂಖ್ಯೆ 16240 ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್‌ಪ್ರೆಸ್.
5. ರೈಲು ಸಂಖ್ಯೆ 06576 ತಮಕೂರು-ಕೆಎಸ್ಆರ್ ಬೆಂಗಳೂರು ಮೆಮು ಸ್ಪೆಷಲ್.
6. ರೈಲು ಸಂಖ್ಯೆ 06575 KSR ಬೆಂಗಳೂರು-ತಮುಕೂರು ಮೆಮು ಸ್ಪೆಷಲ್.
7. ರೈಲು ಸಂಖ್ಯೆ 16579 ಯಶವಂತಪುರ-ಶಿವಮೊಗ್ಗ ಟೌನ್ ಇಂಟರ್‌ಸಿಟಿ ಡೈಲಿ ಎಕ್ಸ್‌ಪ್ರೆಸ್.
8. ರೈಲು ಸಂಖ್ಯೆ 16580 ಶಿವಮೊಗ್ಗ ಟೌನ್-ಯಶವಂತಪುರ ಇಂಟರ್‌ಸಿಟಿ ಡೈಲಿ ಎಕ್ಸ್‌ಪ್ರೆಸ್.

5 ರೈಲುಗಳ ಸಂಚಾರ ಭಾಗಶಃ ರದ್ದು:

ಈ ಕೆಳಗಿನ ರೈಲುಗಳನ್ನು ಆಗಸ್ಟ್ 8 ಮತ್ತು 15 ರಂದು ತಾತ್ಕಾಲಿಕವಾಗಿ 2 ದಿನ ಭಾಗಶಃ ರದ್ದು ಮಾಡಲಾಗುತ್ತಿದೆ:

1. ರೈಲು ಸಂಖ್ಯೆ 06571 ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ ರೈಲು ಹಿರೇಹಳ್ಳಿ-ತುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ ಮತ್ತು ಈ ರೈಲು ಹಿರೇಹಳ್ಳಿಯಲ್ಲಿ ಕೊನೆಗೊಳ್ಳುತ್ತದೆ.

2. ರೈಲು ಸಂಖ್ಯೆ 06572 ತುಮಕೂರು-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು ತುಮಕೂರು-ಹಿರೇಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ ಮತ್ತು ಈ ರೈಲು ಹಿರೇಹಳ್ಳಿಯಿಂದ ತನ್ನ ನಿಗದಿತ ಸಮಯದಲ್ಲಿ ಹೊರಡಲಿದೆ.

3. ರೈಲು ಸಂಖ್ಯೆ 20652 ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ ಮತ್ತು ಈ ರೈಲು ಅರಸೀಕೆರೆಯಲ್ಲಿ ಕೊನೆಗೊಳ್ಳುತ್ತದೆ.

4. ರೈಲು ಸಂಖ್ಯೆ 12726 ಧಾರವಾಡ-ಕೆಎಸ್‌ಆರ್ ಬೆಂಗಳೂರು ಸಿದ್ದಗಂಗಾ ಡೈಲಿ ಎಕ್ಸ್‌ಪ್ರೆಸ್ ಅರಸೀಕೆರೆ-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ ಮತ್ತು ಈ ರೈಲು ಅರಸೀಕೆರೆಯಲ್ಲಿ ಕೊನೆಗೊಳ್ಳುತ್ತದೆ.

5. ರೈಲು ಸಂಖ್ಯೆ 12725 ಕೆಎಸ್‌ಆರ್ ಬೆಂಗಳೂರು-ಧಾರವಾಡ ಸಿದ್ದಗಂಗಾ ಡೈಲಿ ಎಕ್ಸ್‌ಪ್ರೆಸ್ ಕೆಎಸ್‌ಆರ್ ಬೆಂಗಳೂರು-ಅರಸಿಕೆರೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ ಮತ್ತು ಈ ರೈಲು ಅರಸೀಕೆರೆಯಿಂದ ತನ್ನ ನಿಗದಿತ ಸಮಯದಲ್ಲಿ ಹೊರಡಲಿದೆ.

5 ರೈಲುಗಳ ಮಾರ್ಗ ಬದಲಾವಣೆ:

1. ಆಗಸ್ಟ್ 7 & 14 ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ-ಯಶವಂತಪುರ ಡೈಲಿ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

2. ಆಗಸ್ಟ್ 8 ಮತ್ತು 15 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 22687 ಮೈಸೂರು-ವಾರಣಾಸಿ ದ್ವಿ-ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರಿನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

3. ಆಗಸ್ಟ್ 8 ಮತ್ತು 15 ರಂದು ಯಶವಂತಪುರ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 82653 ಯಶವಂತಪುರ-ಜೈಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರಿನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

4. ಆಗಸ್ಟ್ 8 ಮತ್ತು 15 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 19668 ಮೈಸೂರು-ಉದಯಪುರ ಸಿಟಿ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ.

5. ಆಗಸ್ಟ್ 8 ಮತ್ತು 15 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್ ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

5 ರೈಲುಗಳ ನಿಯಂತ್ರಣ:

1. ಆಗಸ್ಟ್ 6 ಮತ್ತು 13 ರಂದು ಬಿಕಾನೇರ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16588 ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 150 ನಿಮಿಷ ನಿಯಂತ್ರಿಸಲಾಗುತ್ತದೆ.

2. ಆಗಸ್ಟ್ 8 ಮತ್ತು 15 ರಂದು ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 12629 ಯಶವಂತಪುರ-ಹಜರತ್ ನಿಜಾಮುದ್ದೀನ್ ರೈಲನ್ನು ಮಾರ್ಗ ಮಧ್ಯೆ 50 ನಿಮಿಷ ನಿಯಂತ್ರಿಸಲಾಗುತ್ತದೆ.

3. ಆಗಸ್ಟ್ 8 ಮತ್ತು 15 ರಂದು ರೈಲು ಸಂಖ್ಯೆ 20651 ಕೆಎಸ್ಆರ್ ಬೆಂಗಳೂರು-ತಾಳಗುಪ್ಪ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗದಲ್ಲಿ 10 ನಿಮಿಷಗಳವರೆಗೆ ನಿಯಂತ್ರಿಸಲ್ಪಡುತ್ತದೆ.

4. ಆಗಸ್ಟ್ 8 ಮತ್ತು 15 ರಂದು ಬೆಳಗಾವಿಯಿಂದ ಹೊರಡುವ ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ವಿಶ್ವಮಾನವ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗದಲ್ಲಿ 55 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ

5. ಆಗಸ್ಟ್ 8 ಮತ್ತು 15 ರಂದು ರೈಲು ಸಂಖ್ಯೆ 07345 ಚಾಮರಾಜನಗರ-ತುಮಕೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ಮಾರ್ಗದಲ್ಲಿ 120 ನಿಮಿಷಗಳವರೆಗೆ ನಿಯಂತ್ರಿಸಲ್ಪಡುತ್ತದೆ.

2 ರೈಲುಗಳ ಸಮಯ ಮರುನಿಗದಿ:

1. ಆಗಸ್ಟ್ 8 ಮತ್ತು 15 ರಂದು ರೈಲು ಸಂಖ್ಯೆ 17309 ಯಶವಂತಪುರ-ವಾಸ್ಕೋಡಗಾಮಾ ಡೈಲಿ ಎಕ್ಸ್‌ಪ್ರೆಸ್ ರೈಲು ಯಶವಂತಪುರದಿಂದ 60 ನಿಮಿಷ ತಡವಾಗಿ ಹೊರಡಲಿದೆ.

2. ಆಗಸ್ಟ್ 14 ರಂದು ರೈಲು ಸಂಖ್ಯೆ 06513 ತುಮಕೂರು-ಶಿವಮೊಗ್ಗ ಟೌನ್ ಮೆಮು ಸ್ಪೆಷಲ್ ರೈಲು ತುಮಕೂರಿನಿಂದ 85 ನಿಮಿಷ ತಡವಾಗಿ ಹೊರಡಲಿದೆ.

BREAKING: ಸಿಎಂ, ಮಾಜಿ ಸಚಿವರ ಹೆಸರು ಹೇಳುವಂತೆ ಒತ್ತಡ: ‘ED ಅಧಿಕಾರಿ’ಗಳ ವಿರುದ್ಧ ದೂರು, ‘FIR’ ದಾಖಲು

BREAKING : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ : 2ನೇ ಪ್ರಕರಣದಲ್ಲೂ ಸೂರಜ್ ರೇವಣ್ಣಗೆ ಜಾಮೀನು ಮಂಜೂರು!

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ವಿದ್ಯಾರ್ಥಿಗಳು ಪಂಚಮಂತ್ರ ಅಳವಡಿಸಿಕೊಂಡಾಗ ಯಶಸ್ಸು ಖಂಡಿತ- ನ್ಯಾಯಮೂರ್ತಿ ಹೆಚ್.ಪಿ ಸಂದೇಶ್

22/06/2025 10:21 PM3 Mins Read

2ನೇ ಬಾರಿಗೆ ‘ಸಾಗರ ತಾಲ್ಲೂಕು ಮೊಗವೀರ ಸಂಘ’ದ ನೂತನ ಅಧ್ಯಕ್ಷರಾಗಿ ‘ಸತೀಶ್ ಕೆ ಮೊಗವೀರ’ ಆಯ್ಕೆ

22/06/2025 9:37 PM1 Min Read

BIG NEWS : ಭಕ್ತಾದಿಗಳ ಗಮನಕ್ಕೆ : ಮುರುಡೇಶ್ವರ ದೇವಸ್ಥಾನದಲ್ಲಿ ‘ವಸ್ತ್ರ ಸಂಹಿತೆ’ ಜಾರಿ

22/06/2025 9:24 PM1 Min Read
Recent News

ಶಿವಮೊಗ್ಗ: ವಿದ್ಯಾರ್ಥಿಗಳು ಪಂಚಮಂತ್ರ ಅಳವಡಿಸಿಕೊಂಡಾಗ ಯಶಸ್ಸು ಖಂಡಿತ- ನ್ಯಾಯಮೂರ್ತಿ ಹೆಚ್.ಪಿ ಸಂದೇಶ್

22/06/2025 10:21 PM

2ನೇ ಬಾರಿಗೆ ‘ಸಾಗರ ತಾಲ್ಲೂಕು ಮೊಗವೀರ ಸಂಘ’ದ ನೂತನ ಅಧ್ಯಕ್ಷರಾಗಿ ‘ಸತೀಶ್ ಕೆ ಮೊಗವೀರ’ ಆಯ್ಕೆ

22/06/2025 9:37 PM

BIG NEWS : ಭಕ್ತಾದಿಗಳ ಗಮನಕ್ಕೆ : ಮುರುಡೇಶ್ವರ ದೇವಸ್ಥಾನದಲ್ಲಿ ‘ವಸ್ತ್ರ ಸಂಹಿತೆ’ ಜಾರಿ

22/06/2025 9:24 PM

ಮುಂದಿನ 3 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

22/06/2025 8:55 PM
State News
KARNATAKA

ಶಿವಮೊಗ್ಗ: ವಿದ್ಯಾರ್ಥಿಗಳು ಪಂಚಮಂತ್ರ ಅಳವಡಿಸಿಕೊಂಡಾಗ ಯಶಸ್ಸು ಖಂಡಿತ- ನ್ಯಾಯಮೂರ್ತಿ ಹೆಚ್.ಪಿ ಸಂದೇಶ್

By kannadanewsnow0922/06/2025 10:21 PM KARNATAKA 3 Mins Read

ಶಿವಮೊಗ್ಗ: ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ, ಸಮಯ ಪ್ರಜ್ಞೆ, ಆತ್ಮವಿಶ್ವಾಸ ಹಾಗೂ ನಿರ್ಭಯದಂತ ಪಂಚಮಂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಸಾಧಿಸಲು…

2ನೇ ಬಾರಿಗೆ ‘ಸಾಗರ ತಾಲ್ಲೂಕು ಮೊಗವೀರ ಸಂಘ’ದ ನೂತನ ಅಧ್ಯಕ್ಷರಾಗಿ ‘ಸತೀಶ್ ಕೆ ಮೊಗವೀರ’ ಆಯ್ಕೆ

22/06/2025 9:37 PM

BIG NEWS : ಭಕ್ತಾದಿಗಳ ಗಮನಕ್ಕೆ : ಮುರುಡೇಶ್ವರ ದೇವಸ್ಥಾನದಲ್ಲಿ ‘ವಸ್ತ್ರ ಸಂಹಿತೆ’ ಜಾರಿ

22/06/2025 9:24 PM

ಮುಂದಿನ 3 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

22/06/2025 8:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.