Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಮುನ್ಸೂಚನೆಯಿಂದ 2 ವಾರಗಳ ಕನಿಷ್ಠ ಮಟ್ಟಕ್ಕೆ ಕುಸಿದ ಕಚ್ಚಾ ತೈಲ ಬೆಲೆ!

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕೇಂದ್ರ ಸರ್ಕಾರದ ತೆರವು ಆದೇಶಕ್ಕೆ ಪ್ರತಿರೋಧ: ಕೋರ್ಟ್ ಮೆಟ್ಟಿಲೇರಲು ಸಜ್ಜಾದ ‘ಡೆಲ್ಲಿ ಜಿಮ್ಖಾನಾ’ ಕ್ಲಬ್ ಸದಸ್ಯರು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
KARNATAKA

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

By kannadanewsnow57

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬಾಗಲಕೋಟೆ, ಗದಗ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಭಾರಿ ಗಾಳಿಯ ಜೊತೆಗೆ ಆಲಿಕಲ್ಲು ಮಳೆ (Hailstorm) ಬೀಳುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ರೈತರು ತೀವ್ರ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.ಇದರೊಂದಿಗೆ ಉತ್ತರ ಕರ್ನಾಟಕದ ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲೂ ಮಳೆ ಅಬ್ಬರಿಸಲಿದೆ.

ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ‘ರಣ ಮಳೆ’

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ರಣ ಮಳೆ ಸುರಿಯಲಿದೆ. ಇನ್ನು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು: ಮೇ 25ರಂದು ಗಂಟೆಗೆ 50-60 ಕಿ.ಮೀ ವೇಗದ ಬಲವಾದ ಬಿರುಗಾಳಿ ಬೀಸಲಿದ್ದು, ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಮೇ 26ರಿಂದ 28ರ ವರೆಗೆ ಗಾಳಿಯ ವೇಗ ಇದೇ ರೀತಿ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಣನೀಯವಾಗಿ ಕುಸಿಯಲಿದೆ.

ದಕ್ಷಿಣ ಒಳನಾಡು: ಮೇ 25ರಂದು ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆ/ಗುಡುಗು ಸಹಿತ ಮಳೆಯಾಗಲಿದ್ದು, ಮೇ 26ರಿಂದ 28ರ ವರೆಗೂ ಇದೇ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ. ಇಡೀ ರಾಜ್ಯದಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ.

ಕರಾವಳಿ: ಮುಂದಿನ 5 ದಿನಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ. ಮೇ 25 ರಂದು ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಮೇ 26 ರಿಂದ 28 ರವರೆಗೆ ಮಿಂಚಿನೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಗಮನಿಸಿ: ಬಿರುಗಾಳಿ ಮತ್ತು ಮಿಂಚಿನ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು ಹಾಗೂ ಮರ ಮತ್ತು ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಹವಾಮಾನ ಇಲಾಖೆ ಕೋರಿದೆ.

Rain Alert : Air load drops : Heavy rain with thunderstorms forecast across the state for next 3 days
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್ : ಮರು ನೋಂದಣಿಗೆ ಸರ್ಕಾರ ಸಿದ್ಧತೆ.!

1 Min Read

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL ರೇಷನ್ ಕಾರ್ಡ್’ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ.!

2 Mins Read

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಟ್ಯೂಷನ್ ಗೆ ತೆರಳಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ.!

1 Min Read
Recent News

ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಮುನ್ಸೂಚನೆಯಿಂದ 2 ವಾರಗಳ ಕನಿಷ್ಠ ಮಟ್ಟಕ್ಕೆ ಕುಸಿದ ಕಚ್ಚಾ ತೈಲ ಬೆಲೆ!

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕೇಂದ್ರ ಸರ್ಕಾರದ ತೆರವು ಆದೇಶಕ್ಕೆ ಪ್ರತಿರೋಧ: ಕೋರ್ಟ್ ಮೆಟ್ಟಿಲೇರಲು ಸಜ್ಜಾದ ‘ಡೆಲ್ಲಿ ಜಿಮ್ಖಾನಾ’ ಕ್ಲಬ್ ಸದಸ್ಯರು!

BIG NEWS : ರಾಜ್ಯದ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್ : ಮರು ನೋಂದಣಿಗೆ ಸರ್ಕಾರ ಸಿದ್ಧತೆ.!

State News
KARNATAKA

Rain Alert : ವಾಯುಭಾರ ಕುಸಿತ : ರಾಜ್ಯದಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

By kannadanewsnow57 KARNATAKA 2 Mins Read

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಗುಡುಗು ಸಹಿತ ಭಾರಿ…

BIG NEWS : ರಾಜ್ಯದ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್ : ಮರು ನೋಂದಣಿಗೆ ಸರ್ಕಾರ ಸಿದ್ಧತೆ.!

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL ರೇಷನ್ ಕಾರ್ಡ್’ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ.!

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಟ್ಯೂಷನ್ ಗೆ ತೆರಳಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.