ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರದಿಂದಲೇ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿದ್ದು, ಕೆಲ ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಜ.26, 27ರಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ರಾಜ್ಯದಲ್ಲಿ ಇಳಿಮುಖವಾಗಿದ್ದ ಚಳಿ 2 ದಿನದಿಂದ ಮತ್ತೆ ಹೆಚ್ಚಳವಾಗಿದೆ. ಮೋಡ ಕವಿದ ವಾತಾವರಣ, ತಂಪಾದ ಗಾಳಿ ಬೀಸುತ್ತಿರುವುದು ಸೇರಿ ಇತರ ಕಾರಣಗಳು ಚಳಿ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ.








