ಬೆಂಗಳೂರು: ರಾಜ್ಯದಲ್ಲಿ ಮತ್ತೆ ಇಂದಿನಿಂದ ಮುಂಗಾರು ಚುರುಕಾಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 1 ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವಡೆ ಜೂ.23ರಿಂದ ಜೂ.29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. . ಕರಾವಳಿಯಲ್ಲಿ ಜೂ.23ರಿಂದ ಜೂ.29ರವರೆಗೆ ಆರೆಂಜ್ ಅಲರ್ಟ್ ಘೋಷಿಸ ಲಾಗಿದೆ.
ಇಂದಿನಿಂದ ಒಂದು ವಾರ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಕೊಡಗಿನ ಕೆಲವೆಡೆ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆ ಚುರುಕುಗೊಂಡಿವೆ. ಉತ್ತಮ ಮಳೆಯಾದ ಕಾರಣ ಯಾದಗಿರಿಯ ಬಸವಸಾಗರ ಜಲಾಶಯದ 14 ಕ್ರಸ್ಟ್ಗೇಟ್ ಗಳ ಮೂಲಕ 42,820 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ.