ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ ನಾಲ್ಕು ದಿನ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 1 ವಾರದಿಂದ ಕರಾವಳಿಯಲ್ಲಿ ಆರ್ಭಟಿಸಿದ್ದ ಮಳೆ ಸೋಮವಾರ ಸ್ವಲ್ಪ ತಗ್ಗಿದ್ದು, ಮುಂದಿನ 5 ದಿನಗಳು ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಜುಲೈ 16 ರವರೆಗೂ ಆರೆಂಜ್ ಅಲರ್ಟ್ ಘೊಷಿಸಲಾಗಿದೆ.
Good News : ಪಡಿತರ ಚೀಟಿದಾರರಿಗೆ ಸಿಹಿಸುದ್ದಿ : `ಗರೀಬ್ ಕಲ್ಯಾಣ ಅನ್ನ ಯೋಜನೆ’ಯಡಿ ಆಹಾರ ಧಾನ್ಯ ವಿತರಣೆ
ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ 115.6ಮಿಮಿ ನಿಂದ 204.4ಮಿಮಿ ನಷ್ಟು ಭಾರೀ ಮಳೆಯಾಗಲಿದೆ ಎಂಬುದಾಗಿ ಮಾಹಿತಿ ನೀಡಿದೆ. ಜುಲೈ.13ರಂದು 64.5ರಿಂದ 115.5ಮಿಮಿನಷ್ಟು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ.
BIGG NEWS : ಮಳೆಹಾನಿ ಪ್ರದೇಶಗಳಿಗೆ ಇಂದು,ನಾಳೆ ಸಿಎಂ ಭೇಟಿ : ಪರಿಹಾರ ಕಾಮಗಾರಿ ಪರಿಶೀಲನೆ
ದಿನಾಂಕ 14-07-2022ರಂದು ಮೈಸೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಗಾಲಿದೆ. ಸುಮಾರು 64.5ರಿಂದ 115.5ಮಿಮಿ ನಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಜುಲೈ.15ರಂದು ಕೂಡ ಭಾರೀ ಮಳೆ ಮುಂದುವರೆಯಲಿದೆ. ಅಂದು ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸುಮಾರು 64.5ರಿಂದ 115.5ಮಿಮಿ ನಷ್ಟು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.