ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕಡಬ ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
BGG NEWS: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಬಳ್ಳಾರಿ ಬಂದ್; ನಗರದಲ್ಲಿ ಆರಂಭಗೊಂಡ ಬೈಕ್ ರ್ಯಾಲಿ| Bellary bandh
ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆ ಕುಮಾರಧಾರ ನದಿಯ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದೆ. ಸ್ನಾನಘಟ್ಟ ಪ್ರದೇಶ ನೀರಿನಿಂದ ಆವೃತಗೊಂಡಿದೆ. ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಭಕ್ತಾದಿಗಳಿಗೆ ಸ್ನಾನಘಟ್ಟದಲ್ಲಿ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.