ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಳಿ ಶಿರಾಡಿ ಘಾಟ್ ನಲ್ಲಿ ರಾಜಹಂಸ ಹಾಗೂ ಐರಾವತ ಬಸ್ ಮುಖಾಮುಖಿ ದಿಕ್ಕಿಯಾದ ಪರಿಣಾಮ, ಬಸ್ ನಲ್ಲಿದ್ದ ಹಲವು ಪ್ರಯಾಣಿಕಾರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೌದು ಇಂದು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಲಿ ಈ ಒಂದು ಅಪಘಾತ ಸಂಭವಿಸಿದೆ. ಈ ವೇಳೆ ಟೆಂಪೋ ಒಂದು ಅಪಘಾತವನ್ನು ತಪ್ಪಿಸಲು ಹೋಗಿ ರಸ್ತೆ ಬದಿ ಹಳ್ಳಕ್ಕೆ ಬಿದ್ದಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ,

ಸದ್ಯ ಶಿರಾಡಿ ಘಾಟ್ ಮಾರ್ಗದಲ್ಲಿ ಇದೀಗ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿದೆ. ಬಸ್ ಗಳನ್ನು ತೆರವು ಗೊಳಿಸುವ ಕಾರ್ಯಚರಣೆ ಆರಂಭವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್ ನಲ್ಲಿ ಈ ಅಪಘಾತ ಸಂಭವಿಸಿದೆ.

Share.
Exit mobile version