ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ, ಧಮ್ಕಿ ಹಾಕಿದ್ದರು. ಈ ಆಡಿಯೋ ವೈರಲ್ ಆಗಿತ್ತು. ಇಂತಹ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತುಗೊಳಿಸಿ ಕೆಪಿಸಿಸಿ ಆದೇಶಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಪೌರಾಯುಕ್ತೆಯಾಗಿದ್ದಂತ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವಿನ ವಿಚಾರದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಧಮ್ಕಿ, ಬೆದರಿಕೆ, ಅಸಭ್ಯ ರೀತಿಯಲ್ಲಿ ನಿಂದನೆ ಮಾಡಿದ್ದರು.
ಈ ಪ್ರಕರಣದ ಬಗ್ಗೆ ಕೆಪಿಸಿಸಿಯಿಂದ ಶಿಸ್ತು ನೋಟಿಸ್ ನೀಡಲಾಗಿತ್ತು. ಆದರೇ ನಾಪತ್ತೆಯಾಗಿರುವಂತ ರಾಜೀವ್ ಗೌಡ ಅವರು ಇದಕ್ಕೆ ಉತ್ತರಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಅವರನ್ನು ಕೆಪಿಸಿಸಿಯು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಆದೇಶಿಸಿದೆ.
BREAKING: ರಾಜ್ಯದಲ್ಲೊಂದು ಭೀಕರ ಅಪಘಾತ: ಬಸ್, ಕ್ರೂಸರ್ ನಡುವೆ ಡಿಕ್ಕಿಯಾಗಿ ಮೂವರು ಸಾವು
ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ








