ಬೀದರ್: ನಗರದ ನೆಹರೂ ಕ್ರೀಢಾಂಗಣದಲ್ಲಿ ನಾಳೆ ಅಗ್ನಿಪತ್ ನೇಮಕಾತಿಗಾಗಿ Rally ನಡೆಯಲಿದೆ. ಅಗ್ನಿಪಥ್ ನೇಮಕಾತಿಗಾಗಿ ( Appointment of Agneepath ) ನಡೆಯುವಂತ ಸೇನಾ Rallyಯಲ್ಲಿ 70 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

“ರೌಡಿಗಳಿಂದ, ರೌಡಿಗಳಿಗಾಗಿ, ರೌಡಿಗಳಿಗೋಸ್ಕರ” ಇದು ಬಿಜೆಪಿಯ ಹೊಸ ದ್ಯೇಯವಾಕ್ಯ – ಟ್ವಿಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ

ಡಿಸೆಂಬರ್ 5ರ ನಾಳೆಯಿಂದ 22ರವರೆಗೆ ಬೀದರ್ ನ ಜಿಲ್ಲಾ ನೆಹರು ಕ್ರೀಢಾಂಗಣದಲ್ಲಿ ಅಗ್ನಿಪಥ್ ಸೇನಾ ನೇಮಕಾತಿಗಾಗಿ Rallyಯನ್ನು ಆಯೋಜಿಸಲಿದೆ. ಈಗಾಗಲೇ ಇದಕ್ಕಾಗಿ ಎಲ್ಲಾ ತಯಾರಿಯನ್ನು ಮುಕ್ತಾಯಗೊಳಿಸಲಾಗಿತ್ತು, ನಾಳೆ 70,357 ಅಭ್ಯರ್ಥಿಗಳು ಬೀದರ್, ಕಲಬುರ್ಗಿ, ರಾಯಚೂರು, ಬೆಳಗಾವಿ ಮತ್ತು ಯಾದಗಿರಿ ಜಿಲ್ಲೆಯಿಂದ ಆಗಮಿಸಲಿದ್ದಾರೆ ಎನ್ನಲಾಗಿದೆ.

ಕನ್ನಡದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಪುಟ್ಟಣ್ಣ ಕಣಗಾಲ್ – ಡಾ.ಮಹೇಶ ಜೋಶಿ ಬಣ್ಣನೆ

ಅಂದಹಾಗೇ ನೆಹರು ಜಿಲ್ಲಾ ಕ್ರೀಢಾಂಗಣದಲ್ಲಿ ನೆಡೆಯಲಿರುವಂತ ಅಗ್ನಿಪಥ್ ಸೇನಾ ನೇಮಕಾತಿ Rallyಯಲ್ಲಿ ಭಾಗವಹಿಸುವಂತ ಅಭ್ಯರ್ಥಿಗಳಿಗೆ ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲಸೌಕಲ್ಯದ ವ್ಯವಸ್ಥೆಯನ್ನು ಮಾಡಲಾಗಿದೆ.

BIGG NEWS : ನಾಳೆ ಕನ್ನಡದ ಹಿರಿಯ ನಟ ದ್ವಾರಕೀಶ್ ಗೆ ‘ಗೌರವ ಡಾಕ್ಟರೇಟ್’ ಪ್ರದಾನ

ನಾಳೆ ಬೆಳಿಗ್ಗೆ 4 ಗಂಟೆಯಿಂದಲೇ ಅಭ್ಯರ್ಥಿಗಳು ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಅಭ್ಯರ್ಥಿಗಳ ದೈಹಿಕ ಪರೀಕ್ಷೆ, ಮೆಡಿಕಲ್ ಟೆಸ್ಟ್ ಸೇರಿದಂತೆ ವಿವಿಧ ಪರೀಕ್ಷೆಗಳು ನಡೆಯಲಿವೆ.

Share.
Exit mobile version