ತುಮಕೂರು : ಕಳೆದ ಎರಡು ದಿನಗಳ ಹಿಂದೆ ಲೋಕಸಭೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲದೆ ಹೋದಲ್ಲಿ ಸಿಎಂ ಸಿದ್ದರಾಮಯ್ಯ ನೈತಿಕವಾಗಿ ರಾಜೀನಾಮೆ ನೀಡಬೇಕು ಎಂಬ ಶಾಸಕ ಎಸ್ ಆರ್ ಶ್ರೀನಿವಾಸ್ ಹೇಳಿಕೆ ಸಂಚಲನ ಮೂಡಿಸಿತ್ತು.ಇದೀಗ ತುಮಕೂರಿನ ಗುಬ್ಬಿಯಲ್ಲಿ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ರಾಮ ಮಂದಿರ ಕಟ್ಟುವುದರಿಂದ ಬಡವನ ಹೊಟ್ಟೆ ತುಂಬಲ್ಲ ಆದರೆ ಸಿದ್ದರಾಮಯ್ಯ ಕೊಟ್ಟ 5 ಕೆಜಿಯಿಂದ ಬಡವನ ಹೊಟ್ಟೆ ತುಂಬುತ್ತೆ ಎಂದು ತಿಳಿಸಿದರು.
BREAKING : ಬೆಂಗಳೂರು: ಹೈಕೋರ್ಟ್ ಇಬ್ಬರು ನ್ಯಾಯಮೂರ್ತಿಗಳಿಗೆ ‘ಬೆದರಿಕೆ ಕರೆ’ : ಎರಡು ಪ್ರತ್ಯೇಕ ಪ್ರಕರಣ ದಾಖಲು
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಮಾತನಾಡಿದ ಅವರು, ಶ್ರೀರಾಮ ಮಂದಿರದಿಂದ ಬಡವನ ಹೊಟ್ಟೆ ತುಂಬಲ್ಲ.ಈ ಚುನಾವಣೆಯಲ್ಲಿ ಬಿಜೆಪಿಯವರು ಶ್ರೀರಾಮನನ್ನು ತೋರಿಸುತ್ತಿದ್ದಾರೆ. ನಾವು ರಾಮನ ಭಕ್ತರೇ ಹನುಮನ ರೀತಿ ಎದೆ ಬಗಿದು ತೋರಿಸುತ್ತಿಲ್ಲ. ಅಲ್ಲಿ ರಾಮಮಂದಿರ ನಿರ್ಮಿಸಿದರೆ ಇಲ್ಲಿರುವ ಬಡವನ ಹೊಟ್ಟೆ ತುಂಬಲ್ಲ ಎಂದು ಅವರು ತಿಳಿಸಿದರು.
ಲೋಕಸಭಾ ಚುನಾವಣೆ: ಈವರೆಗೆ ‘ದಾಖಲಾದ ಪ್ರಕರಣ’ಗಳು ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್
ಸಿದ್ದರಾಮಯ್ಯ ಕೊಟ್ಟ 5 ಕೆಜಿ ಅಕ್ಕಿಯಿಂದ ಬಡವನ ಹೊಟ್ಟೆ ತುಂಬುತ್ತೆ. ಸಿದ್ದರಾಮಯ್ಯ ಬಡವರ ಪರ ಹಿಂದುಳಿದವರ ಪರ ಕೆಲಸ ಮಾಡುತ್ತಿದ್ದಾರೆ. ಶಾಸಕ ಎಸ್ ಆರ್ ಶ್ರೀನಿವಾಸ್ ಆ ಗುಂಪು ಈ ಗುಂಪು ಅಂತ ಹೇಳುತ್ತಾರೆ. ಆದರೆ ನಮ್ಮ ತಾಯಿಯ ಆಣೆಗೂ ನಾನು ಕಾಂಗ್ರೆಸ್ ಗುಂಪು ಎಂದು ಶಾಸಕ ಶ್ರೀನಿವಾಸ ತಿಳಿಸಿದರು.