ರಾಮನಗರ : ಬರ್ತಡೇ ಪಾರ್ಟಿ ವೇಳೆ ಗಲಾಟೆ ನಡೆದಿದ್ದರಿಂದ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ತಿಮ್ಮೇಗೌಡನ ದೊಡ್ಡಿ ಗ್ರಾಮದ ಬಳಿ ಯುವಕನೊಬ್ಬನ ಬರ್ಬರ ಹತ್ಯೆ ಮಾಡಲಾಗಿದೆ.
ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಅಶೋಕ್ (30) ಎನ್ನುವ ವ್ಯಕ್ತಿಯನ್ನು ಕೊಲೆಗೈಯಲಾಗಿದೆ. ಕಾರ್ಪೊರೇಟರ್ ಮಂಜುನಾಥ್ ತೋಟದ ಮನೆಯಲ್ಲಿ ಅಶೋಕ್ ಶವ ಪತ್ತೆಯಾಗಿದೆ.ರಾತ್ರಿ ಒಂದು ಗಂಟೆಗೆ ಯುವಕನ ಶವ ಕಂಡು ಗ್ರಾಮಸ್ಥರು 112 ಗೆ ಕರೆ ಮಾಡಿ ಶವ ಬಿದ್ದಿರುವ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೊಲೆ ಬಗ್ಗೆ ಮಾಹಿತಿ ಕುದೂರು ಪೊಲೀಸರು ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.ಜನವರಿ 21ರಂದು ದಿಲೀಪ್ ಎಂಬ ಯುವಕನ ಹುಟ್ಟುಹಬ್ಬ ಇತ್ತು. ನಿನ್ನೆ ರಾತ್ರಿ ಬಿಲೇಟೇಡ್ ಬರ್ತಡೇ ಪಾರ್ಟಿ ನಡೆಯುತ್ತಿತ್ತು.ಪಾರ್ಟಿ ವೇಳೆ ಗಲಾಟೆ ಆಗಿರುವ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾರ್ಟಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪೊಲೀಸರು ಇದೀಗ ಹುಡುಕಾಟ ನಡೆಸುತ್ತಿದ್ದಾರೆ. ಕುದುರು ಪೊಲೀಸ್ ಅಣ್ಣ ವ್ಯಾಪ್ತಿಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.