Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಟ್ರಂಪ್ ಈಗ ಮೋದಿಯನ್ನು ಅಪಹರಿಸುತ್ತಾರೆಯೇ’: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್

07/01/2026 9:32 AM

Viral Video : ತನ್ನ ಹುಟ್ಟುಹಬ್ಬವನ್ನೇ ಮರೆತು ಗಡಿ ಕಾಯ್ತಿರುವ ಸೈನಿಕ ; ಮಗಳಿಂದ ವಿಡಿಯೋ ಕರೆ, ದೃಶ್ಯಕ್ಕೆ ನೆಟ್ಟಿಗರು ಭಾವುಕ!

07/01/2026 9:28 AM

ತಿರುಮಲ ಕರೆನ್ಸಿ ಕಳ್ಳತನ ಪ್ರಕರಣ: ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲು ಟಿಟಿಡಿಗೆ ಆಂಧ್ರ ಹೈಕೋರ್ಟ್ ಸೂಚನೆ

07/01/2026 9:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಭಾಗ್ಯಲಕ್ಷ್ಮಿ ಯೋಜನೆಯಡಿ ‘ಉಚಿತ ಸೀರೆ ಹಂಚಿಕೆ’ಯಲ್ಲಿ 23 ಕೋಟಿ ಹಗರಣ: ರಮೇಶ್ ಬಾಬು ಗಂಭೀರ ಆರೋಪ
KARNATAKA

BIG NEWS: ಭಾಗ್ಯಲಕ್ಷ್ಮಿ ಯೋಜನೆಯಡಿ ‘ಉಚಿತ ಸೀರೆ ಹಂಚಿಕೆ’ಯಲ್ಲಿ 23 ಕೋಟಿ ಹಗರಣ: ರಮೇಶ್ ಬಾಬು ಗಂಭೀರ ಆರೋಪ

By kannadanewsnow0905/09/2024 5:48 PM

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಮತ್ತೊಂದು ಹಗರಣ ಬಯಲಾಗಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿರುವುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಬಿಚ್ಚಿಟ್ಟಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, 2011 ರಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಅಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿದೆ. ಸುಮಾರು 10 ಲಕ್ಷ ಸೀರೆಗಳನ್ನು ಹಂಚಿಕೆ ಮಾಡಲಾಗಿತ್ತು. ರೂ.100 ಮುಖಬೆಲೆಯ ಸೀರೆಗಳಿಗೆ ಹೆಚ್ಚು ಬೆಲೆ ಕೊಟ್ಟು ಸೂರತ್ ಇಂದ ತರಿಸಲಾಗಿತ್ತು ಎಂದರು.

ಈ ಹಗರಣದ ಬಗ್ಗೆ ವಿಧಾನ ಪರಿಷತ್ ಅಲ್ಲಿ ಮೋಟಮ್ಮ ಅವರು ವಿರೋಧ ಪಕ್ಷದ ನಾಯಕರಾಗಿ ಇದ್ದಾಗ ಈ ವಿಚಾರದ ಬಗ್ಗೆ ಚರ್ಚೆಯಾಗಿದೆ. ಸದಸ್ಯರಾಗಿದ್ದ ಯು. ಬಿ. ವೆಂಕಟೇಶ್ ಅವರು ಹಾಗೂ ದಯಾನಂದ ಅವರು ಇದರ ಬಗ್ಗೆ ಸುಧೀರ್ಘ ಚರ್ಚೆ ನಡೆಸಿದ್ದರು. ಈ ಹಗರಣದ ಬಗ್ಗೆ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.

ರಾಜಸ್ಥಾನದಿಂದ ಬಂದಿರುವ ಲೆಹರ್ ಸಿಂಗ್ ಅವರು ನಮ್ಮ ಕರ್ನಾಟಕದ ಹಿತ ಕಾಪಾಡುತ್ತಾರೋ ಅಥವಾ ರಾಜಸ್ಥಾನದ ಹಿತ ಕಾಪಾಡುತ್ತಾರೋ ನೋಡಬೇಕು. ಅಕ್ರಮಗಳ ಬಗ್ಗೆ ಮಾತನಾಡುವ ಅವರು ಈ ಸೀರೆ ಹಗರಣದ ಬಗ್ಗೆ ದನಿ ಎತ್ತಬೇಕು, ತನಿಖೆ ನಡೆಸಿ ಎಂದು ಸಿಎಂಗೆ ಪತ್ರ ಬರೆಯಬೇಕು ಎಂದರು.

ಅಮೇರಿಕಾ ಅಧ್ಯಕ್ಷರು ಬಂದು ದೂರು ನೀಡಬೇಕು ಎಂದು ಭಾವಿಸಿದ್ದರು ಎನಿಸುತ್ತದೆ

ಶಾಲೆ ನಡೆಸುತ್ತೇನೆ ಎಂದು ಬಿರಿಯಾನಿ ಹೋಟೆಲ್ ನಡೆಸುತ್ತಿರುವ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರನ್ನು ಕಾಂಗ್ರೆಸ್ ಪಕ್ಷದ ಎರಡನೇ ಸಾಲಿನ ನಾಯಕರು ಹೋಗಿದ್ದಾರೆ ಎನ್ನುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಬಾಲಿಶ ಮಾತುಗಳನ್ನು ಆಡಿದ್ದಾರೆ. ಅವರಿಗೆ ಅಮೇರಿಕಾ ಅಧ್ಯಕ್ಷರು ಬಂದು ದೂರು ನೀಡಬೇಕು ಎಂದು ನಿರೀಕ್ಷೆ ಮಾಡಿದ್ದರು ಎನಿಸುತ್ತದೆ ಎಂದರು.

ವಿಜಯೇಂದ್ರ ಬಾಲಭವನದ ನಾಯಕ

ವಿಜಯೇಂದ್ರ, ಆರ್. ಅಶೋಕ್, ಸಂಸದ ಸುಧಾಕರ್, ಅಶ್ವಥ್ ನಾರಾಯಣ ಅವರು ಜಗನ್ನಾಥ ಭವನದ ನಾಯಕರಲ್ಲ ಬಾಲಭವನದ ನಾಯಕರು ಎಂದು ಜಗನ್ನಾಥ ಭವನದ ನಾಯಕರಾದ ಬಿ. ಎಲ್. ಸಂತೋಷ, ಸಿ. ಟಿ. ರವಿ, ಯತ್ನಾಳ್, ರವಿಕುಮಾರ್ ಅವರು ಹೇಳುತ್ತಿದ್ದಾರೆ ಎಂದರು.

ವಿಜಯೇಂದ್ರ ಅವರು ತಮ್ಮ ತಂದೆಯ ನಕಲಿ ಸಹಿ ಮಾಡಿ ಅವ್ಯವಹಾರ ಮಾಡಿದ ಆರೋಪ ಹೊತ್ತಿದ್ದಾರೆ. ಎಚ್ ವಿಶ್ವನಾಥ್ ಅವರು 20 ಸಾವಿರ ಕೋಟಿಯ ನೀರಾವರಿ ಹಗರಣದ ಆರೋಪ ಮಾಡಿದ್ದರು. ಯತ್ನಾಳ್ ಹಾಗೂ ಅರವಿಂದ ಬೆಲ್ಲದ ಅವರು ಹೈ ಕಮಾಂಡ್ ಗೆ ಪತ್ರ ಬರೆದಿದ್ದರು. ಒಂದು ಪಕ್ಷದ ಅಧ್ಯಕ್ಷರಾದ ವಿಜಯೇಂದ್ರ ಅವರು ಈ ಆರೋಪಗಳ ಮೇಲೆ ತನಿಖೆ ನಡೆಸಿ ಎಂದು ಪತ್ರ ಸಿಎಂ ಗೆ ಪತ್ರ ಬರೆಯಲಿ ಎಂದು ಆಶಿಸುತ್ತೇನೆ ಎಂದರು.

ಕೈಗಾರಿಕಾ ಪ್ರದೇಶಕ್ಕೆ ಪ್ರತ್ಯೇಕ ನೀರು ಸರಬರಾಜು, ಮೂಲಸೌಕರ್ಯ ಅಭಿವೃದ್ಧಿ ₹5,000 ಕೋಟಿ ಸಾಲದ ಉದ್ದೇಶ: ಸಚಿವ ಎಂಬಿಪಿ

BREAKING: ಸೆ.7ರಂದು ಗಣೇಶ ಚತುರ್ಥಿ ಹಬ್ಬ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ BBMP ಆದೇಶ

ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ರೈತರೇ ಗಮನಿಸಿ : `ಕೃಷಿ ಇಲಾಖೆ’ಯಿಂದ ನಿಮಗೆ ಸಿಗಲಿರುವ 21 ಯೋಜನೆ, ಸೌಲಭ್ಯಗಳ ಬಗ್ಗೆ ಇಲ್ಲಿದೆ ಮಾಹಿತಿ

07/01/2026 9:19 AM6 Mins Read

ALERT : `ಮೊಬೈಲ್’ ಬಳಕೆದಾರರು ಓದಲೇಬೇಕಾದ ಸುದ್ದಿ : `ಫೋನ್’ ಬಳಕೆಯಿಂದ ಹೆಚ್ಚುತ್ತಿದೆ ಈ ಗಂಭೀರ ಸಮಸ್ಯೆ.!

07/01/2026 8:40 AM2 Mins Read

BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನ.!

07/01/2026 8:25 AM1 Min Read
Recent News

‘ಟ್ರಂಪ್ ಈಗ ಮೋದಿಯನ್ನು ಅಪಹರಿಸುತ್ತಾರೆಯೇ’: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್

07/01/2026 9:32 AM

Viral Video : ತನ್ನ ಹುಟ್ಟುಹಬ್ಬವನ್ನೇ ಮರೆತು ಗಡಿ ಕಾಯ್ತಿರುವ ಸೈನಿಕ ; ಮಗಳಿಂದ ವಿಡಿಯೋ ಕರೆ, ದೃಶ್ಯಕ್ಕೆ ನೆಟ್ಟಿಗರು ಭಾವುಕ!

07/01/2026 9:28 AM

ತಿರುಮಲ ಕರೆನ್ಸಿ ಕಳ್ಳತನ ಪ್ರಕರಣ: ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲು ಟಿಟಿಡಿಗೆ ಆಂಧ್ರ ಹೈಕೋರ್ಟ್ ಸೂಚನೆ

07/01/2026 9:20 AM

GOOD NEWS : ರಾಜ್ಯದ ರೈತರೇ ಗಮನಿಸಿ : `ಕೃಷಿ ಇಲಾಖೆ’ಯಿಂದ ನಿಮಗೆ ಸಿಗಲಿರುವ 21 ಯೋಜನೆ, ಸೌಲಭ್ಯಗಳ ಬಗ್ಗೆ ಇಲ್ಲಿದೆ ಮಾಹಿತಿ

07/01/2026 9:19 AM
State News
KARNATAKA

GOOD NEWS : ರಾಜ್ಯದ ರೈತರೇ ಗಮನಿಸಿ : `ಕೃಷಿ ಇಲಾಖೆ’ಯಿಂದ ನಿಮಗೆ ಸಿಗಲಿರುವ 21 ಯೋಜನೆ, ಸೌಲಭ್ಯಗಳ ಬಗ್ಗೆ ಇಲ್ಲಿದೆ ಮಾಹಿತಿ

By kannadanewsnow5707/01/2026 9:19 AM KARNATAKA 6 Mins Read

ಬೆಂಗಳೂರು : ರಾಜ್ಯದ ರೈತರೇ ಗಮನಿಸಿ, ಕೃಷಿ ಇಲಾಖೆಯಿಂದ ನಿಮಗೆ ಕೃಷಿ ಯಂತ್ರೋಪಕರಣ, ಬೆಳೆ ವಿಮೆ, ನೀರಾವರಿ, ಮಣ್ಣು ಪರೀಕ್ಷೆ,…

ALERT : `ಮೊಬೈಲ್’ ಬಳಕೆದಾರರು ಓದಲೇಬೇಕಾದ ಸುದ್ದಿ : `ಫೋನ್’ ಬಳಕೆಯಿಂದ ಹೆಚ್ಚುತ್ತಿದೆ ಈ ಗಂಭೀರ ಸಮಸ್ಯೆ.!

07/01/2026 8:40 AM

BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನ.!

07/01/2026 8:25 AM

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : `ರಾಜಹಂಸ’ ಬಸ್ ಟಿಕೆಟ್ ದರ ಇಳಿಕೆ

07/01/2026 8:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.