Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಜೊತೆ ಕದನ ವಿರಾಮ ಮಾತುಕತೆ: ಸಂಧಾನಕ್ಕಾಗಿ ನಾಳೆ ಪಾಕಿಸ್ತಾನಕ್ಕೆ ಟ್ರಂಪ್ ಆಪ್ತ ಜೇರೆಡ್ ಕುಶ್ನರ್ ಮತ್ತು ಸ್ಟೀವ್ ವಿಟ್ಕಾಫ್ ಭೇಟಿ

19/04/2026 7:28 PM

ವಿಶ್ವದ ‘ಅತ್ಯಂತ ಮಧುರ ಭಾಷೆ’ ಯಾವುದು? ಯುನೆಸ್ಕೋ ಸಮೀಕ್ಷೆಯ ಬಗ್ಗೆ ನೀವು ತಿಳಿಯಲೇಬೇಕಾದ ಕುತೂಹಲಕಾರಿ ಸಂಗತಿಗಳು!

19/04/2026 7:03 PM

ಮಣಿಪುರದಲ್ಲಿ ಮತ್ತೆ ರಕ್ತಪಾತ: ಉಖ್ರುಲ್‌ನಲ್ಲಿ ಹೊಂಚುದಾಳಿ, ಇಬ್ಬರ ಸಾವು; ಇಂಫಾಲದಲ್ಲಿ ಪ್ರತಿಭಟನೆಯ ಕಿಚ್ಚು

19/04/2026 6:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನಪರ ಸರ್ಕಾರದ ಸಾರ್ಥಕ ಒಂದು ವರ್ಷ: ರಣದೀಪ್ ಸುರ್ಜೆವಾಲ ಶ್ಲಾಘನೆ
KARNATAKA

ಜನಪರ ಸರ್ಕಾರದ ಸಾರ್ಥಕ ಒಂದು ವರ್ಷ: ರಣದೀಪ್ ಸುರ್ಜೆವಾಲ ಶ್ಲಾಘನೆ

By kannadanewsnow0919/05/2024 7:35 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇ 20 ರಂದು 1 ವರ್ಷ ಪೂರೈಸುತ್ತಿದೆ. ಕಡಿಮೆ‌ ಅವಧಿಯಲ್ಲಿ ಸರ್ಕಾರ ಅಪೂರ್ವ ಸಾಧನೆ ಮಾಡಿ, ಅಗಣಿತ ಜನ ಮನ್ನಣೆ ಗಳಿಸಿದೆ. ಯಾವುದೇ ಜಾತಿ, ಧರ್ಮ ಎಂದು ನೋಡದೇ ಎಲ್ಲ ವರ್ಗವನ್ನೂ ಸಮಾನಾಗಿ ಕಾಣುವ ಮೂಲಕ ಸರ್ವರಿಗೂ ಸಮಬಾಳು – ಸಮಪಾಲು ಎಂಬ ತತ್ತ್ವವನ್ನು ಸಾರಿದೆ. ಆ ಮೂಲಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ 4.60 ಕೋಟಿ ಜನರನ್ನು ತಲುಪುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಬಣ್ಣಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರ ಎಂದರೆ ಕೇವಲ ರಸ್ತೆ, ಸೇತುವೆಯಂಥ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಮಾತ್ರವಲ್ಲ. ಬಡವರು, ಮಹಿಳೆಯರು,‌ ರೈತರು ಸೇರಿದಂತೆ ಶ್ರಮಿಕ ವರ್ಗವನ್ನೂ ಸಹ ಆರ್ಥಿಕವಾಗಿ ಸಶಕ್ತರನ್ನಾಗಿಸಿ, ಮುಖ್ಯವಾಹಿನಿಗೆ ತಂದು, ಸರ್ವರ ಸರ್ವತೋಮುಖ ಅಭಿವೃದ್ಧಿ ಮಾಡುವುದು ಎಂಬ ವಿಭಿನ್ನ ಆಶಯದೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಡಿ ಇಟ್ಟಿದೆ‌. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ದೇಶದಲ್ಲಿ, ಅಷ್ಟೇ ಏಕೆ ವಿಶ್ವದಲ್ಲೇ ಮಾದರಿಯಾಗಿದೆ.

ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕೇವಲ ಭರವಸೆ ಕೊಡದೇ, ಗ್ಯಾರಂಟಿ ಕಾರ್ಡ್ ಗಳ ಮೂಲಕ ಜನರಿಗೆ ವಿಶ್ವಾಸ ಮೂಡಿಸಿತ್ತು. ಬಹುಮತದ ಜನಾಶಯ ಪಡೆದ ನಂತರ ಸುಮ್ಮನೆ ಕೂರದೇ 9 ತಿಂಗಳಲ್ಲಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಶಕ್ತಿ, ಯುವ ನಿಧಿಗಳನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರದ ಅಕ್ಕಿ ಕೊಡದೇ ಅಸಹಕಾರ ನೀಡಿದಾಗಲೂ ಜನರ ಬ್ಯಾಂಕ್ ಖಾತೆಗೆ ಹಣ ಹಾಕುವ ಮೂಲಕ ನುಡಿದಂತೆ ನಡೆಯುತ್ತಿದೆ.

ನೇರ ನಗದು ವರ್ಗಾವಣೆ ಮೂಲಕ ಕೋಟ್ಯಂತರ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ತಲುಪಿಸಿ, ದೊಡ್ಡ ಕ್ರಾಂತಿಯನ್ನೇ ಮಾಡಿದೆ. ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ. ಮಕ್ಕಳ ವಿದ್ಯಾಭ್ಯಾಸ, ಹಿರಿಯರ ಔಷದೋಪಚಾರಕ್ಕೆ ನೆರವಾಗಿದೆ. ರಾಜ್ಯದ ಪ್ರವಾಸೋದ್ಯಮ ಚಟುವಟಿಕೆ ಚುರುಕಾಗಿದೆ. ಒಟ್ಟಿನಲ್ಲಿ ಸರ್ಕಾರ “ಜನರಿಂದ ಜನರಿಗಾಗಿ,” ಎಂಬ ಪ್ರಜಾಪ್ರಭುತ್ವದ ಮೂಲ ಆಶಯವನ್ನು ಈಡೇರಿಸುತ್ತಿದೆ.

ಮಹಿಳೆಯರು ಉಚಿತ ಪ್ರಯಾಣದ ಮೂಲಕ, ಗೃಹ ಲಕ್ಷ್ಮೀ ಯೋಜನೆಯ ಮೂಲಕ ಸ್ವಾವಲಂಬಿಗಳಾಗುವತ್ತ ಹೆಜ್ಜೆ ಇಡುತ್ತಿದ್ದಾರೆ. ಮನೆಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸುತ್ತಿದ್ದಾರೆ. ಆ ಮೂಲಕ ಸರ್ಕಾರವು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಮೂಲ ಆಶಯವನ್ನು ಈಡೇರಿಸುವತ್ತ ದಾಪುಗಾಲಿಡುತ್ತಿದೆ.

ರಾಜ್ಯದ 223 ತಾಲೂಕುಗಳಲ್ಲಿ ಭೀಕರ ಬರ ಪರಿಸ್ಥಿತಿ ಇದೆ. ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ವಿಳಂಬ ಮಾಡಿ, ಅಸಹಕಾರ ತೋರಿದಾಗಲೂ ಸಹ ರಾಜ್ಯದ ಗ್ಯಾರಂಟಿ ಯೋಜನೆಗಳು ಜನರಿಗೆ ನೆರವಾದವು. ಜನರು ತೊಂದರೆ ಇಲ್ಲದೇ ಜೀವನ ಮಾಡಲು ರಾಜ್ಯ ಸರ್ಕಾರ ತನ್ನ ಯೋಜನೆಗಳ ಮೂಲಕ ಅನುವು ಮಾಡಿಕೊಟ್ಟಿತು. ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಹಣ ನೀಡಿದ ಸರ್ಕಾರದ ನಡೆ ಶ್ಲಾಘನೀಯ. ಈ ವೇಳೆ ರೈತರ ಖಾತೆಗೆ ಎರಡು ಸಾವಿರ ರೂಪಾಯಿಗಳನ್ನು ಸಹ ರಾಜ್ಯ ಸರ್ಕಾರ ಜಮೆ ಮಾಡಿ ರೈತ ಪರ ಸರ್ಕಾರ ಎಂಬುದನ್ನು ಸಾಬೀತು ಮಾಡಿದೆ.

ಕ್ರಾಂತಿಕಾರಿ ಹೆಜ್ಜೆಗಳಿಂದ ಒಂದು ವರ್ಷದಲ್ಲಿ ಸಾಕಷ್ಟು ಸಾಧನೆ ಮಾಡಿದ ಸರ್ಕಾರ ಮುಂದಿನ ನಾಲ್ಕು ವರ್ಷಗಳನ್ನು ಸಮರ್ಥವಾಗಿ ಎದುರಿಸಲಿದೆ. ಮಾತ್ರವಲ್ಲ ರಾಜ್ಯದ ಜನರ ಆಶೋತ್ತರಗಳಿಗೆ ಸ್ಪಂದಿಸಿ, ರಾಜ್ಯದಲ್ಲಿ ಅಭಿವೃದ್ಧಿಯ ಪರ್ವವನ್ನು ಸೃಷ್ಟಿ ಮಾಡಲಿದೆ ಎಂಬ ದೃಢ ವಿಶ್ವಾಸವಿದೆ. ವರ್ಷದಲ್ಲಿ ಕೋಟ್ಯಂತರ ಜನರ ಹರ್ಷಕ್ಕೆ ಕಾರಣವಾದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುರ್ಜೆವಾಲಾ ಹೇಳಿದ್ದಾರೆ.

BIG NEWS: ‘ಪೊಲೀಸ್ ಠಾಣೆ’ ಏನು ನಿಮ್ಮಪ್ಪಂದಾ.?: ಸ್ಟೇಷನ್ನಲ್ಲೇ ‘PSI’ಗೆ ‘ಶಾಸಕ ಹರೀಶ್ ಪೂಂಜಾ ಧಮ್ಕಿ’

PM Modi: ‘ತೃಣಮೂಲ’ ಸುಳ್ಳುಗಳನ್ನು ಹರಡುತ್ತಿದೆ: ಮಮತಾ ಬ್ಯಾನರ್ಜಿ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

Share. Facebook Twitter LinkedIn WhatsApp Email

Related Posts

BREAKING: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

19/04/2026 5:55 PM1 Min Read

ಕಾಂಗ್ರೆಸ್ ಸದಾ ಮಹಿಳಾ ಶಕ್ತಿಯ ಪರ: ಪ್ರಧಾನಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

19/04/2026 5:40 PM2 Mins Read

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

19/04/2026 5:24 PM3 Mins Read
Recent News

ಇರಾನ್ ಜೊತೆ ಕದನ ವಿರಾಮ ಮಾತುಕತೆ: ಸಂಧಾನಕ್ಕಾಗಿ ನಾಳೆ ಪಾಕಿಸ್ತಾನಕ್ಕೆ ಟ್ರಂಪ್ ಆಪ್ತ ಜೇರೆಡ್ ಕುಶ್ನರ್ ಮತ್ತು ಸ್ಟೀವ್ ವಿಟ್ಕಾಫ್ ಭೇಟಿ

19/04/2026 7:28 PM

ವಿಶ್ವದ ‘ಅತ್ಯಂತ ಮಧುರ ಭಾಷೆ’ ಯಾವುದು? ಯುನೆಸ್ಕೋ ಸಮೀಕ್ಷೆಯ ಬಗ್ಗೆ ನೀವು ತಿಳಿಯಲೇಬೇಕಾದ ಕುತೂಹಲಕಾರಿ ಸಂಗತಿಗಳು!

19/04/2026 7:03 PM

ಮಣಿಪುರದಲ್ಲಿ ಮತ್ತೆ ರಕ್ತಪಾತ: ಉಖ್ರುಲ್‌ನಲ್ಲಿ ಹೊಂಚುದಾಳಿ, ಇಬ್ಬರ ಸಾವು; ಇಂಫಾಲದಲ್ಲಿ ಪ್ರತಿಭಟನೆಯ ಕಿಚ್ಚು

19/04/2026 6:41 PM

ಲೆನ್ಸ್‌ಕಾರ್ಟ್ ‘ಡ್ರೆಸ್ ಕೋಡ್’ ವಿವಾದ: ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚಿಸಿದ ಸಿಇಒ ಪಿಯುಷ್ ಬನ್ಸಾಲ್; ಹೊಸ ಮಾರ್ಗಸೂಚಿ ಪ್ರಕಟ

19/04/2026 6:35 PM
State News
KARNATAKA

BREAKING: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

By kannadanewsnow0919/04/2026 5:55 PM KARNATAKA 1 Min Read

ಮೈಸೂರು: ಜಿಲ್ಲೆಯ ಕೃಷ್ಣರಾಜ ನಗರದ (ಕೆ.ಆರ್. ನಗರ) ಪ್ರಸಿದ್ಧ ಆರ್ಕೇಶ್ವರ ದೇವಸ್ಥಾನದ ಸಮೀಪವಿರುವ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ…

ಕಾಂಗ್ರೆಸ್ ಸದಾ ಮಹಿಳಾ ಶಕ್ತಿಯ ಪರ: ಪ್ರಧಾನಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

19/04/2026 5:40 PM

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

19/04/2026 5:24 PM

ಚಿರತೆಯಿಂದ ವೃದ್ಧ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚನ್ನಮ್ಮ ಸಾಹಸ ಪ್ರಶಸ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

19/04/2026 4:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.