ಬೆಂಗಳೂರು : ದುಬೈನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾ ರಾವ್ ಅವರನ್ನು ನಿನ್ನೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿತ್ತು.ಅದಾದ ಬಳಿಕ ಇದೀಗ ಈ ಒಂದು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ.
ಹೌದು ರನ್ಯಾ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚಿನ್ನ ಸಾಗಾಟದ ವೇಳೆ ಪೊಲೀಸರ ಲೋಪದೋಷ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ನೀಡಿದೆ. ರನ್ಯಾ ರಾವ್ ಚಿನ್ನ ಸಾಗಾಟದಲ್ಲಿ ಪೊಲೀಸರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸತ್ಯಾಸತತೆಯನ್ನು ತಿಳಿಯಲು ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಇದೀಗ ಆದೇಶ ನೀಡಿದೆ.
ಆದೇಶದಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ (Gold smuggling) ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನಟಿ ರನ್ಯಾ ರಾವ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಬಂಧಿಸಿರುತ್ತಾರೆ. ನಟಿ ರನ್ಯಾ ರಾವ್ ಇವರು ವಿದೇಶಗಳಿಗೆ ಹೋಗುವಾಗ ಮತ್ತು ಬರುವ ಸಂದರ್ಭಗಳಲ್ಲಿ ಪೊಲೀಸ್ ಸಿಬ್ಬಂದಿಗಳಿಂದ ಲೋಪಗಳು ಆಗಿರುವುದಾಗಿ ವಿವಿಧ ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಪುಸಾರವಾಗಿರುತ್ತದೆ.
ಈ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳು ಕರ್ತವ್ಯ ಲೋಪ ಎಸಗಿರಬಹುದಾದ ಸಂಭಾವ್ಯತೆ ಬಗ್ಗೆ ಸತ್ಯಾಸತ್ಯತೆಯನ್ನು ತಿಳಿಯಲು ಸಿಐಡಿ (Criminal Investigation Department) ಬೆಂಗಳೂರು, ವತಿಯಿಂದ ವಿಚಾರಣೆ ನಡೆಸುವ ಬಗ್ಗೆ ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿರುತ್ತದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ನಟಿ ರನ್ಯಾ ರಾವ್ ರವರು ಕೈಗೊಳ್ಳಲಾಗಿದ್ದ ವಿದೇಶಿ ಪ್ರಯಾಣಗಳ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳು ಕರ್ತವ್ಯ ಲೋಪ ಎಸಗಿರಬಹುದಾದ ಸಂಭಾವ್ಯತೆ ಬಗ್ಗೆ, ಸತ್ಯಾಸತ್ಯತೆಯನ್ನು ತಿಳಿಯಲು ಸಿಐಡಿ (Criminal Investigation Department) ಬೆಂಗಳೂರು, ವತಿಯಿಂದ ವಿಚಾರಣೆಗೆ ವಹಿಸಿ ಆದೇಶಿಸಿದೆ.
ಈ ವಿಚಾರಣೆಯನ್ನು ನಡೆಸಲು ಸಂಬಂಧಪಟ್ಟ ಇಲಾಖೆಗಳು ಸಿಐಡಿ (Criminal Investigation Department) ಬೆಂಗಳೂರು, ಸಂಸ್ಥೆಗೆ ಸಂಪೂರ್ಣ ಸಹಕಾರ ಮತ್ತು ಅವಶ್ಯಕ ಮಾಹಿತಿ /ದಾಖಲಾತಿಗಳನ್ನು ಸಹ ಒದಗಿಸುವುದು.(Criminal Investigation Department) ก่อ, ವಿಚಾರಣೆಯನ್ನು ಶೀಘ್ರುವಾಗಿ ಪೂರ್ಣಗೊಳಿಸಿ, ವಿಚಾರಣಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದು.